AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಚಕ್ರವರ್ತಿ ಚಂದ್ರಚೂಡ್​; ಸಂಬರಗಿಗೆ ಆರಂಭವಾಯ್ತು ಕಷ್ಟ ಕಾಲ?

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ಗೆ ಸಂಬಂಧಿಸಿ ಪ್ರಶಾಂತ್​ ಸಂಬರಗಿ ಸಾಕಷ್ಟು ರೀತಿಯ ಆರೋಪ ಮಾಡಿದ್ದಾರೆ. ಮಾಧ್ಯಮಗಳ ಎದುರು ಬರುವ ಪ್ರಶಾಂತ್ ವಿವಿಧ ಹೇಳಿಕೆ ನೀಡುತ್ತಿದ್ದಾರೆ.

ಪ್ರಶಾಂತ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಚಕ್ರವರ್ತಿ ಚಂದ್ರಚೂಡ್​; ಸಂಬರಗಿಗೆ ಆರಂಭವಾಯ್ತು ಕಷ್ಟ ಕಾಲ?
ಪ್ರಶಾಂತ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಚಕ್ರವರ್ತಿ ಚಂದ್ರಚೂಡ್​; ಸಂಬರಗಿಗೆ ಆರಂಭವಾಯ್ತು ಕಷ್ಟ ಕಾಲ?
TV9 Web
| Edited By: |

Updated on:Sep 15, 2021 | 5:04 PM

Share

ಪ್ರಶಾಂತ್ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಸೀಸನ್​ 8ರಲ್ಲಿ ಭೇಟಿ ಆಗುವುದಕ್ಕೂ ಮೊದಲೇ ಉತ್ತಮ ಗೆಳೆಯರು. ಆದರೆ, ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಇವರ ಗೆಳೆತನ ಕೆಟ್ಟು ಹೋಯಿತು. ನಾನಾ ವಿಚಾರಗಳಿಗೆ ಇಬ್ಬರ ನಡುವೆ ವೈಮನಸ್ಸು ಬೆಳೆದಿದೆ. ಈ ವಿಚಾರ ಬಿಗ್​ ಬಾಸ್​ ಮನೆಯಿಂದ ಹೊರ ಬಂದಮೇಲೂ ಮುಂದುವರಿದಿದೆ. ಈಗ ಪ್ರಶಾಂತ್​ ಸಂಬರಗಿ ವಿರುದ್ಧ ಚಕ್ರವರ್ತಿ ಚಂದ್ರಚೂಡ್​ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲು ಮಾಡಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತರಿಗೆ ಚಂದ್ರಚೂಡ್ ದೂರುನೀಡಿದ್ದಾರೆ. ‘ರಾಜಕೀಯ ವ್ಯಕ್ತಿ, ಸಿನಿಮಾ ನಟ-ನಟಿಯರ ವಿರುದ್ಧ ಸಾಕ್ಷ್ಯಗಳು ಇಲ್ಲದೆ ಪ್ರಶಾಂತ್ ಸಂಬರಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಬೆದರಿಕೆ ಹಾಕುತ್ತ ಸಂಬರಗಿ ಬ್ಲಾಕ್​ಮೇಲ್​ ಮಾಡುತ್ತಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳುವಂತೆ’ ಅವರು ಕೋರಿದ್ದಾರೆ.

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ಗೆ ಸಂಬಂಧಿಸಿ ಪ್ರಶಾಂತ್​ ಸಂಬರಗಿ ಸಾಕಷ್ಟು ರೀತಿಯ ಆರೋಪ ಮಾಡಿದ್ದಾರೆ. ಮಾಧ್ಯಮಗಳ ಎದುರು ಬರುವ ಪ್ರಶಾಂತ್ ವಿವಿಧ ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚೆಗೆ ಆ್ಯಂಕರ್​ ಅನುಶ್ರೀ ವಿರುದ್ಧ ಅವರು ಗಂಭೀರ ಆರೋಪ ಮಾಡಿದ್ದರು.

ಇತ್ತೀಚೆಗೆ ಚಕ್ರವರ್ತಿ ಚಂದ್ರಚೂಡ್​ ಪ್ರಶಾಂತ್​ ವಿರುದ್ಧ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ‘ಬಿಗ್ ಬಾಸ್​ನ ಎರಡನೇ ಇನ್ನಿಂಗ್ಸ್​ನ ಕ್ವಾರೈಂಟೈನ್ ಸಂದರ್ಭದಲಿ ಸ್ಪರ್ಧಿ ಅರವಿಂದ ಸೇರಿದಂತೆ ಹಲವರಿಗೆ ಮಧ್ಯಪಾನದ ಪಾರ್ಟಿಕೊಟ್ಟು (ಚಾನಲ್ ನಿಯಮಾವಳಿ ವಿರೋಧಿಸಿ) ವಿಡಿಯೋ ಮಾಡಿದ. ಸದ್ಯ ನಾನು ಇಂತಹ ಚಾಣಪತ್ರಿಗಳನ್ನ ತುಂಬಾ ನೋಡಿದವನು. ಕ್ಷಣಮಾತ್ರದಲ್ಲಿ ಕುತಂತ್ರ ಕಂಡುಹಿಡಿದು ಹೆಣ್ಣುಮಕ್ಕಳು ಅವನ ರೂಮಿಂದ ಹೋಗುವಂತೆ ಮಾಡಿದೆ’ ಎಂದು ಚಂದ್ರಚೂಡ್​ ಆರೋಪಿಸಿದ್ದರು.

‘ಅರವಿಂದ್ ವಿಡಿಯೋ ಮಾಡಿ ಅದನ್ನು ಯಾವಾಗ ಬಿಡುಗಡೆ ಮಾಡಬೇಕೆಂದು ಚಂದನ್ ಎಂಬ ಟ್ರೋಲಿಗನಿಗೆ ಕೊಟ್ಟುಬಂದ. ಇವನ ಮಾತ್ರೋಶ್ರೀ ಪುಷ್ಪ ಸಂಬರಗಿ ಅವರ ತಲೆಮೆಲೆ ಕೈಇಟ್ಟು ಹೇಳಲಿ ಇಂತಹ ಕೆಲಸ ಮಾಡಲಿಲ್ಲವೆಂದು. ಇಲ್ಲ, ತನ್ನ ಮೊಬೈಲ್ ಅನ್ನು ಪೋಲೀಸರ ತನಿಖೆಗೆ ಕೊಡಲಿ. ನಿಜಕ್ಕೂ ಕಲರ್ಸ್​ನ ಆಯೋಜಕರು ಯಾವ ಪರಿ ಬುದ್ಧಿವಾದ ಹೇಳಿ ಈತನಿಗಾಗಿ ಎಂಜಲು ಖರ್ಚು ಮಾಡಿದರೆಂದು ತನಿಖೆಯ ಸಣ್ಣ ಅಭ್ಯಾಸವಿದ್ದವರು ತಿಳಿದುಕೊಳ್ಳಬಹುದು’ ಎಂದು ಚಂದ್ರಚೂಡ್​ ಬರೆದುಕೊಂಡಿದ್ದರು.

ಇದನ್ನೂ ಓದಿ: ನವೆಂಬರ್ 1ಕ್ಕೆ ಶುಗರ್ ಡ್ಯಾಡಿ ಪುಸ್ತಕ ರಿಲೀಸ್; ಶೀಘ್ರವೇ 28 ಸೆಕೆಂಡ್​ಗಳ ಆಡಿಯೊ ಬಾಂಬ್: ಪ್ರಶಾಂತ್ ಸಂಬರಗಿ

‘ನಾನಿರೋದು ಬಾಡಿಗೆ ಮನೆಯಲ್ಲಿ’; ಪ್ರಶಾಂತ್​ ಸಂಬರಗಿಗೆ ತಿರುಗೇಟು ನೀಡಿದ ಅನುಶ್ರೀ

Published On - 4:31 pm, Wed, 15 September 21

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ