AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮಂಗಳವಾರ ನಡೆಯಿತು ಎಲಿಮಿನೇಷನ್​; ದೊಡ್ಮನೆಯಿಂದ ಔಟ್​ ಆಗಿದ್ದು ಇವರೇ

ಬಿಗ್​ ಬಾಸ್​ ಮನೆಯಲ್ಲಿ ಒಂದು ಫೋನ್​ ಬೂತ್​ ಇಡಲಾಗಿದೆ. ಅದಕ್ಕೆ ಕರೆ ಮಾಡಿ ಒಂದು ಮೆಸೇಜ್​ ನೀಡಲಾಯಿತು. ಶುಭಾ ಪೂಂಜಾ, ದಿವ್ಯಾ ಉರುಡುಗ, ಪ್ರಶಾಂತ್​ ಸಂಬರಗಿ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​ ಅವರು ಫೋನ್​ನಲ್ಲಿ ಮಾತನಾಡಿದರು.

ಬಿಗ್​ ಬಾಸ್​ ಮನೆಯಲ್ಲಿ ಮಂಗಳವಾರ ನಡೆಯಿತು ಎಲಿಮಿನೇಷನ್​; ದೊಡ್ಮನೆಯಿಂದ ಔಟ್​ ಆಗಿದ್ದು ಇವರೇ
ಬಿಗ್ ಬಾಸ್​ ಕನ್ನಡ ಸೀಸನ್​ 8
TV9 Web
| Edited By: |

Updated on: Jul 27, 2021 | 10:37 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ನಲ್ಲಿ ಕೊನೇ ದಿನಗಳು ಹತ್ತಿರ ಆಗುತ್ತಿದ್ದಂತೆಯೇ ದೊಡ್ಮನೆಯಲ್ಲಿ ರೋಚಕತೆ ಹೆಚ್ಚಿದೆ. ಬಿಗ್ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ ಸ್ಪರ್ಧಿಗಳಿಗೆ ಹೊಸ ಹೊಸ ಟ್ವಿಸ್ಟ್​ಗಳನ್ನು ನೀಡಲಾಗುತ್ತಿದೆ. ಕಳೆದ ಭಾನುವಾರ (ಜು.25) ಇಬ್ಬರು ಎಲಿಮಿನೇಟ್​ ಆಗುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ ವಾರಾಂತ್ಯದ ಬದಲು ಮಿಡ್​ವೀಕ್​ನಲ್ಲಿ ಎಲಿಮಿನೇಷನ್​ (Elimination) ಇಡಲಾಗಿದೆ. ಈ ವೇಳೆ ಚಕ್ರವರ್ತಿ ಚಂದ್ರಚೂಡ್​ ಔಟ್​ ಆಗಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಒಂದು ಫೋನ್​ ಬೂತ್​ ಇಡಲಾಗಿದೆ. ಅದಕ್ಕೆ ಕರೆ ಮಾಡಿ ಒಂದು ಮೆಸೇಜ್​ ನೀಡಲಾಯಿತು. ಶುಭಾ ಪೂಂಜಾ, ದಿವ್ಯಾ ಉರುಡುಗ, ಪ್ರಶಾಂತ್​ ಸಂಬರಗಿ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​ ಅವರು ಫೋನ್​ನಲ್ಲಿ ಮಾತನಾಡಿದರು. ಇಷ್ಟು ಜನರಲ್ಲಿ ಒಬ್ಬರಿಗೆ ಈಗ ಬಿಗ್​ ಬಾಸ್​ ಪಯಣ ಕೊನೆ ಆಗಲಿದೆ ಎಂದು ಸೂಚನೆ ನೀಡಲಾಯಿತು. ಪ್ರತಿಯೊಬ್ಬರೂ ಗೇಟ್​ ಬಳಿ ಹೋಗಿ ನಿಲ್ಲಬೇಕು. ಯಾರಿಗೆ ಬಾಗಿಲು ತೆರೆಯುತ್ತದೆಯೋ ಅವರು ಎಲಿಮಿನೇಟ್​ ಆದಂತೆ. ಈ ವೇಳೆ ಚಕ್ರವರ್ತಿಗೆ ಬಾಗಿಲು ತೆಗೆದಿದೆ.

ಸಾಮಾನ್ಯವಾಗಿ ವೀಕೆಂಡ್​ನಲ್ಲಿ ಎಲಿಮಿನೇಟ್​ ಆದವರನ್ನು ಸುದೀಪ್​ ಅವರು ವೇದಿಕೆಗೆ ಕರೆಸಿ ಮಾತನಾಡಿಸುತ್ತಾರೆ. ಬಿಗ್​ ಬಾಸ್​ ಮನೆಯ ಅನುಭವವನ್ನು ಹಂಚಿಕೊಳ್ಳಲು ಅವಕಾಶ ನೀಡುತ್ತಾರೆ. ಆದರೆ ಇದು ವಿಡ್​ವೀಕ್​ ಎಲಿಮಿನೇಷನ್​ ಆದಕಾರಣ ಸುದೀಪ್​ ಅನುಪಸ್ಥಿತಿಯಲ್ಲೇ ಚಕ್ರವರ್ತಿ ಔಟ್​ ಆಗಿದ್ದಾರೆ.

ಪ್ರಿಯಾಂಕಾ ಎಲಿಮಿನೇಟ್​ ಆದಾಗ ಚಕ್ರವರ್ತಿ ಚಂದ್ರಚೂಡ್​ ನಡೆದುಕೊಂಡಿದ್ದ ರೀತಿ ಅನೇಕರಿಗೆ ಇಷ್ಟವಾಗಿರಲಿಲ್ಲ. ಅವರು ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿದ್ದರು. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಇವರು ಕಡಿಮೆ ವೋಟ್​ ಪಡೆದು ಔಟ್​ ಆಗಿದ್ದಾರೆ. ಈ ಮೂಲಕ ಬಿಗ್​ ಬಾಸ್​ ಮನೆಯ ಸ್ಪರ್ಧಿಗಳ ಸಂಖ್ಯೆ 8ಕ್ಕೆ ಇಳಿಕೆ ಆಗಿದೆ.

ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ಕೆ.ಪಿ, ಮಂಜು ಪಾವಗಡ, ಪ್ರಶಾಂತ್​ ಸಂಬರಗಿ, ಶಮಂತ್​ ಬ್ರೋ ಗೌಡ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​, ವೈಷ್ಣವಿ ಹಾಗೂ ಶುಭಾ ಪೂಂಜಾ ಆಟ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಎಲಿಮಿನೇಷನ್​: ತೆರೆಯಿತು ಬಾಗಿಲು; ಬಿಕ್ಕಿ ಬಿಕ್ಕಿ ಅತ್ತ ಪ್ರಶಾಂತ್​ ಸಂಬರಗಿ

‘ಆ ಕೈಸನ್ನೆ ತೋರಿಸಿದ್ದಕ್ಕೆ ಕ್ಷಮೆ ಕೇಳುತ್ತೇನೆ’; ಪ್ರಿಯಾಂಕಾ ತಿಮ್ಮೇಶ್​ ಬಳಿ ಶಿರಬಾಗಿ ಕ್ಷಮೆ ಕೇಳಿದ ಚಕ್ರವರ್ತಿ ಚಂದ್ರಚೂಡ್​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ