AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ, ಕಿಚ್ಚ ಕೊಟ್ಟ ಉತ್ತರ ಏನು?

ಸುದೀಪ್​ ವಿರುದ್ಧ ಚಕ್ರವರ್ತಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನು ಕೇಳಿದ ಸುದೀಪ್ ಕೂಲ್​ ಆಗಿಯೇ ತಿರುಗೇಟು ನೀಡಿದ್ದಾರೆ.

‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ, ಕಿಚ್ಚ ಕೊಟ್ಟ ಉತ್ತರ ಏನು?
‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ,  ಕಿಚ್ಚ ಕೊಟ್ಟ ಉತ್ತರ ಏನು?
TV9 Web
| Edited By: |

Updated on: Jul 25, 2021 | 7:21 AM

Share

ಸುದೀಪ್ ಹೇಳಿದ್ದ ವಿಚಾರವನ್ನು ಚಕ್ರವರ್ತಿ ಚಂದ್ರಚೂಡ್​ ಅವರು ತಿರುಚಿ ಹೇಳಿದ್ದರು. ಇದನ್ನು ವಾರಾಂತ್ಯದಲ್ಲಿ ಸುದೀಪ್​ ಚರ್ಚೆಗೆ ತೆಗೆದುಕೊಂಡರು. ಪದೇಪದೇ ಚಕ್ರವರ್ತಿ ಅವರದ್ದೇ ತಪ್ಪು ಎಂದು ಸುದೀಪ್ ಹೇಳಿದರು. ಇದು ಚಕ್ರವರ್ತಿ ಕೋಪಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲ, ಸುದೀಪ್​ ವಿರುದ್ಧ ಚಕ್ರವರ್ತಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನು ಕೇಳಿದ ಸುದೀಪ್ ಕೂಲ್​ ಆಗಿಯೇ ತಿರುಗೇಟು ನೀಡಿದ್ದಾರೆ.

‘ಬಿಗ್​ ಬಾಸ್​ ಮನೆಯಲ್ಲಿ ಪದೇಪದೇ ನನ್ನನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ನನ್ನನ್ನು ಸುದೀಪ್ ಸ್ತ್ರೀ ಪೀಡಕ ಎಂಬಂತೆ ಮಾಡಿದ್ದಾರೆ. ನಾನು ಟಾರ್ಗೆಟ್​ ಆಗುತ್ತಿದ್ದೇನೆ’ ಎಂದು ಬ್ರೇಕ್​ ಸಂದರ್ಭದಲ್ಲಿ ಚಕ್ರವರ್ತಿ ಸ್ಪರ್ಧಿಗಳ ಜತೆ ಅಭಿಪ್ರಾಯ ಹಂಚಿಕೊಂಡರು. ಬ್ರೇಕ್​ ತೆಗೆದುಕೊಂಡ ಬಂದ ನಂತರದಲ್ಲಿ ಚಕ್ರವರ್ತಿಯನ್ನು ಸುದೀಪ್​ ಹೊಗಳಿದರು.  ಆದರೆ, ಈ ಹೊಗಳಿಕೆ ಚಕ್ರವರ್ತಿಗೆ ಇಷ್ಟವಾಗಿಲ್ಲ.

‘ಪ್ರತಿ ವಾರವೂ ನನಗೊಂದು ಎಪಿಸೋಡ್​ ಮೀಸಲಿಡುತ್ತಿದ್ದೀರಿ. ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ. ಅಂತೂ ಈಗ ನಾಲ್ಕು ಸಾಲು​ ಒಳ್ಳೆದನ್ನು ಹೇಳಿದ್ದೀರಿ. ಸಾಧು ಸಂತರ ಮಧ್ಯೆ ನಾನು ಕ್ರಿಮಿನಲ್​ ಆಗಿದ್ದೇನೆ’ ಎಂದು ದೂರಿದರು ಚಕ್ರವರ್ತಿ.

ಇದಕ್ಕೆ ಕೊಟ್ಟ ಸುದೀಪ್​ ಸಖತ್​ ಖಡಕ್​ ಆಗಿತ್ತು. ‘ನೀವು ಹೇಳಿರೋದನ್ನೇ, ಮಾಡಿದ್ದನ್ನೇ ನಾನು ಹೇಳಿದ್ದೀನಿ. ನಂದೇನಾದರೂ ಇದೆಯಾ? ಒಳ್ಳೇದನ್ನೂ ಹೇಳಿದ್ದೀನಿ. ನಿಮ್ಮ ಜ್ಞಾನಕ್ಕೆ ನಾನು ಫ್ಯಾನ್​ ಎಂದು ಹೇಳಿದೀನಿ. ಈ ಮನೆಯಲ್ಲಿ ಎಷ್ಟು ಜನಕ್ಕೆ ಇದನ್ನು ಹೇಳಿದ್ದೇನೆ? ನಿಮ್ಮಲ್ಲಿ ಒಳ್ಳೆತನ ಇದೆ. ಈ ವಾರ ಕೋಪ ಕಂಟ್ರೋಲ್​ ಮಾಡಿಕೊಂಡ್ರಿ. ಅದನ್ನು ಹೇಳ್ತಾ ಇದೀನಿ. ನೀವು ಕೊಟ್ಟಿರೋ ಬೇಜಾರನ್ನು ಬೇಜಾರಿಂದಲೇ ಹೇಳದೇ ತುಪ್ಪ ಹಚ್ಚಿ ಹೇಳಲಾ? ನಿಮ್ಮ ವೇದಿಕೆಯಿಂದ ನಾಲ್ಕು ಜನ ಕಲಿಯಲಿ ಅನ್ನೋದು ನನ್ನ ಅರ್ಥ’  ಎಂದು ಸುದೀಪ್ ತಿರುಗೇಟು ನೀಡಿದರು.

ಇದನ್ನೂ ಓದಿ:

‘ನಿಮಗೂ ಮಧ್ಯಬೆಟ್ಟು ತೋರಿಸೋಕೆ ಕಾಯುತ್ತಿದ್ದೇವೆ’; ಚಕ್ರವರ್ತಿ ಚಂದ್ರಚೂಡ್​ ಹೊರಹಾಕಲು ಆರಂಭವಾಗಿದೆ ಅಭಿಯಾನ

ಅಶ್ಲೀಲ ಸನ್ನೆ ಮಾಡಿ ಸಮತೋಲನದ ನೆಪ ಹೇಳಿದ ಚಕ್ರವರ್ತಿಗೆ ಸುದೀಪ್ ಸಖತ್​ ಕ್ಲಾಸ್​

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್