AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಹೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ

ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ತಮ್ಮ ಮಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮದುವೆಗೆ ಹಣದ ಬೇಡಿಕೆ, ಅನೇಕರಿಗೆ ಮೋಸ, ಮತ್ತು ಬಿಗ್ ಬಾಸ್ ಗೆ ಹೋಗಿದ್ದ ವಿಚಾರ ಹೇಳಿಲ್ಲ ಎಂಬುದು ಆರೋಪ. ಚೈತ್ರಾ ಅವರು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಮಧ್ಯೆ, ಬಾಲಕೃಷ್ಣ ಅವರು ಮಗಳಿಗೆ ಬಿಗ್ ಬಾಸ್ ಹೋಗಿದ್ದಕ್ಕೆ ವಿಶ್ ಮಾಡಿದ್ದ ವಿಡಿಯೋ ವೈರಲ್ ಆಗಿದೆ.

ಸುಳ್ಳು ಹೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ
ಚೈತ್ರಾ-ಬಾಲಕೃಷ್ಣ
ರಾಜೇಶ್ ದುಗ್ಗುಮನೆ
|

Updated on:May 17, 2025 | 7:01 AM

Share

ಚೈತ್ರಾ ಕುಂದಾಪುರ ಬಗ್ಗೆ ಸ್ವತಃ ಅವರ ತಂದೆ ಬಾಲಕೃಷ್ಣ ನಾಯ್ಕ್ (Balakrishna Naik) ವಿವಿಧ ರೀತಿಯ ಆರೋಪ ಮಾಡಿದ್ದಾರೆ. ಮಗಳು ತಮ್ಮನ್ನು ಮದುವೆಗೆ ಕರೆದೇ ಇಲ್ಲ ಎಂಬುದು ಪ್ರಮುಖ ವಿಚಾರವಾದರೆ, ಚೈತ್ರಾ ಅನೇಕರಿಗೆ ಮೋಸ ಮಾಡಿದ್ದಾರೆ ಅನ್ನೋದು ಮತ್ತೊಂದು ಮುಖ್ಯ ಆರೋಪ. ಇನ್ನು, ಚೈತ್ರಾ ಬಿಗ್ ಬಾಸ್​ಗೆ ಹೋಗಿದ್ದ ಮಾಹಿತಿ ತಮಗೆ ಗೊತ್ತೇ ಇರಲಿಲ್ಲ ಎಂದು ಬಾಲಕೃಷ್ಣ ಅವರು ಹೇಳಿಕೊಂಡಿದ್ದರು. ಆದರೆ, ಚೈತ್ರಾ ಬಿಗ್ ಬಾಸ್​ಗೆ ಹೋದ ಸಂದರ್ಭದಲ್ಲಿ ಬಾಲಕೃಷ್ಣ ಅವರು ವಿಶ್ ಮಾಡಿದ್ದ ವಿಡಿಯೋ ಒಂದು ಈಗ ವೈರಲ್ ಆಗುತ್ತಿದೆ.

ಚೈತ್ರಾ ಬಿಗ್ ಬಾಸ್​ಗೆ ಹೋಗುವಾಗ ಅಮ್ಮನ ಜೊತೆ ಸೇರಿ ತನ್ನನ್ನು ಮನೆಯಲ್ಲಿ ಕೂಡಿಟ್ಟು ಹೋಗಿದ್ದರು ಎಂದು ಬಾಲಕೃಷ್ಣ ಅವರು ಇತ್ತೀಚೆಗೆ ಮಾಧ್ಯಮಗಳ ಎದುರು ಆರೋಪ ಹೊರಿಸಿದ್ದರು. ಇದು ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಮಗಳಾಗಿ ಈ ರೀತಿ ಮಾಡಿದ್ದು ಎಷ್ಟು ಸರಿ ಎಂಬ ನೈತಿಕ ಪ್ರಶ್ನೆ ಚೈತ್ರಾ ಎದುರು ಇಡಲಾಯಿತು. ಆದರೆ, ಚೈತ್ರಾ ಈ ವಿಚಾರವನ್ನು ಅಲ್ಲಗಳೆದಿದ್ದರು.

ಇದನ್ನೂ ಓದಿ
Image
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
Image
ಸಮಂತಾ ಹಾಗೂ ರಾಜ್ ನಡುವಿನ ವಯಸ್ಸಿನ ಅಂತರ ಇಷ್ಟೊಂದಾ?
Image
VIDEO: ಲೈವ್​ಸ್ಟ್ರೀಮ್ ಮಾಡುವಾಗಲೇ ಗುಂಡಿಕ್ಕಿ ಇನ್​ಫ್ಲುಯೆನ್ಸರ್ ಹತ್ಯೆ
Image
‘ನೀವು ಹೇಗೆ ಎಂದು ಎಲ್ಲರಿಗೂ ಗೊತ್ತು’; ಚೈತ್ರಾಗೆ ನೇರವಾಗಿ ಹೇಳಿದ ಅಭಿಮಾನಿ

ಈಗ ಚೈತ್ರಾ ಬಿಗ್ ಬಾಸ್ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಬಾಲಕೃಷ್ಣ ಅವರು ನೀಡಿದ್ದ ಸಂದರ್ಶನದ ಕ್ಲಿಪ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ‘ನಿಮ್ಮ ಮಗಳು ಬಿಗ್ ಬಾಸ್​ಗೆ ಹೋಗಿದ್ದು ಎಷ್ಟು ಖುಷಿ ಇದೆ’ ಎಂದು ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ್ದ ಅವರು, ‘ತುಂಬ ಖುಷಿ ಆಗ್ತಿದೆ. ಕಾರ್ಯಕ್ರಮ ಚೆನ್ನಾಗಿ ನಡೆಸಿಕೊಡ್ತಿದ್ದಾಳೆ. ಹಾಗೆ ನಡೆಸಿಕೊಡಲಿ’ ಎಂದು ಖುಷಿಯಿಂದ ಹಾರೈಸಿದ್ದರು. ಆದರೆ, ಈಗ ಚೈತ್ರಾ ಬಿಗ್ ಬಾಸ್ ಮನೆಗೆ ಹೋದ ವಿಚಾರವೇ ಗೊತ್ತಿರಲಿಲ್ಲ ಎನ್ನುತ್ತಿದ್ದಾರೆ.

ಇದನ್ನೂ ಓದಿ: ‘ನೀವು ಹೇಗೆ ಎಂದು ಎಲ್ಲರಿಗೂ ಗೊತ್ತು’; ಚೈತ್ರಾ ಕುಂದಾಪುರಗೆ ನೇರವಾಗಿ ಹೇಳಿದ ಅಭಿಮಾನಿ

ಚೈತ್ರಾ ಕುಂದಾಪುರ ಹಾಗೂ ಬಾಲಕೃಷ್ಣ ಮಧ್ಯೆ ಆರೋಪ-ಪ್ರತ್ಯಾರೋಪ ನಡೆಯುತ್ತಲೇ ಇದೆ. ತಂದೆಯ ಕುಡಿತದಿಂದ ತಮಗೆ ತೊಂದರೆ ಆಗಿದೆ ಎಂದಿದ್ದಾರೆ ಚೈತ್ರಾ. ತಂದೆಯಾಗಿ ಅವರು ಯಾವುದೇ ಜವಾಬ್ದಾರಿ ತೆಗೆದುಕೊಂಡಿಲ್ಲ ಎಂಬುದು ಚೈತ್ರಾ ಆರೋಪ. ಇನ್ನು, ಮದುವೆಗೆ ಐದು ಲಕ್ಷ ರೂಪಾಯಿ ಕೇಳಿದ್ದಾಗಿ ಚೈತ್ರಾ ವಿರುದ್ಧ ಬಾಲಕೃಷ್ಣ ಆರೋಪಿಸಿದ್ದಾರೆ. ಇದರಲ್ಲಿ ನಿಜ ಯಾವುದು, ಸುಳ್ಳು ಯಾವುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Sat, 17 May 25

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ