AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​’ನಿಂದ ನೇರವಾಗಿ ಜೈಲು ಸೇರಿದ ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಅವರು ಉದ್ಯಮಿ ಒಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸೋ ಆಮಿಷ ಒಡ್ಡಿ 5 ಕೋಟಿ ರೂಪಾಯಿ ಹಣ ಪಡೆದಿರುವ ಆರೋಪ ಹೊಂದಿದ್ದಾರೆ. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದಾರೆ. ಈಗ ಅವರು ಬಿಗ್ ಬಾಸ್​ ಮನೆಯಲ್ಲೂ ಚೈತ್ರಾ ಜೈಲು ಸೇರಿದ್ದಾರೆ.

‘ಬಿಗ್ ಬಾಸ್​’ನಿಂದ ನೇರವಾಗಿ ಜೈಲು ಸೇರಿದ ಚೈತ್ರಾ ಕುಂದಾಪುರ
ಚೈತ್ರಾ
ರಾಜೇಶ್ ದುಗ್ಗುಮನೆ
|

Updated on:Oct 19, 2024 | 7:37 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಆರಂಭದಿಂದಲೇ ಸಾಕಷ್ಟು ವಿವಾದಗಳು ಸೃಷ್ಟಿ ಆದವು. ಇದಕ್ಕೆ ಕಾರಣಗಳು ಹಲವು. ವಕೀಲ ಜಗದೀಶ್ ಅವರು ದೊಡ್ಮನೆಗೆ ತೆರಳಿ ಸಾಕಷ್ಟು ಸದ್ದು ಮಾಡಿದ್ದಾರೆ. ಅವರು ಎಲ್ಲರ ವಿರುದ್ಧಕೂಗಾಡಿದ್ದರಿಂದ, ಅವಾಚ್ಯ ಶಬ್ದಗಳ ಬಳಕೆಯಿಂದ ಹೊರ ಹೋಗಿದ್ದಾರೆ. ಈ ಕಾರಣಕ್ಕೆ ಅವರು ಹೊರ ನಡೆದಿದ್ದಾರೆ. ಜಗದೀಶ್​ನ ತಳ್ಳಿದ ಕಾರಣಕ್ಕೆ ರಂಜಿತ್ ದೊಡ್ಮನೆಯಿಂದ ಹೊರಕ್ಕೆ ಹೋಗಿದ್ದಾರೆ. ಈ ಎಲ್ಲಾ ಬೆಳವಣಿಗೆ ಬಳಿಕ ಚೈತ್ರಾ ಕುಂದಾಪುರ ಅವರು ಜೈಲು ಸೇರಿದ್ದಾರೆ. ಹಾಗಂತ ಹೊರಗಿನ ಜೈಲಲ್ಲ. ಬಿಗ್ ಬಾಸ್ ಮನೆಯಲ್ಲಿ ಇರೋ ಜೈಲು.

ಪ್ರತಿ ಬಿಗ್ ಬಾಸ್​ ಸೀಸನ್​ನಲ್ಲೂ ಜೈಲು ಇಡಲಾಗುತ್ತದೆ. ಕಳಪೆ ಕಾರಣ ನೀಡಿ ಪ್ರತಿ ವಾರ ಒಬ್ಬರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಈ ಬಾರಿ ಪ್ರಕ್ರಿಯೆಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಅಪ್ರಾಮಣಿಕ ಹಾಗೂ ಕುತಂತ್ರಿ ಯಾರು ಎಂದು ಸೂಚಿಸಬೇಕು ಮತ್ತು ಅದಕ್ಕೆ ಸೂಕ್ತ ಕಾರಣ ನೀಡಬೇಕು. ಅಂತಿಮವಾಗಿ ಯಾರ ಬಳಿ ಹೆಚ್ಚು ಹಣೆಪಟ್ಟಿ ಇರುತ್ತದೆಯೋ ಅವರು ಜೈಲು ಸೇರಬೇಕು.

ಇದರ ಅನುಸಾರ ಚೈತ್ರಾ ಕುಂದಾಪುರ ಅವರು ಅತಿ ಹೆಚ್ಚು ಹಣೆಪಟ್ಟಿ ಪಡೆದುಕೊಂಡಿದ್ದಾರೆ. ಈ ಕಾರಣಕ್ಕೆ ಅವರು ಜೈಲು ಸೇರಿದ್ದಾರೆ. ಅವರು ಜೈಲಿಗೆ ಕಾಲಿಡುವಾಗ ಖುಷಿಯಿಂದಲೇ ತೆರಳಿದ್ದಾರೆ. ‘ನನಗೆ ಖಾಸಗಿತನ ಸಿಗುತ್ತದೆ. ಇಲ್ಲೆಲ್ಲ ನಿಮ್ಮ ಮುಖ ನೋಡಿ ಸಾಕಾಗಿದೆ’ ಎಂದರು ಅವರು. ಅವರಿಗೆ ಜೈಲಿಗೆ ಹೋಗುತ್ತಿರುವುದಕ್ಕೆ ಯಾವುದೇ ಬೇಸರ ಇಲ್ಲ.

ಇದನ್ನೂ ಓದಿ: ಮಾತಿನ ಭರಾಟೆಯಲ್ಲಿ ಕೇಳಿಸಿಕೊಳ್ಳಲು ಸೋಲುತ್ತಿರುವ ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಅವರು ಉದ್ಯಮಿ ಒಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸೋ ಆಮಿಷ ಒಡ್ಡಿ 5 ಕೋಟಿ ರೂಪಾಯಿ ಹಣ ಪಡೆದಿರುವ ಆರೋಪ ಹೊಂದಿದ್ದಾರೆ. ಈ ಆರೋಪವನ್ನು ಅವರು ತಳ್ಳಿ ಹಾಕಿದ್ದಾರೆ. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದಾರೆ. ಈಗ ಬಿಗ್ ಬಾಸ್ ಮನೆಯೂ ಜೈಲಿನ ಫೀಲ್ ನೀಡಿತೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:13 am, Sat, 19 October 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ