AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊದಿನಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡ ಚೈತ್ರಾ; ಇದೆಂಥಾ ವಿಚಿತ್ರ ವರ್ತನೆ

ಸಾಮಾನ್ಯವಾಗಿ ಊದಿನ ಕಡ್ಡಿ ಹಚ್ಚಿ ಗಂಟೆ ತೂಗುತ್ತಾ ದೇವರಿಗೆ ಪೂಜೆ ಮಾಡೋದು ಸಾಮಾನ್ಯ. ಆದರೆ, ಚೈತ್ರಾ ಹಾಗಲ್ಲ. ಊದಿನಕಡ್ಡಿ ಹಚ್ಚಿದ ಅವರು ಗಂಟೆ ತೂಗುತ್ತಾ ತಮಗೆ ತಾವೇ ಪೂಜೆ ಮಾಡಿಕೊಂಡರು. ಇದು ಅನೇಕರಿಗೆ ಶಾಕಿಂಗ್ ಎನಿಸಿದೆ.

ಊದಿನಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡ ಚೈತ್ರಾ; ಇದೆಂಥಾ ವಿಚಿತ್ರ ವರ್ತನೆ
ಚೈತ್ರಾ
ರಾಜೇಶ್ ದುಗ್ಗುಮನೆ
|

Updated on: Nov 07, 2024 | 6:50 AM

Share

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಹೊರಗೆ ಅವರ ಬಗ್ಗೆ ಇದ್ದ ನೆಗೆಟಿವ್ ಟಾಕ್​ ಸ್ವಲ್ಪ ಕಡಿಮೆ ಆಗಿದೆ. ಅವರ ಆಟ ಕೆಲವರಿಗೆ ಇಷ್ಟ ಆಗುತ್ತಿದೆ. ಈ ಮಧ್ಯೆ ಅವರು ಕೆಲವು ವಿಚಿತ್ರ ವರ್ತನೆಗಳಿಂದ ಗಮನ ಸೆಳೆಯುತ್ತಾ ಇದ್ದಾರೆ. ಈಗ ಅವರು ಊದಿನ ಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಮನೆ ಮಂದಿ ಶಾಕ್​ಗೆ ಒಳಗಾಗಿದ್ದಾರೆ. ಶಿಶಿರ್​ ಅಂತೂ ಚೈತ್ರಾಗೆ ಏನೋ ಆಯಿತು ಎಂಬ ರೀತಿಯಲ್ಲಿ ನೋಡುತ್ತಿದ್ದರು. ಅವರು ದೃಷ್ಟಿ ತೆಗೆದುಕೊಂಡಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಚೈತ್ರಾ ಅವರು ಹೊರಗೆ ವಿವಾದ ಮಾಡಿಕೊಂಡು ಸುದ್ದಿ ಆದವರು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಕುಂದಾಪುರದ ಉದ್ಯಮಿಯಿಂದ 5 ಕೋಟಿ ರೂಪಾಯಿ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಚೈತ್ರಾ ಜೈಲು ಸೇರಿದ್ದರು. ಅವರು ಕಳೆದ ವರ್ಷ ಜೈಲಿನಿಂದ ಬಿಡುಗಡೆ ಆದರು. ಈಗ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ತಮ್ಮ ಆಟವನ್ನು ಅವರು ಮುಂದುವರಿಸಿಕೊಂಡು ಹೋಗಿದ್ದಾರೆ. ಈ ಮಧ್ಯೆ ಅವರು ವಿಚಿತ್ರ ವರ್ತನೆಯಿಂದ ಗಮನ ಸೆಳೆಯುತ್ತಿದ್ದಾರೆ.

ಸಾಮಾನ್ಯವಾಗಿ ಊದಿನ ಕಡ್ಡಿ ಹಚ್ಚಿ ಗಂಟೆ ತೂಗುತ್ತಾ ದೇವರಿಗೆ ಪೂಜೆ ಮಾಡೋದು ಸಾಮಾನ್ಯ. ಆದರೆ, ಚೈತ್ರಾ ಹಾಗಲ್ಲ. ಊದಿನಕಡ್ಡಿ ಹಚ್ಚಿದ ಅವರು ಗಂಟೆ ತೂಗುತ್ತಾ ತಮಗೆ ತಾವೇ ಪೂಜೆ ಮಾಡಿಕೊಂಡರು. ಇದನ್ನು ಶಿಶಿರ್ ಅವರು ಒಂದು ಕಡೆ ನಿಂತು ನೋಡುತ್ತಾ ಇದ್ದರು. ಅವರು ಇದನ್ನು ನೋಡಿ ಶಾಕ್ ಆದಂತೆ ಇತ್ತು.

ಇದನ್ನೂ ಓದಿ: ‘ನಿಮ್ಮ ನಿಯತ್ತು ನೋಡಬೇಕಿತ್ತು’; ಹನುಮಂತ ವಿರುದ್ಧ ಸಿಡಿದೆದ್ದ ಚೈತ್ರಾ ಕುಂದಾಪುರ

ಚೈತ್ರಾ ಅವರು ಈ ಮೊದಲು ಈ ರೀತಿ ಮಾಡಿದ್ದರೋ ಅಥವಾ ಇದನ್ನು ತೋರಿಸಿದ್ದು ಇದೇ ಮೊದಲೋ ಎಂಬುದು ಗೊತ್ತಿಲ್ಲ. ಒಟ್ಟಾರೆ ಅವರ ವಿಚಿತ್ರ ವರ್ತನೆ ಗಮನ ಸೆಳೆದಿದ್ದಂತೂ ನಿಜ. ಈ ವಿಚಾರ ಭಾನುವಾರ ಚರ್ಚೆ ಆಗುವ ಸಾಧ್ಯತೆ ಇದೆ. ಇದರ ಮೇಲೆ ಸುದೀಪ್ ಅವರು ಹಾಸ್ಯ ಮಾಡಿದರೂ ಮಾಡಬಹುದು. ಈ ರೀತಿ ಮಾಡುವುದರ ಹಿಂದೆ ಏನಾದರೂ ಒಳ್ಳೆಯ ಉದ್ದೇಶ ಇದೆಯೇ ಎಂಬುದನ್ನು ಚೈತ್ರಾ ಅವರೇ ಹೇಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ