AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ’; ಚೈತ್ರಾ ಕುಂದಾಪುರ

ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್​ಗೆ ಹೇಳಿದ್ದರು. ಈಗ ಅವರು ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ.

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ’; ಚೈತ್ರಾ ಕುಂದಾಪುರ
ಚೈತ್ರಾ
Follow us
ರಾಜೇಶ್ ದುಗ್ಗುಮನೆ
|

Updated on:Oct 22, 2024 | 7:31 AM

ಚೈತ್ರಾ ಕುಂದಾಪುರ ಅವರು ಕೇಸ್ ಒಂದರಲ್ಲಿ ಜೈಲಿಗೆ ಹೋಗಿದ್ದರು. ಮೊದಲು ಅವರನ್ನು ವಾಗ್ಮಿ ಎಂದು ನೋಡುತ್ತಿದ್ದರು. ಈ ಪ್ರಕರಣದ ಬಳಿಕ ಅವರ ಮೇಲಿದ್ದ ಗೌರವ ಕಡಿಮೆ ಆಗಿತ್ತು. ಈಗ ಬಿಗ್ ಬಾಸ್ ನೋಡುತ್ತಿರುವವರಿಗೆ ಅವರ ಮೇಲಿದ್ದ ಭಾವನೆ ನಿಧಾನವಾಗಿ ಬದಲಾಗುತ್ತಿದೆ. ಹೀಗಿರುವಾಗಲೇ ಅವರು ಒಂದು ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ಚೈತ್ರಾ ಕುಂದಾಪುರಗೆ ಮದುವೆ ಫಿಕ್ಸ್ ಆಗಿದೆಯಂತೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ.

‘ಬಿಗ್ ಬಾಸ್’ ಒಳಗೆ ಹೋದಾಗ ಕೆಲವರ ಮಧ್ಯೆ ಆಪ್ತತೆ ಬೆಳೆಯುತ್ತದೆ. ಇದನ್ನು ಪ್ರೀತಿ ಎಂದು ಬಿಂಬಿಸುವ ಕೆಲಸ ಆಗುತ್ತದೆ. ಇದು ಕೆಲವರಿಗೆ ಇಷ್ಟ ಆದರೆ, ಇನ್ನೂ ಕೆಲವರಿಗೆ ಇಷ್ಟ ಆಗುವುದಿಲ್ಲ. ಚೈತ್ರಾ ಕುಂದಾಪುರಗೆ ಈ ವಿಚಾರದಲ್ಲಿ ನಂಬಿಕೆ ಇಲ್ಲ. ತಮ್ಮ ವಿಚಾರದಲ್ಲಿ ಯಾರಾದರೂ ಕಥೆ ಕಟ್ಟೋಕೆ ಬಂದರೆ ಸರಿ ಇರಲ್ಲ ಎಂದು ಅವರು ಹೇಳಿದ್ದಾರೆ.

ಚೈತ್ರಾ, ಹಂಸಾ ಹಾಗೂ ಮಾನಸಾ ಒಂದು ಕಡೆ ಕುಳಿತು ಮಾತನಾಡುತ್ತಿದ್ದರು. ‘ನಂದು, ರಂಜಿತ್ ಹಾಗೂ ತ್ರಿವಿಕ್ರಂದು ಲವ್​ಸ್ಟೋರಿ ಎಂದು ಸುರೇಶ್ ಹೇಳಿಕೆ ಕೊಟ್ಟರು. ಹೀಗೆಲ್ಲ ಹೇಳಿದ್ರೆ ಕಷ್ಟ ಆಗುತ್ತದೆ. ಅವರ ಜೊತೆ ಯಾಕೆ ಕ್ಲೋಸ್ ಆದೆ ಎಂದರೆ ಅವರು ಯಾರ ಬಗ್ಗೆಯೂ ಮಾತನಾಡಲ್ಲ. ಆದರೆ ಸುರೇಶ್ ಜೊತೆ ಕುಳಿತರೆ ನೆಗೆಟಿವ್ ವೈಬ್ಸ್ ಜಾಸ್ತಿ. ಈ ಕಾರಣಕ್ಕೆ ರಂಜಿತ್ ಹಾಗೂ ತ್ರಿವಿಕ್ರಂ ಜೊತೆ ಕ್ಲೋಸ್ ಆಗಿದ್ದೇನೆ’ ಎಂದು ಹಂಸಾ ಸ್ಪಷ್ಟನೆ ಕೊಟ್ಟರು.

ಇದನ್ನೂ ಓದಿ: ‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ

‘ನಾನು ವಿಕ್ಕಿ ಜೊತೆ ಕ್ಲೋಸ್ ಆಗಿದ್ದೇನೆ ಎಂದು ಸುರೇಶ್​ ಅಣ್ಣ ಹೆಳುತ್ತಲೇ ಇದ್ದಾರೆ. ನನ್ನ ವಿಚಾರದಲ್ಲಿ ಯಾರಾದರೂ ಲವ್​​ಸ್ಟೋರಿ ಶುರು ಮಾಡಿದರೆ ಮೆಟ್ಟು​ ತೆಗೆದುಕೊಂಡು ಹೊಡೆಯುತ್ತೇನೆ. ಹೊರಗೆ ಹೋದರೂ ತೊಂದರೆ ಇಲ್ಲ. ನನ್ನ ಕ್ಯಾರೆಕ್ಟರ್​​ಗೆ ಯಾರೂ ಕಳಂಕ ತರಬಾರದು ಎಂದು ನಾನು ಬಯಸುತ್ತೇನೆ. ಮದುವೆ ಫಿಕ್ಸ್​ ಮಾಡಿಕೊಂಡು ಬಂದಿದ್ದೇನೆ. ಯಾರ ಜೊತೆಯೂ ಸಂಬಂಧ ಕಟ್ಟೋದು ಇಟ್ಟುಕೊಳ್ಳಬೇಡಿ’ ಎಂದರು ಚೈತ್ರಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:31 am, Tue, 22 October 24

ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು