AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೋಲ್​ಕಾಲ್ ಮಾಡ್ತೀಯಾ, ನೀನು ಲಾಯರ್ ಅಲ್ಲ, ಲೈಸನ್ಸೇ ರದ್ದಾಗಿದೆ’; ಜಗದೀಶ್​​ಗೆ ಗುಮ್ಮಿದ ಚೈತ್ರಾ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಾಕಿಂಗ್ ಬೆಳವಣಿಗೆ ನಡೆದಿದೆ. ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡಿದ್ದು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಇದೇ ವೇಳೆ ಚೈತ್ರಾ ಹಾಗೂ ಜಗದೀಶ್ ಮಧ್ಯೆ ವಾಕ್​ಸಮರ ನಡೆದಿದೆ.

‘ರೋಲ್​ಕಾಲ್ ಮಾಡ್ತೀಯಾ, ನೀನು ಲಾಯರ್ ಅಲ್ಲ, ಲೈಸನ್ಸೇ ರದ್ದಾಗಿದೆ’; ಜಗದೀಶ್​​ಗೆ ಗುಮ್ಮಿದ ಚೈತ್ರಾ
ಜಗದೀಶ್-ಚೈತ್ರಾ
ರಾಜೇಶ್ ದುಗ್ಗುಮನೆ
|

Updated on:Oct 18, 2024 | 7:28 AM

Share

ಜಗದೀಶ್ ಅವರು ವಕೀಲರೇ ಅಲ್ಲ ಎನ್ನುವ ಮಾತು ಹೊರಗೆ ಚರ್ಚೆಯಲ್ಲಿದೆ. ಅವರು ವಿದ್ಯಾರ್ಹತೆಗೆ ಸಂಬಂಧಿಸಿದಂತೆ ನಕಲಿ ಪ್ರಮಾಣಪತ್ರ ನೀಡಿದ್ದರಿಂದ ಅವರು ವಕೀಲಗಿರಿ ಮಾಡುವ ಲೈಸೆನ್ಸ್​ನ ಕ್ಯಾನ್ಸಲ್ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಇದನ್ನು ಅವರ ಆಪ್ತ ಬಳಗದವರು ಒಪ್ಪಿಲ್ಲ. ಹೀಗಿರುವಾಗಲೇ ಈ ವಿಚಾರ ದೊಡ್ಮನೆ ಒಳಗೂ ಚರ್ಚೆಗೆ ಬಂದಿದೆ. ಚೈತ್ರಾ ಅವರು ಜಗದೀಶ್ ವಿರುದ್ಧ ಈ ವಿಚಾರದಲ್ಲಿ ಸಿಡಿದೆದಿದ್ದಾರೆ.

‘ಬಿಗ್ ಬಾಸ್’ಗೆ ಬರುವುದಕ್ಕೂ ಮೊದಲು ಚೈತ್ರಾ ಕುಂದಾಪುರ ಅವರು ಜೈಲು ಸೇರಿದ್ದರು. ಇದಕ್ಕೆ ಕಾರಣ ಆಗಿದ್ದು 5 ಕೋಟಿ ರೂಪಾಯಿ ಹಣ ಪಡೆದ ಆರೋಪ. ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಹೇಳಿದ್ದರು ಎನ್ನುವ ಆರೋಪ ಇದೆ. ಈ ವಿಚಾರವನ್ನು ಜಗದೀಶ್ ಅವರು ದೊಡ್ಮನೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಚೈತ್ರಾ ಕೌಂಟರ್ ನೀಡಿದ್ದಾರೆ.

‘ಬಿಗ್ ಬಾಸ್’ ಮನೆಯಲ್ಲಿ ಭರ್ಜರಿ ಕಿತ್ತಾಟ ನಡೆದಿದೆ. ಹಂಸಾ ವಿರುದ್ಧ ಮಾಡಿದ ಪದಬಳಕೆಯಿಂದ ಇಡೀ ಮನೆ ಸಿಡಿದೆದ್ದಿದೆ. ಆಗ ಚೈತ್ರಾ ಅವರು ಜಗದೀಶ್ ಅವರ ವಿರುದ್ಧ ಏರು ಧ್ವನಿಯಲ್ಲು ಮಾತನಾಡಿದ್ದಾರೆ. ಇದಕ್ಕೆ ಸಿಟ್ಟಾದ ಜಗದೀಶ್ ‘ಐದು ಕೋಟಿ ರೂಪಾಯಿ ತಂಗೊಂಡಿದೀಯಾ’ ಎನ್ನುವ ಆರೋಪ ಮಾಡಿದ್ದಾರೆ. ಇದಕ್ಕೆ ಚೈತ್ರಾ ಸಾಕ್ಷಿ ಎಲ್ಲಿದೆ ಎಂದು ಕೇಳಿದ್ದಾರೆ. ‘ಹೋಗಿ ಚಾರ್ಜ್​ಶೀಟ್​ನಲ್ಲಿ ನೋಡಿಕೋ ಕಾಣುತ್ತೆ’ ಎಂದು ಹೊರಗಿನ ವಿಚಾರ ಕೆದಕಿದ್ದಾರೆ.

ಇದನ್ನೂ ಓದಿ: ರಂಜಿತ್, ಜಗದೀಶ್ ಬಿಗ್ ಬಾಸ್​ನಿಂದ ಹೊರಕ್ಕೆ; ಇವರು ಹೋಗಿದ್ದೆಲ್ಲಿಗೆ?

ಯಾವಾಗ ಜಗದೀಶ್ ಅವರು ವೈಯಕ್ತಿಕ ವಿಚಾರ ತೆಗೆದು ಮಾತನಾಡೋಕೆ ಶುರು ಮಾಡಿದರೋ ಇದಕ್ಕೆ ಚೈತ್ರಾ ಅವರು ಕೌಂಟರ್ ಕೊಟ್ಟಿದ್ದಾರೆ. ‘ನೀನು ರೋಲ್​ ಕಾಲ್ ಮಾಡ್ತೀಯಾ. ಅದನ್ನು ಹೇಳಬೇಕಾ? ಲಾಯರ್​ಗಿರಿ ಮಾಡೋಕೆ ನೀನು ಅರ್ಹನಲ್ಲ. ನೀನು ವಕೀಲನೇ ಅಲ್ಲ. ಲೋಕಲ್ ಲಾಯರ್’ ಎಂದಿದ್ದಾರೆ ಜಗದೀಶ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:22 am, Fri, 18 October 24

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!