AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಕಿರುತೆರೆಯಿಂದ ಚಂದನ್ ಕುಮಾರ್ ಬ್ಯಾನ್​? ಕೇಳಿ ಬಂತು ಹೊಸ ಆಗ್ರಹ

ಈಗ ಚಂದನ್ ಕುಮಾರ್ ಅವರ ಮೇಲೆ ಕನಿಷ್ಠ ಎರಡು ವರ್ಷ ಬ್ಯಾನ್ ಹೇರುವಂತೆ ಆಗ್ರಹ ಕೇಳಿ ಬಂದಿದೆ

ತೆಲುಗು ಕಿರುತೆರೆಯಿಂದ ಚಂದನ್ ಕುಮಾರ್ ಬ್ಯಾನ್​? ಕೇಳಿ ಬಂತು ಹೊಸ ಆಗ್ರಹ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 02, 2022 | 6:00 PM

Share

ತೆಲುಗು ಕಿರುತೆರೆಯಿಂದ ಕನ್ನಡಿಗರನ್ನು ತುಳಿಯುವ ಕೆಲಸ ಆಗುತ್ತಿದೆ ಎಂದು ನಟ ಚಂದನ್ ಕುಮಾರ್ ಅವರು ಆರೋಪ ಮಾಡಿದ್ದರು. ‘ಶ್ರೀಮತಿ ಶ್ರೀನಿವಾಸ್​’  (Srimathi Srinivas) ಧಾರಾವಾಹಿ ಶೂಟಿಂಗ್ ಸಂದರ್ಭದಲ್ಲಿ ನಡೆದ ಗಲಾಟೆ ಕುರಿತು ಅವರು ಈ ಮಾತನ್ನು ಹೇಳಿದ್ದರು. ಈಗ ಚಂದನ್ ಕುಮಾರ್ (Chandan Kumar) ಅವರ ಮೇಲೆ ಕನಿಷ್ಠ ಎರಡು ವರ್ಷ ಬ್ಯಾನ್ ಹೇರುವಂತೆ ಆಗ್ರಹ ಕೇಳಿ ಬಂದಿದೆ. ‘ತೆಲುಗು ಕಿರುತೆರೆ ವಿರುದ್ಧ ಚಂದನ್ ಸುಳ್ಳು ಆರೋಪ ಮಾಡಿದ್ದಾರೆ. ಹೀಗಾಗಿ, ಅವರು ತೆಲುಗು ಒಟಿಟಿ ಮತ್ತು ಟಿವಿಯಲ್ಲಿ ಕೆಲಸ ಮಾಡದಂತೆ ಅವರ ಮೇಲೆ ನಿಷೇಧ ಹೇರಬೇಕು’ ಎಂದು ತೆಲುಗು ಟಿವಿ ಟೆಕ್ನೀಶಿಯನ್ಸ್​ ಹಾಗೂ ವರ್ಕರ್ಸ್​ ಇಂಡಸ್ಟ್ರಿ ಫೆಡರೇಷನ್​ ಅವರು ತೆಲುಗು ಟೆಲಿವಿಶನ್ ನಿರ್ಮಾಪಕರ ಮಂಡಳಿಗೆ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ.

‘ರಂಜಿತ್ ಎಂಬುವವರು ಬಂದು ಪದೇಪದೇ ಕಿರಿಕಿರಿ ಮಾಡಿದ್ದಾರೆ. ಈ ಕಾರಣಕ್ಕೆ ನಾನು ಅವರನ್ನು ತಳ್ಳಿದೆ. ಆದರೆ, ಅದನ್ನು ರಂಜಿತ್​ ಬೇರೆ ರೀತಿಯಲ್ಲಿ ಹೇಳಿದ್ದಾರೆ. ಚಿಕ್ಕ ವಿಚಾರವನ್ನು ದೊಡ್ಡದಾಗಿ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ನಡೆದಿದೆ. ಕನ್ನಡಿಗರನ್ನು ಅವರು ಸಹಿಸಿಕೊಳ್ಳುತ್ತಿಲ್ಲ’ ಎಂದು ಚಂದನ್ ಕುಮಾರ್ ಆಗಸ್ಟ್ 1ರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು. ಆದರೆ, ಚಂದನ್ ಮಾಡಿರುವುದು ಸುಳ್ಳು ಆರೋಪ ಎಂಬುದು ತೆಲುಗು ಟಿವಿ ಟೆಕ್ನೀಶಿಯನ್ಸ್​ ಹಾಗೂ ವರ್ಕರ್ಸ್​ ಇಂಡಸ್ಟ್ರಿ ಫೆಡರೇಷನ್​ ಅವರ ವಾದ.

‘ಶ್ರೀಮತಿ ಶ್ರೀನಿವಾಸ್ ಶೂಟಿಂಗ್ ಸಂದರ್ಭದಲ್ಲಿ ರಂಜಿತ್ ಅವರು ನಿರ್ದೇಶಕರ ಆಣತಿಯಂತೆ ಚಂದನ್ ಅವರನ್ನು ಕರೆದಿದ್ದಾರೆ. ಈ ವೇಳೆ ಚಂದನ್​ ಕುಮಾರ್ ಅವರು ರಂಜಿತ್​ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿದ್ದಾರೆ. ಇದರಲ್ಲಿ ರಂಜಿತ್ ಅವರ ತಪ್ಪು ಇಲ್ಲ. ಚಂದನ್ ಅವರನ್ನು ಕನಿಷ್ಠ ಎರಡು ವರ್ಷಗಳ ಕಾಲ ತೆಲುಗು ಒಟಿಟಿ ಹಾಗೂ ತೆಲುಗು ಧಾರಾವಾಹಿಗಳಿಂದ ಬ್ಯಾನ್ ಮಾಡಬೇಕು ಎಂಬುದು ನಮ್ಮ ಕೋರಿಕೆ’ ಎಂದು ಟಿವಿ ಟೆಕ್ನೀಶಿಯನ್ಸ್​ ಹಾಗೂ ವರ್ಕರ್ಸ್​ ಇಂಡಸ್ಟ್ರಿ ಫೆಡರೇಷನ್​ ಅವರು ಟೆಲಿವಿಶನ್ ನಿರ್ಮಾಪಕರ ಮಂಡಳಿಗೆ ಸಲ್ಲಿಕೆ ಮಾಡಿದ ಮನವಿಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ
Image
ಚಂದನ್ ಪತ್ನಿ ಕವಿತಾ ಗೌಡ ತೆಲುಗು ಸೀರಿಯಲ್ ತೊರೆದಿದ್ದೇಕೆ? ನಟಿ ಬಿಚ್ಚಿಟ್ರು ಅಸಲಿ ವಿಚಾರ
Image
‘ನಾನು ಮತ್ತೆ ಆ ಧಾರಾವಾಹಿ ಮಾಡಲ್ಲ’; ತೆಲುಗು ಸೀರಿಯಲ್​ನಿಂದ ಹೊರ ಬರುವ ನಿರ್ಧಾರ ತೆಗೆದುಕೊಂಡ ಚಂದನ್ ಕುಮಾರ್
Image
‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್
Image
Chandan Kumar: ಕನ್ನಡದ ನಟ ಚಂದನ್​ ಕುಮಾರ್​ಗೆ ತೆಲುಗು ಧಾರಾವಾಹಿ ಶೂಟಿಂಗ್​ ಸೆಟ್​ನಲ್ಲಿ ಹಲ್ಲೆ; ವಿಡಿಯೋ ವೈರಲ್​

ಇದನ್ನೂ ಓದಿ: ಚಂದನ್ ಪತ್ನಿ ಕವಿತಾ ಗೌಡ ತೆಲುಗು ಸೀರಿಯಲ್ ತೊರೆದಿದ್ದೇಕೆ? ನಟಿ ಬಿಚ್ಚಿಟ್ರು ಅಸಲಿ ವಿಚಾರ

‘ಶ್ರೀಮತಿ ಶ್ರೀನಿವಾಸ್​’ ಧಾರಾವಾಹಿಯಿಂದ ಹೊರ ಬರುವ ಬಗ್ಗೆ ಚಂದನ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲೇ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಅವರನ್ನು ತೆಲುಗು ಕಿರುತೆರೆಯಿಂದಲೇ ಹೊರಗಿಡುವ ಪ್ರಯತ್ನಗಳು ನಡೆಯುತ್ತಿವೆ. ಅಂತಿಮವಾಗಿ ಟೆಲಿವಿಶನ್ ನಿರ್ಮಾಪಕರ ಮಂಡಳಿ ಈ ಬಗ್ಗೆ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Published On - 5:38 pm, Tue, 2 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!