ಸುಳ್ಳು ಹೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ

ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ತಮ್ಮ ಮಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮದುವೆಗೆ ಹಣದ ಬೇಡಿಕೆ, ಅನೇಕರಿಗೆ ಮೋಸ, ಮತ್ತು ಬಿಗ್ ಬಾಸ್ ಗೆ ಹೋಗಿದ್ದ ವಿಚಾರ ಹೇಳಿಲ್ಲ ಎಂಬುದು ಆರೋಪ. ಚೈತ್ರಾ ಅವರು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಮಧ್ಯೆ, ಬಾಲಕೃಷ್ಣ ಅವರು ಮಗಳಿಗೆ ಬಿಗ್ ಬಾಸ್ ಹೋಗಿದ್ದಕ್ಕೆ ವಿಶ್ ಮಾಡಿದ್ದ ವಿಡಿಯೋ ವೈರಲ್ ಆಗಿದೆ.

ಸುಳ್ಳು ಹೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ
ಚೈತ್ರಾ-ಬಾಲಕೃಷ್ಣ

Updated on: May 17, 2025 | 7:01 AM

ಚೈತ್ರಾ ಕುಂದಾಪುರ ಬಗ್ಗೆ ಸ್ವತಃ ಅವರ ತಂದೆ ಬಾಲಕೃಷ್ಣ ನಾಯ್ಕ್ (Balakrishna Naik) ವಿವಿಧ ರೀತಿಯ ಆರೋಪ ಮಾಡಿದ್ದಾರೆ. ಮಗಳು ತಮ್ಮನ್ನು ಮದುವೆಗೆ ಕರೆದೇ ಇಲ್ಲ ಎಂಬುದು ಪ್ರಮುಖ ವಿಚಾರವಾದರೆ, ಚೈತ್ರಾ ಅನೇಕರಿಗೆ ಮೋಸ ಮಾಡಿದ್ದಾರೆ ಅನ್ನೋದು ಮತ್ತೊಂದು ಮುಖ್ಯ ಆರೋಪ. ಇನ್ನು, ಚೈತ್ರಾ ಬಿಗ್ ಬಾಸ್​ಗೆ ಹೋಗಿದ್ದ ಮಾಹಿತಿ ತಮಗೆ ಗೊತ್ತೇ ಇರಲಿಲ್ಲ ಎಂದು ಬಾಲಕೃಷ್ಣ ಅವರು ಹೇಳಿಕೊಂಡಿದ್ದರು. ಆದರೆ, ಚೈತ್ರಾ ಬಿಗ್ ಬಾಸ್​ಗೆ ಹೋದ ಸಂದರ್ಭದಲ್ಲಿ ಬಾಲಕೃಷ್ಣ ಅವರು ವಿಶ್ ಮಾಡಿದ್ದ ವಿಡಿಯೋ ಒಂದು ಈಗ ವೈರಲ್ ಆಗುತ್ತಿದೆ.

ಚೈತ್ರಾ ಬಿಗ್ ಬಾಸ್​ಗೆ ಹೋಗುವಾಗ ಅಮ್ಮನ ಜೊತೆ ಸೇರಿ ತನ್ನನ್ನು ಮನೆಯಲ್ಲಿ ಕೂಡಿಟ್ಟು ಹೋಗಿದ್ದರು ಎಂದು ಬಾಲಕೃಷ್ಣ ಅವರು ಇತ್ತೀಚೆಗೆ ಮಾಧ್ಯಮಗಳ ಎದುರು ಆರೋಪ ಹೊರಿಸಿದ್ದರು. ಇದು ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಮಗಳಾಗಿ ಈ ರೀತಿ ಮಾಡಿದ್ದು ಎಷ್ಟು ಸರಿ ಎಂಬ ನೈತಿಕ ಪ್ರಶ್ನೆ ಚೈತ್ರಾ ಎದುರು ಇಡಲಾಯಿತು. ಆದರೆ, ಚೈತ್ರಾ ಈ ವಿಚಾರವನ್ನು ಅಲ್ಲಗಳೆದಿದ್ದರು.

ಇದನ್ನೂ ಓದಿ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ಸಮಂತಾ ಹಾಗೂ ರಾಜ್ ನಡುವಿನ ವಯಸ್ಸಿನ ಅಂತರ ಇಷ್ಟೊಂದಾ?
VIDEO: ಲೈವ್​ಸ್ಟ್ರೀಮ್ ಮಾಡುವಾಗಲೇ ಗುಂಡಿಕ್ಕಿ ಇನ್​ಫ್ಲುಯೆನ್ಸರ್ ಹತ್ಯೆ
‘ನೀವು ಹೇಗೆ ಎಂದು ಎಲ್ಲರಿಗೂ ಗೊತ್ತು’; ಚೈತ್ರಾಗೆ ನೇರವಾಗಿ ಹೇಳಿದ ಅಭಿಮಾನಿ

ಈಗ ಚೈತ್ರಾ ಬಿಗ್ ಬಾಸ್ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಬಾಲಕೃಷ್ಣ ಅವರು ನೀಡಿದ್ದ ಸಂದರ್ಶನದ ಕ್ಲಿಪ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ‘ನಿಮ್ಮ ಮಗಳು ಬಿಗ್ ಬಾಸ್​ಗೆ ಹೋಗಿದ್ದು ಎಷ್ಟು ಖುಷಿ ಇದೆ’ ಎಂದು ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ್ದ ಅವರು, ‘ತುಂಬ ಖುಷಿ ಆಗ್ತಿದೆ. ಕಾರ್ಯಕ್ರಮ ಚೆನ್ನಾಗಿ ನಡೆಸಿಕೊಡ್ತಿದ್ದಾಳೆ. ಹಾಗೆ ನಡೆಸಿಕೊಡಲಿ’ ಎಂದು ಖುಷಿಯಿಂದ ಹಾರೈಸಿದ್ದರು. ಆದರೆ, ಈಗ ಚೈತ್ರಾ ಬಿಗ್ ಬಾಸ್ ಮನೆಗೆ ಹೋದ ವಿಚಾರವೇ ಗೊತ್ತಿರಲಿಲ್ಲ ಎನ್ನುತ್ತಿದ್ದಾರೆ.

ಇದನ್ನೂ ಓದಿ: ‘ನೀವು ಹೇಗೆ ಎಂದು ಎಲ್ಲರಿಗೂ ಗೊತ್ತು’; ಚೈತ್ರಾ ಕುಂದಾಪುರಗೆ ನೇರವಾಗಿ ಹೇಳಿದ ಅಭಿಮಾನಿ

ಚೈತ್ರಾ ಕುಂದಾಪುರ ಹಾಗೂ ಬಾಲಕೃಷ್ಣ ಮಧ್ಯೆ ಆರೋಪ-ಪ್ರತ್ಯಾರೋಪ ನಡೆಯುತ್ತಲೇ ಇದೆ. ತಂದೆಯ ಕುಡಿತದಿಂದ ತಮಗೆ ತೊಂದರೆ ಆಗಿದೆ ಎಂದಿದ್ದಾರೆ ಚೈತ್ರಾ. ತಂದೆಯಾಗಿ ಅವರು ಯಾವುದೇ ಜವಾಬ್ದಾರಿ ತೆಗೆದುಕೊಂಡಿಲ್ಲ ಎಂಬುದು ಚೈತ್ರಾ ಆರೋಪ. ಇನ್ನು, ಮದುವೆಗೆ ಐದು ಲಕ್ಷ ರೂಪಾಯಿ ಕೇಳಿದ್ದಾಗಿ ಚೈತ್ರಾ ವಿರುದ್ಧ ಬಾಲಕೃಷ್ಣ ಆರೋಪಿಸಿದ್ದಾರೆ. ಇದರಲ್ಲಿ ನಿಜ ಯಾವುದು, ಸುಳ್ಳು ಯಾವುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Sat, 17 May 25

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us