AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊದಿನಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡ ಚೈತ್ರಾ; ಇದೆಂಥಾ ವಿಚಿತ್ರ ವರ್ತನೆ

ಸಾಮಾನ್ಯವಾಗಿ ಊದಿನ ಕಡ್ಡಿ ಹಚ್ಚಿ ಗಂಟೆ ತೂಗುತ್ತಾ ದೇವರಿಗೆ ಪೂಜೆ ಮಾಡೋದು ಸಾಮಾನ್ಯ. ಆದರೆ, ಚೈತ್ರಾ ಹಾಗಲ್ಲ. ಊದಿನಕಡ್ಡಿ ಹಚ್ಚಿದ ಅವರು ಗಂಟೆ ತೂಗುತ್ತಾ ತಮಗೆ ತಾವೇ ಪೂಜೆ ಮಾಡಿಕೊಂಡರು. ಇದು ಅನೇಕರಿಗೆ ಶಾಕಿಂಗ್ ಎನಿಸಿದೆ.

ಊದಿನಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡ ಚೈತ್ರಾ; ಇದೆಂಥಾ ವಿಚಿತ್ರ ವರ್ತನೆ
ಚೈತ್ರಾ
ರಾಜೇಶ್ ದುಗ್ಗುಮನೆ
|

Updated on: Nov 07, 2024 | 6:50 AM

Share

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಹೊರಗೆ ಅವರ ಬಗ್ಗೆ ಇದ್ದ ನೆಗೆಟಿವ್ ಟಾಕ್​ ಸ್ವಲ್ಪ ಕಡಿಮೆ ಆಗಿದೆ. ಅವರ ಆಟ ಕೆಲವರಿಗೆ ಇಷ್ಟ ಆಗುತ್ತಿದೆ. ಈ ಮಧ್ಯೆ ಅವರು ಕೆಲವು ವಿಚಿತ್ರ ವರ್ತನೆಗಳಿಂದ ಗಮನ ಸೆಳೆಯುತ್ತಾ ಇದ್ದಾರೆ. ಈಗ ಅವರು ಊದಿನ ಕಡ್ಡಿಯಿಂದ ತಮಗೆ ತಾವೇ ಪೂಜೆ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಮನೆ ಮಂದಿ ಶಾಕ್​ಗೆ ಒಳಗಾಗಿದ್ದಾರೆ. ಶಿಶಿರ್​ ಅಂತೂ ಚೈತ್ರಾಗೆ ಏನೋ ಆಯಿತು ಎಂಬ ರೀತಿಯಲ್ಲಿ ನೋಡುತ್ತಿದ್ದರು. ಅವರು ದೃಷ್ಟಿ ತೆಗೆದುಕೊಂಡಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಚೈತ್ರಾ ಅವರು ಹೊರಗೆ ವಿವಾದ ಮಾಡಿಕೊಂಡು ಸುದ್ದಿ ಆದವರು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಕುಂದಾಪುರದ ಉದ್ಯಮಿಯಿಂದ 5 ಕೋಟಿ ರೂಪಾಯಿ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಚೈತ್ರಾ ಜೈಲು ಸೇರಿದ್ದರು. ಅವರು ಕಳೆದ ವರ್ಷ ಜೈಲಿನಿಂದ ಬಿಡುಗಡೆ ಆದರು. ಈಗ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ತಮ್ಮ ಆಟವನ್ನು ಅವರು ಮುಂದುವರಿಸಿಕೊಂಡು ಹೋಗಿದ್ದಾರೆ. ಈ ಮಧ್ಯೆ ಅವರು ವಿಚಿತ್ರ ವರ್ತನೆಯಿಂದ ಗಮನ ಸೆಳೆಯುತ್ತಿದ್ದಾರೆ.

ಸಾಮಾನ್ಯವಾಗಿ ಊದಿನ ಕಡ್ಡಿ ಹಚ್ಚಿ ಗಂಟೆ ತೂಗುತ್ತಾ ದೇವರಿಗೆ ಪೂಜೆ ಮಾಡೋದು ಸಾಮಾನ್ಯ. ಆದರೆ, ಚೈತ್ರಾ ಹಾಗಲ್ಲ. ಊದಿನಕಡ್ಡಿ ಹಚ್ಚಿದ ಅವರು ಗಂಟೆ ತೂಗುತ್ತಾ ತಮಗೆ ತಾವೇ ಪೂಜೆ ಮಾಡಿಕೊಂಡರು. ಇದನ್ನು ಶಿಶಿರ್ ಅವರು ಒಂದು ಕಡೆ ನಿಂತು ನೋಡುತ್ತಾ ಇದ್ದರು. ಅವರು ಇದನ್ನು ನೋಡಿ ಶಾಕ್ ಆದಂತೆ ಇತ್ತು.

ಇದನ್ನೂ ಓದಿ: ‘ನಿಮ್ಮ ನಿಯತ್ತು ನೋಡಬೇಕಿತ್ತು’; ಹನುಮಂತ ವಿರುದ್ಧ ಸಿಡಿದೆದ್ದ ಚೈತ್ರಾ ಕುಂದಾಪುರ

ಚೈತ್ರಾ ಅವರು ಈ ಮೊದಲು ಈ ರೀತಿ ಮಾಡಿದ್ದರೋ ಅಥವಾ ಇದನ್ನು ತೋರಿಸಿದ್ದು ಇದೇ ಮೊದಲೋ ಎಂಬುದು ಗೊತ್ತಿಲ್ಲ. ಒಟ್ಟಾರೆ ಅವರ ವಿಚಿತ್ರ ವರ್ತನೆ ಗಮನ ಸೆಳೆದಿದ್ದಂತೂ ನಿಜ. ಈ ವಿಚಾರ ಭಾನುವಾರ ಚರ್ಚೆ ಆಗುವ ಸಾಧ್ಯತೆ ಇದೆ. ಇದರ ಮೇಲೆ ಸುದೀಪ್ ಅವರು ಹಾಸ್ಯ ಮಾಡಿದರೂ ಮಾಡಬಹುದು. ಈ ರೀತಿ ಮಾಡುವುದರ ಹಿಂದೆ ಏನಾದರೂ ಒಳ್ಳೆಯ ಉದ್ದೇಶ ಇದೆಯೇ ಎಂಬುದನ್ನು ಚೈತ್ರಾ ಅವರೇ ಹೇಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ