AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ಕಣ್ಣೀರು ಫೇಕಾ? ಹೌದೆನ್ನಲು ಸಾಕ್ಷಿ ತಂದ ನೆಟ್ಟಿಗರು

ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಲ್ಲಿ ಈ ವಾರ ತೋರಿದ ವರ್ತನೆ ಚರ್ಚೆಗೆ ಗ್ರಾಸವಾಗಿದೆ. ರಜತ್ ‘ಸುಳ್ಳಿ’ ಎಂದಿದ್ದಕ್ಕೆ ಅವರು ಕಳೆದ ಸೀಸನ್‌ನಂತೆ ಭಾವನಾತ್ಮಕ ದೃಶ್ಯ ಸೃಷ್ಟಿಸಿದರು. ಕಣ್ಣೀರು ಹಾಕಿ, ಕುಂಕುಮ ಹಚ್ಚಿಕೊಳ್ಳುವ ಮೂಲಕ ಗಮನ ಸೆಳೆಯಲು ಯತ್ನಿಸಿದರು ಎನ್ನಲಾಗುತ್ತಿದೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚೈತ್ರಾ ಅವರ ವರ್ತನೆ ಬಗ್ಗೆ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಚೈತ್ರಾ ಕುಂದಾಪುರ ಕಣ್ಣೀರು ಫೇಕಾ? ಹೌದೆನ್ನಲು ಸಾಕ್ಷಿ ತಂದ ನೆಟ್ಟಿಗರು
ಚೈತ್ರಾ
ರಾಜೇಶ್ ದುಗ್ಗುಮನೆ
|

Updated on: Dec 19, 2025 | 11:41 AM

Share

ಚೈತ್ರಾ ಕುಂದಾಪುರ ಅವರು ಎರಡನೇ ಬಾರಿಗೆ ಬಿಗ್ ಬಾಸ್ ಮನೆ ಸೇರಿದ್ದಾರೆ. ಈ ಸೀಸನ್​ ಅಲ್ಲಿ ಅತಿಥಿಯಾಗಿ ದೊಡ್ಮನೆಗೆ ತೆರಳಿದ್ದ ಅವರು ನಂತರ ಸ್ಪರ್ಧಿ ಆದರು. ಈಗ ಅವರು ದೊಡ್ಮನೆಯಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಆದರೆ, ಈ ವಾರ ಅವರು ನಡೆದುಕೊಂಡ ರೀತಿ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ವೈರಲ್ ಆಗಿವೆ. ಕಳೆದ ಸೀಸನ್​ ಆಟವನ್ನೇ ಚೈತ್ರಾ ರಿಪೀಟ್ ಮಾಡುತ್ತಿದ್ದಾರೆ ಎಂದು ಅನೇಕರು ಹೇಳಿದ್ದಾರೆ.

ಚೈತ್ರಾ ಕುಂದಾಪುರ ಅವರು ಕಳೆದ ಸೀಸನ್​ ಅಲ್ಲಿ ಅನೇಕ ಬಾರಿ ಅತ್ತಿದ್ದು ಇದೆ. ಈ ಸಂದರ್ಭದಲ್ಲಿ ಅವರು ದೇವರಿಗೆ ದೀಪ ಹಚ್ಚಿ ಕುಂಕುಮವನ್ನು ಹಣೆಗೆ ಇಟ್ಟುಕೊಳ್ಳುತ್ತಿದ್ದರು. ಅವರು ಬಂದು ಕೆಲ ವಾರ ಕಳೆದಿದ್ದರು ಈ ರೀತಿ ಎಂದಿಗೂ ಮಾಡಿರಲಿಲ್ಲ. ಆದರೆ, ಈ ವಾರ ಅವರು ಆ ರೀತಿ ನಡೆದುಕೊಂಡಿದ್ದಾರೆ. ಇದಕ್ಕೆ ಕಾರಣ ಆಗಿದ್ದು ರಜತ್ ಅವರ ಮಾತು.

ರಜತ್ ಅವರು ಈ ವಾರ ಚೈತ್ರಾ ಕುಂದಾಪುರ ಜೊತೆ ಜಗಳ ಆಡಿದರು. ಆಟದ ಮಧ್ಯೆ ಅವರನ್ನು ಸುಳ್ಳಿ ಎಂದು ಕರೆದರು. ಕಳೆದ ಸೀಸನ್​ ಅಲ್ಲಿ ಅನೇಕರು ಚೈತ್ರಾ ಅವರನ್ನು ಸುಳ್ಳಿ ಎಂದು ಕರೆದಿದ್ದು ಇದೆ. ಈ ಬಾರಿಯೂ ಅದೇ ಟ್ಯಾಗ್​ನಿಂದ ಚೈತ್ರಾನ ಕರೆದಿದ್ದಕ್ಕೆ ಅವರಿಗೆ ಬೇಸರ ಆಗಿದೆ. ಅವರು ಗಳಗಳನೆ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್

ಗಿಲ್ಲಿ ಹಾಗೂ ರಜತ್ ಅವರು ಸೋಫಾ ಏರಿಯಾದಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ ಚೈತ್ರಾ ಕುಂದಾಪುರ ಅವರು ದೇವರ ಎದುರು ಬಂದು ಕಣ್ಣೀರು ಹಾಕಿದ್ದಾರೆ. ಕುಂಕುಮ ಹಚ್ಚಿಕೊಳ್ಳುವಾಗ ಅವರು ಗಿಲ್ಲಿ ಹಾಗೂ ರಜತ್ ಕಡೆ ನೋಡಿದ್ದಾರೆ. ಅವರು ತಮ್ಮನ್ನೇ ನೋಡುತ್ತಿದ್ದಾರೆ ಎಂಬುದನ್ನು ಚೈತ್ರಾ ಖಚಿತ ಮಾಡಿಕೊಂಡಂತಿತ್ತು. ಈ ವಿಷಯವನ್ನು ರಾಶಿಕಾ ಕೂಡ ದೊಡ್ಮನೆಯಲ್ಲಿ ಚರ್ಚೆ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!