AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ’; ಚೈತ್ರಾ ಕುಂದಾಪುರ

ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್​ಗೆ ಹೇಳಿದ್ದರು. ಈಗ ಅವರು ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ.

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ’; ಚೈತ್ರಾ ಕುಂದಾಪುರ
ಚೈತ್ರಾ
ರಾಜೇಶ್ ದುಗ್ಗುಮನೆ
|

Updated on:Oct 22, 2024 | 7:31 AM

Share

ಚೈತ್ರಾ ಕುಂದಾಪುರ ಅವರು ಕೇಸ್ ಒಂದರಲ್ಲಿ ಜೈಲಿಗೆ ಹೋಗಿದ್ದರು. ಮೊದಲು ಅವರನ್ನು ವಾಗ್ಮಿ ಎಂದು ನೋಡುತ್ತಿದ್ದರು. ಈ ಪ್ರಕರಣದ ಬಳಿಕ ಅವರ ಮೇಲಿದ್ದ ಗೌರವ ಕಡಿಮೆ ಆಗಿತ್ತು. ಈಗ ಬಿಗ್ ಬಾಸ್ ನೋಡುತ್ತಿರುವವರಿಗೆ ಅವರ ಮೇಲಿದ್ದ ಭಾವನೆ ನಿಧಾನವಾಗಿ ಬದಲಾಗುತ್ತಿದೆ. ಹೀಗಿರುವಾಗಲೇ ಅವರು ಒಂದು ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ಚೈತ್ರಾ ಕುಂದಾಪುರಗೆ ಮದುವೆ ಫಿಕ್ಸ್ ಆಗಿದೆಯಂತೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ.

‘ಬಿಗ್ ಬಾಸ್’ ಒಳಗೆ ಹೋದಾಗ ಕೆಲವರ ಮಧ್ಯೆ ಆಪ್ತತೆ ಬೆಳೆಯುತ್ತದೆ. ಇದನ್ನು ಪ್ರೀತಿ ಎಂದು ಬಿಂಬಿಸುವ ಕೆಲಸ ಆಗುತ್ತದೆ. ಇದು ಕೆಲವರಿಗೆ ಇಷ್ಟ ಆದರೆ, ಇನ್ನೂ ಕೆಲವರಿಗೆ ಇಷ್ಟ ಆಗುವುದಿಲ್ಲ. ಚೈತ್ರಾ ಕುಂದಾಪುರಗೆ ಈ ವಿಚಾರದಲ್ಲಿ ನಂಬಿಕೆ ಇಲ್ಲ. ತಮ್ಮ ವಿಚಾರದಲ್ಲಿ ಯಾರಾದರೂ ಕಥೆ ಕಟ್ಟೋಕೆ ಬಂದರೆ ಸರಿ ಇರಲ್ಲ ಎಂದು ಅವರು ಹೇಳಿದ್ದಾರೆ.

ಚೈತ್ರಾ, ಹಂಸಾ ಹಾಗೂ ಮಾನಸಾ ಒಂದು ಕಡೆ ಕುಳಿತು ಮಾತನಾಡುತ್ತಿದ್ದರು. ‘ನಂದು, ರಂಜಿತ್ ಹಾಗೂ ತ್ರಿವಿಕ್ರಂದು ಲವ್​ಸ್ಟೋರಿ ಎಂದು ಸುರೇಶ್ ಹೇಳಿಕೆ ಕೊಟ್ಟರು. ಹೀಗೆಲ್ಲ ಹೇಳಿದ್ರೆ ಕಷ್ಟ ಆಗುತ್ತದೆ. ಅವರ ಜೊತೆ ಯಾಕೆ ಕ್ಲೋಸ್ ಆದೆ ಎಂದರೆ ಅವರು ಯಾರ ಬಗ್ಗೆಯೂ ಮಾತನಾಡಲ್ಲ. ಆದರೆ ಸುರೇಶ್ ಜೊತೆ ಕುಳಿತರೆ ನೆಗೆಟಿವ್ ವೈಬ್ಸ್ ಜಾಸ್ತಿ. ಈ ಕಾರಣಕ್ಕೆ ರಂಜಿತ್ ಹಾಗೂ ತ್ರಿವಿಕ್ರಂ ಜೊತೆ ಕ್ಲೋಸ್ ಆಗಿದ್ದೇನೆ’ ಎಂದು ಹಂಸಾ ಸ್ಪಷ್ಟನೆ ಕೊಟ್ಟರು.

ಇದನ್ನೂ ಓದಿ: ‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ

‘ನಾನು ವಿಕ್ಕಿ ಜೊತೆ ಕ್ಲೋಸ್ ಆಗಿದ್ದೇನೆ ಎಂದು ಸುರೇಶ್​ ಅಣ್ಣ ಹೆಳುತ್ತಲೇ ಇದ್ದಾರೆ. ನನ್ನ ವಿಚಾರದಲ್ಲಿ ಯಾರಾದರೂ ಲವ್​​ಸ್ಟೋರಿ ಶುರು ಮಾಡಿದರೆ ಮೆಟ್ಟು​ ತೆಗೆದುಕೊಂಡು ಹೊಡೆಯುತ್ತೇನೆ. ಹೊರಗೆ ಹೋದರೂ ತೊಂದರೆ ಇಲ್ಲ. ನನ್ನ ಕ್ಯಾರೆಕ್ಟರ್​​ಗೆ ಯಾರೂ ಕಳಂಕ ತರಬಾರದು ಎಂದು ನಾನು ಬಯಸುತ್ತೇನೆ. ಮದುವೆ ಫಿಕ್ಸ್​ ಮಾಡಿಕೊಂಡು ಬಂದಿದ್ದೇನೆ. ಯಾರ ಜೊತೆಯೂ ಸಂಬಂಧ ಕಟ್ಟೋದು ಇಟ್ಟುಕೊಳ್ಳಬೇಡಿ’ ಎಂದರು ಚೈತ್ರಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:31 am, Tue, 22 October 24

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ