AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊದಿನಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡ ಚೈತ್ರಾ; ಇದೆಂಥಾ ವಿಚಿತ್ರ ವರ್ತನೆ

ಸಾಮಾನ್ಯವಾಗಿ ಊದಿನ ಕಡ್ಡಿ ಹಚ್ಚಿ ಗಂಟೆ ತೂಗುತ್ತಾ ದೇವರಿಗೆ ಪೂಜೆ ಮಾಡೋದು ಸಾಮಾನ್ಯ. ಆದರೆ, ಚೈತ್ರಾ ಹಾಗಲ್ಲ. ಊದಿನಕಡ್ಡಿ ಹಚ್ಚಿದ ಅವರು ಗಂಟೆ ತೂಗುತ್ತಾ ತಮಗೆ ತಾವೇ ಪೂಜೆ ಮಾಡಿಕೊಂಡರು. ಇದು ಅನೇಕರಿಗೆ ಶಾಕಿಂಗ್ ಎನಿಸಿದೆ.

ಊದಿನಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡ ಚೈತ್ರಾ; ಇದೆಂಥಾ ವಿಚಿತ್ರ ವರ್ತನೆ
ಚೈತ್ರಾ
ರಾಜೇಶ್ ದುಗ್ಗುಮನೆ
|

Updated on: Nov 07, 2024 | 6:50 AM

Share

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಹೊರಗೆ ಅವರ ಬಗ್ಗೆ ಇದ್ದ ನೆಗೆಟಿವ್ ಟಾಕ್​ ಸ್ವಲ್ಪ ಕಡಿಮೆ ಆಗಿದೆ. ಅವರ ಆಟ ಕೆಲವರಿಗೆ ಇಷ್ಟ ಆಗುತ್ತಿದೆ. ಈ ಮಧ್ಯೆ ಅವರು ಕೆಲವು ವಿಚಿತ್ರ ವರ್ತನೆಗಳಿಂದ ಗಮನ ಸೆಳೆಯುತ್ತಾ ಇದ್ದಾರೆ. ಈಗ ಅವರು ಊದಿನ ಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಮನೆ ಮಂದಿ ಶಾಕ್​ಗೆ ಒಳಗಾಗಿದ್ದಾರೆ. ಶಿಶಿರ್​ ಅಂತೂ ಚೈತ್ರಾಗೆ ಏನೋ ಆಯಿತು ಎಂಬ ರೀತಿಯಲ್ಲಿ ನೋಡುತ್ತಿದ್ದರು. ಅವರು ದೃಷ್ಟಿ ತೆಗೆದುಕೊಂಡಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಚೈತ್ರಾ ಅವರು ಹೊರಗೆ ವಿವಾದ ಮಾಡಿಕೊಂಡು ಸುದ್ದಿ ಆದವರು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಕುಂದಾಪುರದ ಉದ್ಯಮಿಯಿಂದ 5 ಕೋಟಿ ರೂಪಾಯಿ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಚೈತ್ರಾ ಜೈಲು ಸೇರಿದ್ದರು. ಅವರು ಕಳೆದ ವರ್ಷ ಜೈಲಿನಿಂದ ಬಿಡುಗಡೆ ಆದರು. ಈಗ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ತಮ್ಮ ಆಟವನ್ನು ಅವರು ಮುಂದುವರಿಸಿಕೊಂಡು ಹೋಗಿದ್ದಾರೆ. ಈ ಮಧ್ಯೆ ಅವರು ವಿಚಿತ್ರ ವರ್ತನೆಯಿಂದ ಗಮನ ಸೆಳೆಯುತ್ತಿದ್ದಾರೆ.

ಸಾಮಾನ್ಯವಾಗಿ ಊದಿನ ಕಡ್ಡಿ ಹಚ್ಚಿ ಗಂಟೆ ತೂಗುತ್ತಾ ದೇವರಿಗೆ ಪೂಜೆ ಮಾಡೋದು ಸಾಮಾನ್ಯ. ಆದರೆ, ಚೈತ್ರಾ ಹಾಗಲ್ಲ. ಊದಿನಕಡ್ಡಿ ಹಚ್ಚಿದ ಅವರು ಗಂಟೆ ತೂಗುತ್ತಾ ತಮಗೆ ತಾವೇ ಪೂಜೆ ಮಾಡಿಕೊಂಡರು. ಇದನ್ನು ಶಿಶಿರ್ ಅವರು ಒಂದು ಕಡೆ ನಿಂತು ನೋಡುತ್ತಾ ಇದ್ದರು. ಅವರು ಇದನ್ನು ನೋಡಿ ಶಾಕ್ ಆದಂತೆ ಇತ್ತು.

ಇದನ್ನೂ ಓದಿ: ‘ನಿಮ್ಮ ನಿಯತ್ತು ನೋಡಬೇಕಿತ್ತು’; ಹನುಮಂತ ವಿರುದ್ಧ ಸಿಡಿದೆದ್ದ ಚೈತ್ರಾ ಕುಂದಾಪುರ

ಚೈತ್ರಾ ಅವರು ಈ ಮೊದಲು ಈ ರೀತಿ ಮಾಡಿದ್ದರೋ ಅಥವಾ ಇದನ್ನು ತೋರಿಸಿದ್ದು ಇದೇ ಮೊದಲೋ ಎಂಬುದು ಗೊತ್ತಿಲ್ಲ. ಒಟ್ಟಾರೆ ಅವರ ವಿಚಿತ್ರ ವರ್ತನೆ ಗಮನ ಸೆಳೆದಿದ್ದಂತೂ ನಿಜ. ಈ ವಿಚಾರ ಭಾನುವಾರ ಚರ್ಚೆ ಆಗುವ ಸಾಧ್ಯತೆ ಇದೆ. ಇದರ ಮೇಲೆ ಸುದೀಪ್ ಅವರು ಹಾಸ್ಯ ಮಾಡಿದರೂ ಮಾಡಬಹುದು. ಈ ರೀತಿ ಮಾಡುವುದರ ಹಿಂದೆ ಏನಾದರೂ ಒಳ್ಳೆಯ ಉದ್ದೇಶ ಇದೆಯೇ ಎಂಬುದನ್ನು ಚೈತ್ರಾ ಅವರೇ ಹೇಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ