‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ’; ಚೈತ್ರಾ ಕುಂದಾಪುರ

ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್​ಗೆ ಹೇಳಿದ್ದರು. ಈಗ ಅವರು ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ.

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ’; ಚೈತ್ರಾ ಕುಂದಾಪುರ
ಚೈತ್ರಾ
Follow us
|

Updated on:Oct 22, 2024 | 7:31 AM

ಚೈತ್ರಾ ಕುಂದಾಪುರ ಅವರು ಕೇಸ್ ಒಂದರಲ್ಲಿ ಜೈಲಿಗೆ ಹೋಗಿದ್ದರು. ಮೊದಲು ಅವರನ್ನು ವಾಗ್ಮಿ ಎಂದು ನೋಡುತ್ತಿದ್ದರು. ಈ ಪ್ರಕರಣದ ಬಳಿಕ ಅವರ ಮೇಲಿದ್ದ ಗೌರವ ಕಡಿಮೆ ಆಗಿತ್ತು. ಈಗ ಬಿಗ್ ಬಾಸ್ ನೋಡುತ್ತಿರುವವರಿಗೆ ಅವರ ಮೇಲಿದ್ದ ಭಾವನೆ ನಿಧಾನವಾಗಿ ಬದಲಾಗುತ್ತಿದೆ. ಹೀಗಿರುವಾಗಲೇ ಅವರು ಒಂದು ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ಚೈತ್ರಾ ಕುಂದಾಪುರಗೆ ಮದುವೆ ಫಿಕ್ಸ್ ಆಗಿದೆಯಂತೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ.

‘ಬಿಗ್ ಬಾಸ್’ ಒಳಗೆ ಹೋದಾಗ ಕೆಲವರ ಮಧ್ಯೆ ಆಪ್ತತೆ ಬೆಳೆಯುತ್ತದೆ. ಇದನ್ನು ಪ್ರೀತಿ ಎಂದು ಬಿಂಬಿಸುವ ಕೆಲಸ ಆಗುತ್ತದೆ. ಇದು ಕೆಲವರಿಗೆ ಇಷ್ಟ ಆದರೆ, ಇನ್ನೂ ಕೆಲವರಿಗೆ ಇಷ್ಟ ಆಗುವುದಿಲ್ಲ. ಚೈತ್ರಾ ಕುಂದಾಪುರಗೆ ಈ ವಿಚಾರದಲ್ಲಿ ನಂಬಿಕೆ ಇಲ್ಲ. ತಮ್ಮ ವಿಚಾರದಲ್ಲಿ ಯಾರಾದರೂ ಕಥೆ ಕಟ್ಟೋಕೆ ಬಂದರೆ ಸರಿ ಇರಲ್ಲ ಎಂದು ಅವರು ಹೇಳಿದ್ದಾರೆ.

ಚೈತ್ರಾ, ಹಂಸಾ ಹಾಗೂ ಮಾನಸಾ ಒಂದು ಕಡೆ ಕುಳಿತು ಮಾತನಾಡುತ್ತಿದ್ದರು. ‘ನಂದು, ರಂಜಿತ್ ಹಾಗೂ ತ್ರಿವಿಕ್ರಂದು ಲವ್​ಸ್ಟೋರಿ ಎಂದು ಸುರೇಶ್ ಹೇಳಿಕೆ ಕೊಟ್ಟರು. ಹೀಗೆಲ್ಲ ಹೇಳಿದ್ರೆ ಕಷ್ಟ ಆಗುತ್ತದೆ. ಅವರ ಜೊತೆ ಯಾಕೆ ಕ್ಲೋಸ್ ಆದೆ ಎಂದರೆ ಅವರು ಯಾರ ಬಗ್ಗೆಯೂ ಮಾತನಾಡಲ್ಲ. ಆದರೆ ಸುರೇಶ್ ಜೊತೆ ಕುಳಿತರೆ ನೆಗೆಟಿವ್ ವೈಬ್ಸ್ ಜಾಸ್ತಿ. ಈ ಕಾರಣಕ್ಕೆ ರಂಜಿತ್ ಹಾಗೂ ತ್ರಿವಿಕ್ರಂ ಜೊತೆ ಕ್ಲೋಸ್ ಆಗಿದ್ದೇನೆ’ ಎಂದು ಹಂಸಾ ಸ್ಪಷ್ಟನೆ ಕೊಟ್ಟರು.

ಇದನ್ನೂ ಓದಿ: ‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ

‘ನಾನು ವಿಕ್ಕಿ ಜೊತೆ ಕ್ಲೋಸ್ ಆಗಿದ್ದೇನೆ ಎಂದು ಸುರೇಶ್​ ಅಣ್ಣ ಹೆಳುತ್ತಲೇ ಇದ್ದಾರೆ. ನನ್ನ ವಿಚಾರದಲ್ಲಿ ಯಾರಾದರೂ ಲವ್​​ಸ್ಟೋರಿ ಶುರು ಮಾಡಿದರೆ ಮೆಟ್ಟು​ ತೆಗೆದುಕೊಂಡು ಹೊಡೆಯುತ್ತೇನೆ. ಹೊರಗೆ ಹೋದರೂ ತೊಂದರೆ ಇಲ್ಲ. ನನ್ನ ಕ್ಯಾರೆಕ್ಟರ್​​ಗೆ ಯಾರೂ ಕಳಂಕ ತರಬಾರದು ಎಂದು ನಾನು ಬಯಸುತ್ತೇನೆ. ಮದುವೆ ಫಿಕ್ಸ್​ ಮಾಡಿಕೊಂಡು ಬಂದಿದ್ದೇನೆ. ಯಾರ ಜೊತೆಯೂ ಸಂಬಂಧ ಕಟ್ಟೋದು ಇಟ್ಟುಕೊಳ್ಳಬೇಡಿ’ ಎಂದರು ಚೈತ್ರಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:31 am, Tue, 22 October 24

ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ