AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರಗೆ ದತ್ತು ಮಕ್ಕಳಾದ ಹನುಮಂತ ಹಾಗೂ ಧನರಾಜ್

ಬಿಗ್ ಬಾಸ್ ಕನ್ನಡದಲ್ಲಿ ಚೈತ್ರಾ ಕುಂದಾಪುರ ಅವರು ಧನರಾಜ್ ಮತ್ತು ಹನುಮಂತ ಅವರನ್ನು ದತ್ತು ಮಕ್ಕಳು ಎಂದಿದ್ದಾರೆ. ಕಳೆದ ವಾರ ಎಲಿಮಿನೇಷನ್‌ನಿಂದ ಪಾರಾದ ನಂತರ, ಅವರು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಅವರ ತಾಯಿ-ಮಕ್ಕಳ ಬಾಂಧವ್ಯ ಬಿಗ್ ಬಾಸ್ ಮನೆಯಲ್ಲಿ ಹೇಗೆ ಮುಂದುವರಿಯುತ್ತದೆ ಎಂಬುದು ಕುತೂಹಲಕಾರಿ.

ಚೈತ್ರಾ ಕುಂದಾಪುರಗೆ ದತ್ತು ಮಕ್ಕಳಾದ ಹನುಮಂತ ಹಾಗೂ ಧನರಾಜ್
ಚೈತ್ರಾ-ಹನುಮಂತ
ರಾಜೇಶ್ ದುಗ್ಗುಮನೆ
|

Updated on: Dec 12, 2024 | 7:21 AM

Share

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರಿಗೂ ಮನರಂಜನೆ ನೀಡುತ್ತಾ ಸಾಗುತ್ತಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ಆಟ ಕೂಡ ದಿನ ಕಳೆದಂತೆ ಏಳ್ಗೆ ಕಾಣುತ್ತಿದೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಿದ್ದಾರೆ. ಈಗ ಚೈತ್ರಾ ಕುಂದಾಪುರ ಅವರು ಒಂದು ಕಾರಣಕ್ಕೆ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅದಕ್ಕೆ ಕಾರಣ ಆಗಿರೋದು ಅವರ ದತ್ತು ಮಕ್ಕಳ ವಿಚಾರ. ಬಿಗ್ ಬಾಸ್ ಮನೆಯಲ್ಲಿ ಧನರಾಜ್ ಹಾಗೂ ಹನುಮಂತ ಅವರಿಗೆ ದತ್ತು ಮಕ್ಕಳಾಗಿದ್ದಾರೆ.

ಕಳೆದ ವೀಕೆಂಡ್​ನಲ್ಲಿ ಚೈತ್ರಾ ಅವರು ಎಲಿಮಿನೇಷನ್ ಹಂತಕ್ಕೆ ಹೋಗಿದ್ದರು. ಅವರನ್ನು ಕನ್​ಫೆಷನ್​ರೂಂನಲ್ಲಿ ಕೂರಿಸಿ ಬಿಗ್ ಬಾಸ್​ನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತೋರಿಸಲಾಗುತ್ತಿತ್ತು. ಅದು ಅವರಿಗೆ ಸಾಕಷ್ಟು ಟೆನ್ಷನ್ ಕೊಟ್ಟಿತ್ತಂತೆ. ಸೇವ್ ಆಗಿ ಬಂದ ಬಳಿಕ ಚೈತ್ರಾ ಅವರು ಧನರಾಜ್ ಹಾಗೂ ಹನುಮಂತ ಬಳಿ ಈ ವಿಚಾರ ಹೇಳಿಕೊಂಡಿದ್ದರು. ‘ಹೆರಿಗೆ ನೋವು ಹೆಣ್ಣುಮಕ್ಕಳಿಗೆ ಮರುಜನ್ಮ ಎನ್ನುತ್ತಾರೆ. ಆ ನೋವು ಹೇಗಿರುತ್ತದೆ ಎಂಬುದು ಗೊತ್ತಿಲ್ಲ. ಆದರೆ, ಕನ್​ಫೆಷನ್​ ರೂಂನಲ್ಲಿ ಕುಳಿತಾಗ ಒಂದು ರೀತಿಯ ಅನುಭವ ಆಯಿತು. ಬಹುಶಃ ಆ ನೋವು ಹಾಗೆಯೇ ಇರಬಹುದು ಎಂದುಕೊಂಡೆ’ ಎಂದಿದ್ದಾರೆ ಅವರು.

‘ಆ ಹೆರಿಗೆ ನೋವಿಗೆ ಜನಿಸಿದವರು ನಾವಿಬ್ಬರು’ ಎಂದು ಧನರಾಜ್ ಅವರು ಹೇಳಿದರು. ಅಲ್ಲಿಂದ ಚೈತ್ರಾ ಅವರು ಹನುಮಂತ-ಧನರಾಜ್ ಅವರನ್ನು ಮಕ್ಕಳಂತೆ ಕಾಣುತ್ತಾ ಇದ್ದಾರೆ. ಈ ವಾರವೂ ಆ ಬಾಂಧವ್ಯ ಮುಂದುವರಿದಿದೆ. ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆಗೆ ಬರೋ ಸಾಧ್ಯತೆ ಇದೆ.

ಇದನ್ನೂ ಓದಿ: ಮುನಿಸು ಮರೆತು ಮತ್ತೆ ಒಂದಾದ ಮೋಕ್ಷಿತಾ-ಗೌತಮಿ; ಮಂಜುನ ದೂರ ಇಟ್ಟ ಜೋಡಿ

ಚೈತ್ರಾ ಒಂದು ತಂಡ ಆದರೆ, ಹನುಮಂತ ಹಾಗೂ ಧನರಾಜ್ ಮತ್ತೊಂದು ತಂಡದಲ್ಲಿ ಇದ್ದಾರೆ. ‘ಮಕ್ಕಳಾ ನೀವು ಮತ್ತೊಂದು ತಂಡದಲ್ಲಿ ಇದ್ದೀರಾ. ನಿಮ್ಮ ಅಮ್ಮ ಮತ್ತೊಂದು ತಂಡದಲ್ಲಿದ್ದಾಳೆ’ ಎಂದು ಚೈತ್ರಾ ಹೇಳಿದರು. ಅಲ್ಲಿದ್ದವರು, ‘ತಾಯಿನ ಗೆಲ್ಲಿಸೋಕೆ ಸಹಾಯ’ ಮಾಡಿ ಎಂದು ಕೋರಿದರು. ಆಗ ಚೈತ್ರಾ ಕೂಡ ನಕ್ಕರು. ಈ ವಾರ ಧನರಾಜ್, ಚೈತ್ರಾ ಹಾಗೂ ಹನುಮಂತ ನಾಮಿನೇಷನ್ ಲಿಸ್ಟ್​ನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ