AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಹೇಗೆ ಎಂದು ಎಲ್ಲರಿಗೂ ಗೊತ್ತು’; ಚೈತ್ರಾ ಕುಂದಾಪುರಗೆ ನೇರವಾಗಿ ಹೇಳಿದ ಅಭಿಮಾನಿ

ಚೈತ್ರಾ ಕುಂದಾಪುರ ಅವರ ಮೇಲೆ ತಂದೆ ಬಾಲಕೃಷ್ಣ ನಾಯ್ಕ್ ಮೋಸದ ಆರೋಪ ಹೊರಿಸಿದ್ದಾರೆ. ವಿವಾಹದ ಬಗ್ಗೆಯೂ ವಾಗ್ವಾದ ನಡೆದಿದೆ. ಚೈತ್ರಾ ತಂದೆಯನ್ನು ಕುಡುಕ ಎಂದು ಕರೆದು ತಿರುಗೇಟು ನೀಡಿದ್ದಾರೆ. ಅಭಿಮಾನಿಗಳು ಚೈತ್ರಾ ಅವರಿಗೆ ಬೆಂಬಲ ನೀಡುತ್ತಿದ್ದಾರೆ ಮತ್ತು ಅವರ ಸಂದೇಶಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ನೀವು ಹೇಗೆ ಎಂದು ಎಲ್ಲರಿಗೂ ಗೊತ್ತು’; ಚೈತ್ರಾ ಕುಂದಾಪುರಗೆ ನೇರವಾಗಿ ಹೇಳಿದ ಅಭಿಮಾನಿ
ಚೈತ್ರಾ
ರಾಜೇಶ್ ದುಗ್ಗುಮನೆ
|

Updated on: May 16, 2025 | 6:58 AM

Share

ಚೈತ್ರಾ ಕುಂದಾಪುರ (Chaitra Kundapura) ಅವರು ತಂದೆಯಿಂದಲೇ ಮೋಸದ ಆರೋಪ ಹೊತ್ತಿದ್ದಾರೆ. ಮಗಳನ್ನು ವಂಚಕಿ ಎಂದು ಕರೆದಿರುವ ತಂದೆ ಬಾಲಕೃಷ್ಣ ನಾಯ್ಕ್ ಅವರು, ಮಗಳು ತನ್ನನ್ನು ವಿವಾಹಕ್ಕೂ ಕರೆದಿಲ್ಲ ಎಂದು ನೇರವಾಗಿ ಆರೋಪಿಸಿದ್ದಾರೆ. ತಂದೆ ಆರೋಪಕ್ಕೆ ಚೈತ್ರಾ ಪ್ರತಿಕ್ರಿಯೆ ನೀಡಿದ್ದಾರೆ. ಚೈತ್ರಾ ತಾಯಿ ಕೂಡ ಮಗಳ ಪರ ಬ್ಯಾಟ್ ಬೀಸಿದ್ದಾರೆ. ಈ ಮಧ್ಯೆ ಅಭಿಮಾನಿಗಳು ಚೈತ್ರಾಗೆ ಮೆಸೇಜ್ ಮಾಡಿ ಬೆಂಬಲ ನೀಡುತ್ತಿದ್ದಾರೆ. ಈ ಸ್ಕ್ರಿನ್​​ಶಾಟ್​ಗಳನ್ನು ಚೈತ್ರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಅವರು ಈ ಮೊದಲು ವಂಚನೆ ಆರೋಪ ಹೊತ್ತು ಜೈಲು ಸೇರಿದ್ದರು. ಇದಾಗಿ ಸರಿಯಾದ ಒಂದು ವರ್ಷಗಳ ಬಳಿಕ ಅವರಿಗೆ ಬಿಗ್ ಬಾಸ್ ಆಫರ್ ಬಂತು. ಈ ಆಫರ್​ನ ಒಪ್ಪಿ ಅವರು ಸ್ಪರ್ಧಿಸಿದರು. ಅಲ್ಲಿಂದ ಚೈತ್ರಾ ಇಮೇಜ್ ಬದಲಾಯಿತು. ಅವರ ಬಗ್ಗೆ ಜನರಿಗೆ ಪಾಸಿಟಿವ್ ಅಭಿಪ್ರಾಯ ಬಂದಿದೆ. ಆದರೆ, ತಂದೆ ಮಾತ್ರ ಮಗಳನ್ನು ನಂಬುತ್ತಿಲ್ಲ. ಅವರು ಮೋಸಗಾರ್ತಿ ಎನ್ನುವ ಆರೋಪ ಹೊರಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಚೈತ್ರಾ, ತಂದೆ ಕುಡುಕ ಎಂದು ಕರೆದಿದ್ದಾರೆ. ಹೆತ್ತು ಮಕ್ಕಳನ್ನು ಸಾಕಗದೇ ಕುಡಿದುಕೊಂಡು, ಕ್ವಾಟರ್ ಕೊಡಿಸಿದವರ ಪರ ಮಾತನಾಡಿಕೊಂಡಿರುತ್ತಾರೆ ಎಂದು ಚೈತ್ರಾ ತಿರುಗೇಟು ನೀಡಿದ್ದಾರೆ. ಕುಡಿಯೋದು ನಿಜವೇ ಆದಲ್ಲಿ, ವೈದ್ಯಕೀಯ ಪರೀಕ್ಷೆ ನಡೆಯಲಿ ಎಂದು ಬಾಲಕೃಷ್ಣ ಕೂಡ ಸವಾಲು ಹಾಕಿದ್ದಾರೆ. ಈ ರೀತಿ ಆರೋಪ-ಪ್ರತ್ಯಾರೋಪ ಮುಂದುವರಿದಿದೆ. ಈಗ ಚೈತ್ರಾ ಅವರನ್ನು ಅಭಿಮಾನಿಗಳು ಬೆಂಬಲಿಸುತ್ತಿದ್ದಾರೆ.

ಇದನ್ನೂ ಓದಿ
Image
ಮಾಧುರಿ ದೀಕ್ಷಿತ್ ರಿಯಾಲಿಟಿ ಶೋಗೆ ಪಡೆಯುತ್ತಾರೆ 25 ಕೋಟಿ ರೂಪಾಯಿ
Image
17ನೇ ವಯಸ್ಸಿಗೆ ನಟನೆ; ಸಲ್ಲುಗಿಂತ ಹೆಚ್ಚು ಸಂಭಾವನೆ ಪಡೆದ ಮಾಧುರಿ
Image
ಅಂಗಾಂಗ ದಾನ ಮಾಡುವ ಪ್ರತಿಜ್ಞೆ ಮಾಡಿದ ರಕ್ಷಕ್ ಬುಲೆಟ್; ತಂದೆಯೇ ಕಾರಣ
Image
ಸಿನಿಮಾ ರಂಗದ ಹರಿಕಾರ ದಾದಾಸಾಹೇಬ್ ಫಾಲ್ಕೆ ಬಯೋಪಿಕ್​ನಲ್ಲಿ ಜೂ.ಎನ್​ಟಿಆರ್?

ಇದನ್ನೂ ಓದಿ: ‘ಎರಡು ಕ್ವಾಟರ್ ಕೊಡಿಸಿದರೆ ಯಾರು ಬೇಕಾದರೂ ಒಳ್ಳೆಯವನು ಎನ್ನುತ್ತಾನೆ’; ತಂದೆ ಆರೋಪಕ್ಕೆ ಚೈತ್ರಾ ತಿರುಗೇಟು

ಚೈತ್ರಾ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಒಂದಷ್ಟು ಸಂದೇಶಗಳು ಬಂದಿವೆ. ಅದರ ಸ್ಕ್ರಿನ್​ಶಾಟ್​ನ ಚೈತ್ರಾ ಹಂಚಿಕೊಂಡಿದ್ದಾರೆ. ‘ಅಕ್ಕ ನಾನು ಕುಂದಾಪುರದವಳೇ. ನೀವು ಹೇಗೆ, ನಿಮ್ಮನೆಯವರು ಹೇಗೆ ಎಂದು ಎಲ್ಲರಿಗೂ ಗೊತ್ತಿದೆ. ನಿಮ್ಮ ತಂದೆ ಹೇಗೆ ಎಂದು ನಿಮ್ಮ ಊರಿನವರಿಗೂ ಗೊತ್ತಿದೆ. ಸೋಶಿಯಲ್ ಮೀಡಿಯಾದವರಿಗೆ ನಿಮ್ಮ ತಂದೆ ಬಗ್ಗೆ ಗೊತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಸಾವಿರ ಮಾತನಾಡುತ್ತಾರೆ. ಎಲ್ಲೋ ಕುಳಿತುಕೊಂಡು ಏನೋ ಬರೆದು ಹಾಕ್ತಾರೆ. ಹಾಗಂತ ನೀವು ಸರಿ ಇಲ್ಲ ಅಂತ ಅರ್ಥ ಅಲ್ಲ. ಇಗಷ್ಟೇ ಮದುವೆ ಆಗಿದ್ದೀರಾ, ಖುಷಿಯಿಂದ ಇರಿ. ನಿಮ್ಮ ತಂದೆ ಕುಡುಕ ಅನ್ನೋದು ಸೋಶಿಯಲ್ ಮೀಡಿಯಾದವರಿಗೆ ಗೊತ್ತಿಲ್ಲ. ಆದರೆ, ನಿಮ್ಮ ಊರಿನವರಿಗೆ ಗೊತ್ತು’ ಎಂದು ಅಭಿಮಾನಿಯೊಬ್ಬರು ಚೈತ್ರಾಗೆ ಸಂದೇಶ ಕಳುಹಿಸಿದ್ದಾರೆ. ಈ ರೀತಿಯ ಮೆಸೇಜ್​ನ ಚೈತ್ರಾ ಶೇರ್ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ