AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ, ಕಿಚ್ಚ ಕೊಟ್ಟ ಉತ್ತರ ಏನು?

ಸುದೀಪ್​ ವಿರುದ್ಧ ಚಕ್ರವರ್ತಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನು ಕೇಳಿದ ಸುದೀಪ್ ಕೂಲ್​ ಆಗಿಯೇ ತಿರುಗೇಟು ನೀಡಿದ್ದಾರೆ.

‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ, ಕಿಚ್ಚ ಕೊಟ್ಟ ಉತ್ತರ ಏನು?
‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ,  ಕಿಚ್ಚ ಕೊಟ್ಟ ಉತ್ತರ ಏನು?
TV9 Web
| Edited By: |

Updated on: Jul 25, 2021 | 7:21 AM

Share

ಸುದೀಪ್ ಹೇಳಿದ್ದ ವಿಚಾರವನ್ನು ಚಕ್ರವರ್ತಿ ಚಂದ್ರಚೂಡ್​ ಅವರು ತಿರುಚಿ ಹೇಳಿದ್ದರು. ಇದನ್ನು ವಾರಾಂತ್ಯದಲ್ಲಿ ಸುದೀಪ್​ ಚರ್ಚೆಗೆ ತೆಗೆದುಕೊಂಡರು. ಪದೇಪದೇ ಚಕ್ರವರ್ತಿ ಅವರದ್ದೇ ತಪ್ಪು ಎಂದು ಸುದೀಪ್ ಹೇಳಿದರು. ಇದು ಚಕ್ರವರ್ತಿ ಕೋಪಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲ, ಸುದೀಪ್​ ವಿರುದ್ಧ ಚಕ್ರವರ್ತಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನು ಕೇಳಿದ ಸುದೀಪ್ ಕೂಲ್​ ಆಗಿಯೇ ತಿರುಗೇಟು ನೀಡಿದ್ದಾರೆ.

‘ಬಿಗ್​ ಬಾಸ್​ ಮನೆಯಲ್ಲಿ ಪದೇಪದೇ ನನ್ನನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ನನ್ನನ್ನು ಸುದೀಪ್ ಸ್ತ್ರೀ ಪೀಡಕ ಎಂಬಂತೆ ಮಾಡಿದ್ದಾರೆ. ನಾನು ಟಾರ್ಗೆಟ್​ ಆಗುತ್ತಿದ್ದೇನೆ’ ಎಂದು ಬ್ರೇಕ್​ ಸಂದರ್ಭದಲ್ಲಿ ಚಕ್ರವರ್ತಿ ಸ್ಪರ್ಧಿಗಳ ಜತೆ ಅಭಿಪ್ರಾಯ ಹಂಚಿಕೊಂಡರು. ಬ್ರೇಕ್​ ತೆಗೆದುಕೊಂಡ ಬಂದ ನಂತರದಲ್ಲಿ ಚಕ್ರವರ್ತಿಯನ್ನು ಸುದೀಪ್​ ಹೊಗಳಿದರು.  ಆದರೆ, ಈ ಹೊಗಳಿಕೆ ಚಕ್ರವರ್ತಿಗೆ ಇಷ್ಟವಾಗಿಲ್ಲ.

‘ಪ್ರತಿ ವಾರವೂ ನನಗೊಂದು ಎಪಿಸೋಡ್​ ಮೀಸಲಿಡುತ್ತಿದ್ದೀರಿ. ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ. ಅಂತೂ ಈಗ ನಾಲ್ಕು ಸಾಲು​ ಒಳ್ಳೆದನ್ನು ಹೇಳಿದ್ದೀರಿ. ಸಾಧು ಸಂತರ ಮಧ್ಯೆ ನಾನು ಕ್ರಿಮಿನಲ್​ ಆಗಿದ್ದೇನೆ’ ಎಂದು ದೂರಿದರು ಚಕ್ರವರ್ತಿ.

ಇದಕ್ಕೆ ಕೊಟ್ಟ ಸುದೀಪ್​ ಸಖತ್​ ಖಡಕ್​ ಆಗಿತ್ತು. ‘ನೀವು ಹೇಳಿರೋದನ್ನೇ, ಮಾಡಿದ್ದನ್ನೇ ನಾನು ಹೇಳಿದ್ದೀನಿ. ನಂದೇನಾದರೂ ಇದೆಯಾ? ಒಳ್ಳೇದನ್ನೂ ಹೇಳಿದ್ದೀನಿ. ನಿಮ್ಮ ಜ್ಞಾನಕ್ಕೆ ನಾನು ಫ್ಯಾನ್​ ಎಂದು ಹೇಳಿದೀನಿ. ಈ ಮನೆಯಲ್ಲಿ ಎಷ್ಟು ಜನಕ್ಕೆ ಇದನ್ನು ಹೇಳಿದ್ದೇನೆ? ನಿಮ್ಮಲ್ಲಿ ಒಳ್ಳೆತನ ಇದೆ. ಈ ವಾರ ಕೋಪ ಕಂಟ್ರೋಲ್​ ಮಾಡಿಕೊಂಡ್ರಿ. ಅದನ್ನು ಹೇಳ್ತಾ ಇದೀನಿ. ನೀವು ಕೊಟ್ಟಿರೋ ಬೇಜಾರನ್ನು ಬೇಜಾರಿಂದಲೇ ಹೇಳದೇ ತುಪ್ಪ ಹಚ್ಚಿ ಹೇಳಲಾ? ನಿಮ್ಮ ವೇದಿಕೆಯಿಂದ ನಾಲ್ಕು ಜನ ಕಲಿಯಲಿ ಅನ್ನೋದು ನನ್ನ ಅರ್ಥ’  ಎಂದು ಸುದೀಪ್ ತಿರುಗೇಟು ನೀಡಿದರು.

ಇದನ್ನೂ ಓದಿ:

‘ನಿಮಗೂ ಮಧ್ಯಬೆಟ್ಟು ತೋರಿಸೋಕೆ ಕಾಯುತ್ತಿದ್ದೇವೆ’; ಚಕ್ರವರ್ತಿ ಚಂದ್ರಚೂಡ್​ ಹೊರಹಾಕಲು ಆರಂಭವಾಗಿದೆ ಅಭಿಯಾನ

ಅಶ್ಲೀಲ ಸನ್ನೆ ಮಾಡಿ ಸಮತೋಲನದ ನೆಪ ಹೇಳಿದ ಚಕ್ರವರ್ತಿಗೆ ಸುದೀಪ್ ಸಖತ್​ ಕ್ಲಾಸ್​

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ