AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ, ಕಿಚ್ಚ ಕೊಟ್ಟ ಉತ್ತರ ಏನು?

ಸುದೀಪ್​ ವಿರುದ್ಧ ಚಕ್ರವರ್ತಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನು ಕೇಳಿದ ಸುದೀಪ್ ಕೂಲ್​ ಆಗಿಯೇ ತಿರುಗೇಟು ನೀಡಿದ್ದಾರೆ.

‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ, ಕಿಚ್ಚ ಕೊಟ್ಟ ಉತ್ತರ ಏನು?
‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ,  ಕಿಚ್ಚ ಕೊಟ್ಟ ಉತ್ತರ ಏನು?
TV9 Web
| Edited By: |

Updated on: Jul 25, 2021 | 7:21 AM

Share

ಸುದೀಪ್ ಹೇಳಿದ್ದ ವಿಚಾರವನ್ನು ಚಕ್ರವರ್ತಿ ಚಂದ್ರಚೂಡ್​ ಅವರು ತಿರುಚಿ ಹೇಳಿದ್ದರು. ಇದನ್ನು ವಾರಾಂತ್ಯದಲ್ಲಿ ಸುದೀಪ್​ ಚರ್ಚೆಗೆ ತೆಗೆದುಕೊಂಡರು. ಪದೇಪದೇ ಚಕ್ರವರ್ತಿ ಅವರದ್ದೇ ತಪ್ಪು ಎಂದು ಸುದೀಪ್ ಹೇಳಿದರು. ಇದು ಚಕ್ರವರ್ತಿ ಕೋಪಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲ, ಸುದೀಪ್​ ವಿರುದ್ಧ ಚಕ್ರವರ್ತಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನು ಕೇಳಿದ ಸುದೀಪ್ ಕೂಲ್​ ಆಗಿಯೇ ತಿರುಗೇಟು ನೀಡಿದ್ದಾರೆ.

‘ಬಿಗ್​ ಬಾಸ್​ ಮನೆಯಲ್ಲಿ ಪದೇಪದೇ ನನ್ನನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ನನ್ನನ್ನು ಸುದೀಪ್ ಸ್ತ್ರೀ ಪೀಡಕ ಎಂಬಂತೆ ಮಾಡಿದ್ದಾರೆ. ನಾನು ಟಾರ್ಗೆಟ್​ ಆಗುತ್ತಿದ್ದೇನೆ’ ಎಂದು ಬ್ರೇಕ್​ ಸಂದರ್ಭದಲ್ಲಿ ಚಕ್ರವರ್ತಿ ಸ್ಪರ್ಧಿಗಳ ಜತೆ ಅಭಿಪ್ರಾಯ ಹಂಚಿಕೊಂಡರು. ಬ್ರೇಕ್​ ತೆಗೆದುಕೊಂಡ ಬಂದ ನಂತರದಲ್ಲಿ ಚಕ್ರವರ್ತಿಯನ್ನು ಸುದೀಪ್​ ಹೊಗಳಿದರು.  ಆದರೆ, ಈ ಹೊಗಳಿಕೆ ಚಕ್ರವರ್ತಿಗೆ ಇಷ್ಟವಾಗಿಲ್ಲ.

‘ಪ್ರತಿ ವಾರವೂ ನನಗೊಂದು ಎಪಿಸೋಡ್​ ಮೀಸಲಿಡುತ್ತಿದ್ದೀರಿ. ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ. ಅಂತೂ ಈಗ ನಾಲ್ಕು ಸಾಲು​ ಒಳ್ಳೆದನ್ನು ಹೇಳಿದ್ದೀರಿ. ಸಾಧು ಸಂತರ ಮಧ್ಯೆ ನಾನು ಕ್ರಿಮಿನಲ್​ ಆಗಿದ್ದೇನೆ’ ಎಂದು ದೂರಿದರು ಚಕ್ರವರ್ತಿ.

ಇದಕ್ಕೆ ಕೊಟ್ಟ ಸುದೀಪ್​ ಸಖತ್​ ಖಡಕ್​ ಆಗಿತ್ತು. ‘ನೀವು ಹೇಳಿರೋದನ್ನೇ, ಮಾಡಿದ್ದನ್ನೇ ನಾನು ಹೇಳಿದ್ದೀನಿ. ನಂದೇನಾದರೂ ಇದೆಯಾ? ಒಳ್ಳೇದನ್ನೂ ಹೇಳಿದ್ದೀನಿ. ನಿಮ್ಮ ಜ್ಞಾನಕ್ಕೆ ನಾನು ಫ್ಯಾನ್​ ಎಂದು ಹೇಳಿದೀನಿ. ಈ ಮನೆಯಲ್ಲಿ ಎಷ್ಟು ಜನಕ್ಕೆ ಇದನ್ನು ಹೇಳಿದ್ದೇನೆ? ನಿಮ್ಮಲ್ಲಿ ಒಳ್ಳೆತನ ಇದೆ. ಈ ವಾರ ಕೋಪ ಕಂಟ್ರೋಲ್​ ಮಾಡಿಕೊಂಡ್ರಿ. ಅದನ್ನು ಹೇಳ್ತಾ ಇದೀನಿ. ನೀವು ಕೊಟ್ಟಿರೋ ಬೇಜಾರನ್ನು ಬೇಜಾರಿಂದಲೇ ಹೇಳದೇ ತುಪ್ಪ ಹಚ್ಚಿ ಹೇಳಲಾ? ನಿಮ್ಮ ವೇದಿಕೆಯಿಂದ ನಾಲ್ಕು ಜನ ಕಲಿಯಲಿ ಅನ್ನೋದು ನನ್ನ ಅರ್ಥ’  ಎಂದು ಸುದೀಪ್ ತಿರುಗೇಟು ನೀಡಿದರು.

ಇದನ್ನೂ ಓದಿ:

‘ನಿಮಗೂ ಮಧ್ಯಬೆಟ್ಟು ತೋರಿಸೋಕೆ ಕಾಯುತ್ತಿದ್ದೇವೆ’; ಚಕ್ರವರ್ತಿ ಚಂದ್ರಚೂಡ್​ ಹೊರಹಾಕಲು ಆರಂಭವಾಗಿದೆ ಅಭಿಯಾನ

ಅಶ್ಲೀಲ ಸನ್ನೆ ಮಾಡಿ ಸಮತೋಲನದ ನೆಪ ಹೇಳಿದ ಚಕ್ರವರ್ತಿಗೆ ಸುದೀಪ್ ಸಖತ್​ ಕ್ಲಾಸ್​

Follow Us
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!