AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಮದುವೆ ಆಗಲಿದ್ದಾರೆ ನಟಿ ಚೈತ್ರಾ ವಾಸುದೇವನ್

Chaithra Vasudevan: ಮಾಜಿ ಬಿಗ್​ಬಾಸ್ ಸ್ಪರ್ಧಿ, ಜನಪ್ರಿಯ ಟಿವಿ ನಿರೂಪಕಿ ಚೈತ್ರಾ ವಾಸುದೇವನ್ ಮತ್ತೊಮ್ಮೆ ಮದುವೆ ಆಗುತ್ತಿದ್ದಾರೆ. ಈ ಹಿಂದೆ ಮದುವೆ ಆಗಿದ್ದ ಚೈತ್ರಾ, ದಾಂಪತ್ಯದಲ್ಲಿ ವಿರಸ ಮೂಡಿದ ಕಾರಣ ವಿಚ್ಛೇದನ ಪಡೆದುಕೊಂಡಿದ್ದರು. ಇದೀಗ ಮತ್ತೊಮ್ಮೆ ಮದುವೆ ಆಗುತ್ತಿದ್ದು, ಪ್ಯಾರಿಸ್​ನಲ್ಲಿ ನಿಂತು ಈ ವಿಷಯ ಘೋಷಣೆ ಮಾಡಿದ್ದಾರೆ.

ಎರಡನೇ ಮದುವೆ ಆಗಲಿದ್ದಾರೆ ನಟಿ ಚೈತ್ರಾ ವಾಸುದೇವನ್
Chaithra Vasudevan
ಮಂಜುನಾಥ ಸಿ.
|

Updated on:Jan 29, 2025 | 9:56 AM

Share

ಖ್ಯಾತ ಟಿವಿ ನಿರೂಪಕಕಿ, ಮಾಜಿ ಬಿಗ್​ಬಾಸ್ ಸ್ಪರ್ಧಿಯೂ ಆಗಿರುವ ಚೈತ್ರಾ ವಾಸುದೇವನ್ ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಮೊದಲ ಮದುವೆ ಬಳಿಕ ದಂಪತಿಗಳು ವಿಚ್ಛೇದನ ಪಡೆದುಕೊಂಡಿದ್ದರು. ಇದೀಗ ಚೈತ್ರಾ ವಾಸುದೇವನ್ ಎರಡನೇ ಮದುವೆ ಆಗಲಿದ್ದು, ಈ ವಿಷಯವನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಖಾತ್ರಿ ಪಡಿಸಿದ್ದಾರೆ. ಚೈತ್ರಾ ವಾಸುದೇವನ್ ಹಾಗೂ ಭಾವಿ ಪತಿ ಪ್ಯಾರಿಸ್​ನಲ್ಲಿ ಪರಸ್ಪರ ಉಂಗುರ ಬದಲಿಸಿಕೊಂಡು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ಚೈತ್ರಾ ವಾಸುದೇವನ್ ಹಾಗೂ ಅವರ ಭಾವಿ ಪತಿ ಹೃದಯದಾಕಾರದ ಉಂಗುರಗಳನ್ನು ತೊಟ್ಟು ಪ್ಯಾರಿಸ್​ನಲ್ಲಿ ಓಡಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ. ಇದರ ವಿಡಿಯೋ ಅನ್ನು ಚೈತ್ರಾ ವಾಸುದೇವನ್ ಹಂಚಿಕೊಂಡಿದ್ದಾರೆ. ಆದರೆ ಚೈತ್ರಾ, ತಾವು ಮದುವೆ ಆಗುತ್ತಿರುವ ಯುವಕನ ಮುಖವನ್ನು ವಿಡಿಯೋದಲ್ಲಿ ತೋರಿಸಿಲ್ಲ. ಚೈತ್ರಾ ಅವರನ್ನು ಮದುವೆ ಆಗುತ್ತಿರುವ ಯುವಕ ಯಾರೆಂಬುದು ಗುಟ್ಟಾಗಿಯೇ ಇದೆ. ಎರಡನೇ ಮದುವೆ ಘೋಷಣೆಗೆ ಶಾಸ್ವಿ ಶ್ರೀವತ್ಸ, ಹರ್ಷಿಕಾ ಪೂಣಚ್ಚ, ದಿವ್ಯಾ ಉರುಡುಗ, ಶ್ವೇತಾ ಚೆಂಗಪ್ಪ, ಕಾವ್ಯಾ ಗೌಡ, ಕಾವ್ಯಾ ಶೆಟ್ಟಿ ಇನ್ನೂ ಅನೇಕ ಟಿವಿ ಮತ್ತು ಸಿನಿಮಾ ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ.

ಚೈತ್ರಾ ವಾಸುದೇವನ್ ಈ ಹಿಂದೆ ಮದುವೆ ಆಗಿದ್ದರು. ಆದರೆ ದಾಂಪತ್ಯದಲ್ಲಿ ವಿರಸ ಮೂಡಿದ ಕಾರಣ ವಿಚ್ಛೇದನ ಪಡೆದುಕೊಂಡಿದ್ದರು. ಬಿಗ್​ಬಾಸ್ 7ರ ಸ್ಪರ್ಧಿ ಆಗಿದ್ದ ಚೈತ್ರಾ ವಾಸುದೇವನ್, ಜನಪ್ರಿಯ ಟಿವಿ ನಿರೂಪಕಿಯೂ ಹೌದು. ಜೊತೆಗೆ ಉದ್ಯಮಿಯೂ ಆಗಿರುವ ಚೈತ್ರಾ ವಾಸುದೇವನ್ ಇವೆಂಟ್ ಮ್ಯಾನೇಜ್​ಮೆಂಟ್ ಸಂಸ್ಥೆಯೊಂದನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಇದೀಗ ಎರಡನೇ ಮದುವೆ ಆಗುವ ಮೂಲಕ ಬಾಳಿನಲ್ಲಿ ಮತ್ತೆ ಜಂಟಿಯಾಗಲು ಚೈತ್ರಾ ಮುಂದಾಗಿದ್ದಾರೆ.

ಕಳೆದ ಕೆಲ ದಿನಗಳಿಂದಲೂ ಪ್ಯಾರಿಸ್​ನಲ್ಲಿರುವ ಚೈತ್ರಾ ವಾಸುದೇವನ್ ಅವರು ಅಲ್ಲಿ ಕೆಲ ಫೋಟೊಶೂಟ್​ಗಳನ್ನು ಮಾಡಿಸಿದ್ದಾರೆ. ಕೊನೆಗೆ ಐಫೆಲ್ ಟವರ್ ಎದುರು ನಿಂತು ತಾವು ಮದುವೆ ಆಗಲಿರುವ ವಿಷಯವ ಘೋಷಿಸಿದ್ದಾರೆ. ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿಯೂ ಈ ವಿಷಯ ಹಂಚಿಕೊಂಡಿರುವ ನಟಿ, ವಿವಿಧ ಆರೋಗ್ಯಕರ ಆಹಾರದ ಚಿತ್ರಗಳನ್ನು ಹಂಚಿಕೊಂಡು ವಧು ಆಗುತ್ತಿದ್ದೇನೆ. ತ್ವಚೆಯನ್ನು ಸುಂದರವಾಗಿಟ್ಟುಕೊಳ್ಳಲು ಇದೆಲ್ಲ ಮಾಡಬೇಕಿದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:23 am, Wed, 29 January 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!