AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದು ನಾನು ಜೀವನದಲ್ಲಿ ತೆಗೆದುಕೊಂಡ ಅತಿದೊಡ್ಡ ಕೆಟ್ಟ ನಿರ್ಧಾರ’; ಮರುಗಿದ ಚಂದನ್ ಕುಮಾರ್

ಚಂದನ್ ಕುಮಾರ್ ಅವರು ಕಿರುತೆರೆ ಮೂಲಕ ಖ್ಯಾತಿ ಪಡೆದ ನಟ. ಅವರು ಸಿನಿಮಾಗಳಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ, ಆರ್ಥಿಕ ಸಂಕಷ್ಟಗಳನ್ನು ಎದುರಿಸಿದ ಅವರು ಧಾರಾವಾಹಿಗಳ ಮೂಲಕ ಸಮಸ್ಯೆಗಳನ್ನು ನಿವಾರಿಸಿಕೊಂಡರು. ಇಂದು ಅವರು ತಮ್ಮ ಹೋಟೆಲ್ ವ್ಯವಹಾರದಲ್ಲಿ ನಿರತರಾಗಿದ್ದಾರೆ. ಜೀವನದಲ್ಲಿ ಏಳುಬೀಳುಗಳನ್ನು ಕಂಡ ಅವರ ಅನುಭವಗಳನ್ನು ಅವರು ಒಂದು ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ.

‘ಅದು ನಾನು ಜೀವನದಲ್ಲಿ ತೆಗೆದುಕೊಂಡ  ಅತಿದೊಡ್ಡ ಕೆಟ್ಟ ನಿರ್ಧಾರ’; ಮರುಗಿದ ಚಂದನ್ ಕುಮಾರ್
ಚಂದನ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Sep 09, 2025 | 7:35 AM

Share

ಕಿರುತೆರೆ ಮೂಲಕ ಫೇಮಸ್ ಆದ ಚಂದನ್ ಕುಮಾರ್ (Chandan Kumar) ನಂತರ ಹಿರಿತೆರೆಯಲ್ಲೂ ಮಿಂಚಿದರು. ಈಗ ಅವರು ಅಷ್ಟಾಗಿ ನಟನೆಯಲ್ಲಿ ಬ್ಯುಸಿ ಇಲ್ಲ. ಪತ್ನಿ ಕವಿತಾ ಜೊತೆ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಅವರು ತಮ್ಮದೇ ಆದ ಹೋಟೆಲ್ ಬಿಸ್ನೆಸ್ ಹೊಂದಿದ್ದಾರೆ. ಅವರು ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದಾರೆ. ಈ ಬಗ್ಗೆ ಚಂದನ್ ಕುಮಾರ್ ಅವರು ರ‍್ಯಾಪಿಡ್ ರಶ್ಮಿ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.

‘ಕೆಟ್ಟ ಸಿನಿಮಾ ಮಾಡೋದಕ್ಕಿಂತ ಧಾರಾವಾಹಿ ಮಾಡೋದು ಬೆಸ್ಟ್ ಎಂದು ನನಗೆ ಅನಿಸುತ್ತದೆ. ಪ್ರೇಮ ಬರಹ ನನಗೆ ಒಳ್ಳೆಯ ಹೆಸರು ತಂದುಕೊಟ್ಟಿತು. ಸಿನಿಮಾ ಕೂಡ ಯಶಸ್ಸು ಕಂಡಿತು. ಈ ಚಿತ್ರ ಆದಮೇಲೆ ಬರುತ್ತಿದ್ದ ಕಥೆಗಳು ಒಂದೇ ರೀತಿಯಲ್ಲಿ ಇದ್ದವು. ನೀವು ಶ್ರೀಮಂತರ ಮನೆ ಹುಡುಗ, ಅವಳು ಬಡವರ ಮನೆ ಹುಡುಗಿ, ಕೊನೆಯಲ್ಲಿ ಒಂದಾಗ್ತಾರೋ ಅಥವಾ ಇಲ್ಲವೋ ಎಂಬುದೇ ಸ್ಟೋರಿ. ಹೀಗಾಗಿ ಸಿನಿಮಾ ಮಾಡಲು ಮನಸ್ಸು ಬರಲಿಲ್ಲ’ ಎಂದಿದ್ದಾರೆ ಚಂದನ್ ಕುಮಾರ್.

ಜೀವನದಲ್ಲಿ ಚಂದನ್ ಒಂದು ಕೆಟ್ಟ ನಿರ್ಧಾರ ತೆಗೆದುಕೊಂಡರಂತೆ. ಆ ಸಮಯದಲ್ಲಿ ಅವರು ಇದಕ್ಕೆ ಮರುಗಿದ್ದರು. ‘ಪ್ರೇಮಬರಹ ಸಮಯದಲ್ಲಿ ಒಂದು ತಪ್ಪು ನಿರ್ಧಾರ ಮಾಡಿದೆ. ಕಾರು ತೆಗೆದುಕೊಂಡೆ. ಕಾರಿನ ಮೇಲೆ 20 ಲಕ್ಷ ರೂಪಾಯಿ ಸಾಲ ಇತ್ತು. ಕೆಲಸ ಇಲ್ಲದೆ, ಇಎಂಐ ಕಟ್ಟಲು ಸಾಧ್ಯ ಆಗುತ್ತಿರಲಿಲ್ಲ. ಆಗ ಮೂರ್ನಾಲ್ಕು ವಾಹಿನಿಗಳಿಂದ ಧಾರಾವಾಹಿಗಾಗಿ ನಿರಂತರವಾಗಿ ಕರೆಗಳು ಬರುತ್ತಲೇ ಇದ್ದವು’ ಎಂದಿದ್ದಾರೆ ಚಂದನ್. ಕಾರಿನ ಸಾಲ ತೀರಿಸಲು ಧಾರಾವಾಹಿ ಸಹಾಯ ಆಯ್ತು.

ಇದನ್ನೂ ಓದಿ: ‘ನಾನು ಮತ್ತೆ ಆ ಧಾರಾವಾಹಿ ಮಾಡಲ್ಲ’; ತೆಲುಗು ಸೀರಿಯಲ್​ನಿಂದ ಹೊರ ಬರುವ ನಿರ್ಧಾರ ತೆಗೆದುಕೊಂಡ ಚಂದನ್ ಕುಮಾರ್

‘ನಾನು ಧಾರಾವಾಹಿಯವರ ಬಳಿ ದೊಡ್ಡ ಪೇಮೆಂಟ್ ಕೇಳಿದೆ. ಅವರು ಕೊಡ್ತೀನಿ ಎಂದರು. ಲೈಫ್ ಸೆಟಲ್ ಆಯಿತು ಎಂದನಿಸಿತು. ನಾನು ಮತ್ತು ಕವಿತಾ ಕುಕ್ ವಿತ್ ಕಿರಿಕ್ ಎಂದು ಶೋ ಮಾಡ್ತಾ ಇದ್ದೆವು. ಆ ಶೋನಿಂದ ಬಂದ ಹಣದಲ್ಲಿ ಮದುವೆ ಆಯಿತು. ಗಳಿಕೆ ಮಾಡೋದು, ಖರ್ಚು ಮಾಡೋದು ಅಷ್ಟೇ’ ಎಂದಿದ್ದಾರೆ ಚಂದನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ