AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ’; ಚೈತ್ರಾ ಕುಂದಾಪುರ

ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್​ಗೆ ಹೇಳಿದ್ದರು. ಈಗ ಅವರು ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ.

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ’; ಚೈತ್ರಾ ಕುಂದಾಪುರ
ಚೈತ್ರಾ
ರಾಜೇಶ್ ದುಗ್ಗುಮನೆ
|

Updated on:Oct 22, 2024 | 7:31 AM

Share

ಚೈತ್ರಾ ಕುಂದಾಪುರ ಅವರು ಕೇಸ್ ಒಂದರಲ್ಲಿ ಜೈಲಿಗೆ ಹೋಗಿದ್ದರು. ಮೊದಲು ಅವರನ್ನು ವಾಗ್ಮಿ ಎಂದು ನೋಡುತ್ತಿದ್ದರು. ಈ ಪ್ರಕರಣದ ಬಳಿಕ ಅವರ ಮೇಲಿದ್ದ ಗೌರವ ಕಡಿಮೆ ಆಗಿತ್ತು. ಈಗ ಬಿಗ್ ಬಾಸ್ ನೋಡುತ್ತಿರುವವರಿಗೆ ಅವರ ಮೇಲಿದ್ದ ಭಾವನೆ ನಿಧಾನವಾಗಿ ಬದಲಾಗುತ್ತಿದೆ. ಹೀಗಿರುವಾಗಲೇ ಅವರು ಒಂದು ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ಚೈತ್ರಾ ಕುಂದಾಪುರಗೆ ಮದುವೆ ಫಿಕ್ಸ್ ಆಗಿದೆಯಂತೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ.

‘ಬಿಗ್ ಬಾಸ್’ ಒಳಗೆ ಹೋದಾಗ ಕೆಲವರ ಮಧ್ಯೆ ಆಪ್ತತೆ ಬೆಳೆಯುತ್ತದೆ. ಇದನ್ನು ಪ್ರೀತಿ ಎಂದು ಬಿಂಬಿಸುವ ಕೆಲಸ ಆಗುತ್ತದೆ. ಇದು ಕೆಲವರಿಗೆ ಇಷ್ಟ ಆದರೆ, ಇನ್ನೂ ಕೆಲವರಿಗೆ ಇಷ್ಟ ಆಗುವುದಿಲ್ಲ. ಚೈತ್ರಾ ಕುಂದಾಪುರಗೆ ಈ ವಿಚಾರದಲ್ಲಿ ನಂಬಿಕೆ ಇಲ್ಲ. ತಮ್ಮ ವಿಚಾರದಲ್ಲಿ ಯಾರಾದರೂ ಕಥೆ ಕಟ್ಟೋಕೆ ಬಂದರೆ ಸರಿ ಇರಲ್ಲ ಎಂದು ಅವರು ಹೇಳಿದ್ದಾರೆ.

ಚೈತ್ರಾ, ಹಂಸಾ ಹಾಗೂ ಮಾನಸಾ ಒಂದು ಕಡೆ ಕುಳಿತು ಮಾತನಾಡುತ್ತಿದ್ದರು. ‘ನಂದು, ರಂಜಿತ್ ಹಾಗೂ ತ್ರಿವಿಕ್ರಂದು ಲವ್​ಸ್ಟೋರಿ ಎಂದು ಸುರೇಶ್ ಹೇಳಿಕೆ ಕೊಟ್ಟರು. ಹೀಗೆಲ್ಲ ಹೇಳಿದ್ರೆ ಕಷ್ಟ ಆಗುತ್ತದೆ. ಅವರ ಜೊತೆ ಯಾಕೆ ಕ್ಲೋಸ್ ಆದೆ ಎಂದರೆ ಅವರು ಯಾರ ಬಗ್ಗೆಯೂ ಮಾತನಾಡಲ್ಲ. ಆದರೆ ಸುರೇಶ್ ಜೊತೆ ಕುಳಿತರೆ ನೆಗೆಟಿವ್ ವೈಬ್ಸ್ ಜಾಸ್ತಿ. ಈ ಕಾರಣಕ್ಕೆ ರಂಜಿತ್ ಹಾಗೂ ತ್ರಿವಿಕ್ರಂ ಜೊತೆ ಕ್ಲೋಸ್ ಆಗಿದ್ದೇನೆ’ ಎಂದು ಹಂಸಾ ಸ್ಪಷ್ಟನೆ ಕೊಟ್ಟರು.

ಇದನ್ನೂ ಓದಿ: ‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ

‘ನಾನು ವಿಕ್ಕಿ ಜೊತೆ ಕ್ಲೋಸ್ ಆಗಿದ್ದೇನೆ ಎಂದು ಸುರೇಶ್​ ಅಣ್ಣ ಹೆಳುತ್ತಲೇ ಇದ್ದಾರೆ. ನನ್ನ ವಿಚಾರದಲ್ಲಿ ಯಾರಾದರೂ ಲವ್​​ಸ್ಟೋರಿ ಶುರು ಮಾಡಿದರೆ ಮೆಟ್ಟು​ ತೆಗೆದುಕೊಂಡು ಹೊಡೆಯುತ್ತೇನೆ. ಹೊರಗೆ ಹೋದರೂ ತೊಂದರೆ ಇಲ್ಲ. ನನ್ನ ಕ್ಯಾರೆಕ್ಟರ್​​ಗೆ ಯಾರೂ ಕಳಂಕ ತರಬಾರದು ಎಂದು ನಾನು ಬಯಸುತ್ತೇನೆ. ಮದುವೆ ಫಿಕ್ಸ್​ ಮಾಡಿಕೊಂಡು ಬಂದಿದ್ದೇನೆ. ಯಾರ ಜೊತೆಯೂ ಸಂಬಂಧ ಕಟ್ಟೋದು ಇಟ್ಟುಕೊಳ್ಳಬೇಡಿ’ ಎಂದರು ಚೈತ್ರಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:31 am, Tue, 22 October 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​