AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೋಲ್​ಕಾಲ್ ಮಾಡ್ತೀಯಾ, ನೀನು ಲಾಯರ್ ಅಲ್ಲ, ಲೈಸನ್ಸೇ ರದ್ದಾಗಿದೆ’; ಜಗದೀಶ್​​ಗೆ ಗುಮ್ಮಿದ ಚೈತ್ರಾ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಾಕಿಂಗ್ ಬೆಳವಣಿಗೆ ನಡೆದಿದೆ. ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡಿದ್ದು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಇದೇ ವೇಳೆ ಚೈತ್ರಾ ಹಾಗೂ ಜಗದೀಶ್ ಮಧ್ಯೆ ವಾಕ್​ಸಮರ ನಡೆದಿದೆ.

‘ರೋಲ್​ಕಾಲ್ ಮಾಡ್ತೀಯಾ, ನೀನು ಲಾಯರ್ ಅಲ್ಲ, ಲೈಸನ್ಸೇ ರದ್ದಾಗಿದೆ’; ಜಗದೀಶ್​​ಗೆ ಗುಮ್ಮಿದ ಚೈತ್ರಾ
ಜಗದೀಶ್-ಚೈತ್ರಾ
ರಾಜೇಶ್ ದುಗ್ಗುಮನೆ
|

Updated on:Oct 18, 2024 | 7:28 AM

Share

ಜಗದೀಶ್ ಅವರು ವಕೀಲರೇ ಅಲ್ಲ ಎನ್ನುವ ಮಾತು ಹೊರಗೆ ಚರ್ಚೆಯಲ್ಲಿದೆ. ಅವರು ವಿದ್ಯಾರ್ಹತೆಗೆ ಸಂಬಂಧಿಸಿದಂತೆ ನಕಲಿ ಪ್ರಮಾಣಪತ್ರ ನೀಡಿದ್ದರಿಂದ ಅವರು ವಕೀಲಗಿರಿ ಮಾಡುವ ಲೈಸೆನ್ಸ್​ನ ಕ್ಯಾನ್ಸಲ್ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಇದನ್ನು ಅವರ ಆಪ್ತ ಬಳಗದವರು ಒಪ್ಪಿಲ್ಲ. ಹೀಗಿರುವಾಗಲೇ ಈ ವಿಚಾರ ದೊಡ್ಮನೆ ಒಳಗೂ ಚರ್ಚೆಗೆ ಬಂದಿದೆ. ಚೈತ್ರಾ ಅವರು ಜಗದೀಶ್ ವಿರುದ್ಧ ಈ ವಿಚಾರದಲ್ಲಿ ಸಿಡಿದೆದಿದ್ದಾರೆ.

‘ಬಿಗ್ ಬಾಸ್’ಗೆ ಬರುವುದಕ್ಕೂ ಮೊದಲು ಚೈತ್ರಾ ಕುಂದಾಪುರ ಅವರು ಜೈಲು ಸೇರಿದ್ದರು. ಇದಕ್ಕೆ ಕಾರಣ ಆಗಿದ್ದು 5 ಕೋಟಿ ರೂಪಾಯಿ ಹಣ ಪಡೆದ ಆರೋಪ. ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಹೇಳಿದ್ದರು ಎನ್ನುವ ಆರೋಪ ಇದೆ. ಈ ವಿಚಾರವನ್ನು ಜಗದೀಶ್ ಅವರು ದೊಡ್ಮನೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಚೈತ್ರಾ ಕೌಂಟರ್ ನೀಡಿದ್ದಾರೆ.

‘ಬಿಗ್ ಬಾಸ್’ ಮನೆಯಲ್ಲಿ ಭರ್ಜರಿ ಕಿತ್ತಾಟ ನಡೆದಿದೆ. ಹಂಸಾ ವಿರುದ್ಧ ಮಾಡಿದ ಪದಬಳಕೆಯಿಂದ ಇಡೀ ಮನೆ ಸಿಡಿದೆದ್ದಿದೆ. ಆಗ ಚೈತ್ರಾ ಅವರು ಜಗದೀಶ್ ಅವರ ವಿರುದ್ಧ ಏರು ಧ್ವನಿಯಲ್ಲು ಮಾತನಾಡಿದ್ದಾರೆ. ಇದಕ್ಕೆ ಸಿಟ್ಟಾದ ಜಗದೀಶ್ ‘ಐದು ಕೋಟಿ ರೂಪಾಯಿ ತಂಗೊಂಡಿದೀಯಾ’ ಎನ್ನುವ ಆರೋಪ ಮಾಡಿದ್ದಾರೆ. ಇದಕ್ಕೆ ಚೈತ್ರಾ ಸಾಕ್ಷಿ ಎಲ್ಲಿದೆ ಎಂದು ಕೇಳಿದ್ದಾರೆ. ‘ಹೋಗಿ ಚಾರ್ಜ್​ಶೀಟ್​ನಲ್ಲಿ ನೋಡಿಕೋ ಕಾಣುತ್ತೆ’ ಎಂದು ಹೊರಗಿನ ವಿಚಾರ ಕೆದಕಿದ್ದಾರೆ.

ಇದನ್ನೂ ಓದಿ: ರಂಜಿತ್, ಜಗದೀಶ್ ಬಿಗ್ ಬಾಸ್​ನಿಂದ ಹೊರಕ್ಕೆ; ಇವರು ಹೋಗಿದ್ದೆಲ್ಲಿಗೆ?

ಯಾವಾಗ ಜಗದೀಶ್ ಅವರು ವೈಯಕ್ತಿಕ ವಿಚಾರ ತೆಗೆದು ಮಾತನಾಡೋಕೆ ಶುರು ಮಾಡಿದರೋ ಇದಕ್ಕೆ ಚೈತ್ರಾ ಅವರು ಕೌಂಟರ್ ಕೊಟ್ಟಿದ್ದಾರೆ. ‘ನೀನು ರೋಲ್​ ಕಾಲ್ ಮಾಡ್ತೀಯಾ. ಅದನ್ನು ಹೇಳಬೇಕಾ? ಲಾಯರ್​ಗಿರಿ ಮಾಡೋಕೆ ನೀನು ಅರ್ಹನಲ್ಲ. ನೀನು ವಕೀಲನೇ ಅಲ್ಲ. ಲೋಕಲ್ ಲಾಯರ್’ ಎಂದಿದ್ದಾರೆ ಜಗದೀಶ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:22 am, Fri, 18 October 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​