AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್

ಧಾರಾವಾಹಿ ಶೂಟಿಂಗ್ ವೇಳೆ ಚಂದನ್​ ಅವರು ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು. ಬಳಿಕ ಚಂದನ್​ ಕ್ಷಮೆ ಕೇಳಿದರು.

‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್
ಚಂದನ್ ಕುಮಾರ್
TV9 Web
| Edited By: |

Updated on: Aug 01, 2022 | 3:17 PM

Share

ಕನ್ನಡದ ಹೀರೋ ಚಂದನ್ ಕುಮಾರ್ (ಚಂದನ್ ಕುಮಾರ್) ಸುದ್ದಿಯಲ್ಲಿದ್ದಾರೆ. ತೆಲುಗಿನ ‘ಶ್ರೀಮತಿ ಶ್ರೀನಿವಾಸ್​’ ಧಾರಾವಾಹಿ ಶೂಟಿಂಗ್ ವೇಳೆ ಅವರು ಕಿರಿಕ್ ಮಾಡಿಕೊಂಡಿದ್ದಾರೆ. ಇದರಿಂದ ಅವರ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಚಂದನ್​ ಕುಮಾರ್ ಅವರಿಂದ ಸ್ಪಷ್ಟನೆ ನೀಡುವ ಕೆಲಸ ಆಗಿತ್ತು. ‘ಅಮ್ಮನಿಗೆ ಅನಾರೋಗ್ಯ ಉಂಟಾಗಿದೆ. ಆ ಚಿಂತೆಯಲ್ಲಿ ಈ ರೀತಿ ಆಯಿತು’ ಎಂದು ಹೇಳಿದ್ದರು. ಇದಕ್ಕೆ ಪೂರಕವಾಗಿ ಈಗ ಅವರು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಧಾರಾವಾಹಿ ಶೂಟಿಂಗ್ ವೇಳೆ ಚಂದನ್​ ಅವರು ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು. ಬಳಿಕ ಚಂದನ್​ ಕ್ಷಮೆ ಕೇಳಿದರು. ಆದಾಗ್ಯೂ ಪರಿಸ್ಥಿತಿ ಬಿಗಡಾಯಿಸಿತ್ತು. ಆಗ ಕೈಕೈ ಮಿಲಾಯಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಚಂದನ್ ಕಡೆಯಿಂದ ಸ್ಪಷ್ಟನೆ ದೊರಕಿತ್ತು.

ಇದನ್ನೂ ಓದಿ
Image
Chandan Kumar: ನಟ ಚಂದನ್​ ಕುಮಾರ್​ ಮೇಲೆ ಹಲ್ಲೆ: ವೈರಲ್​ ವಿಡಿಯೋದಲ್ಲಿದೆ ಕಪಾಳಮೋಕ್ಷದ ದೃಶ್ಯ
Image
Chandan Kumar: ಕನ್ನಡದ ನಟ ಚಂದನ್​ ಕುಮಾರ್​ಗೆ ತೆಲುಗು ಧಾರಾವಾಹಿ ಶೂಟಿಂಗ್​ ಸೆಟ್​ನಲ್ಲಿ ಹಲ್ಲೆ; ವಿಡಿಯೋ ವೈರಲ್​
Image
ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್
Image
ಮಾಸ್ಕ್​ ಧರಿಸಿ ಹಸೆಮಣೆ ಏರಿದ ಚಂದನ್​ ಕುಮಾರ್​-ಕವಿತಾ ಗೌಡ; ಲಾಕ್​ಡೌನ್​ ಮಧ್ಯೆಯೇ ಸಿಂಪಲ್​ ವಿವಾಹ

‘ಅಮ್ಮನಿಗೆ ಅನಾರೋಗ್ಯ ಕಾಡಿದೆ. ನಾನು ಆ ಟೆನ್ಷನ್​​ನಲ್ಲಿ ಇದ್ದೆ. ಆಸ್ಪತ್ರೆಯಿಂದ ನೇರವಾಗಿ ಶೂಟಿಂಗ್​ಗೆ ತೆರಳಿದ್ದೆ. ಆಗ ಕ್ಯಾಮೆರಾ ಸಹಾಯಕ ನನಗೆ ಸ್ವಲ್ಪ ಕಿರಿಕಿರಿ ಮಾಡಿದರು. ಹೀಗಾಗಿ ಆ ಘಟನೆ ನಡೆಯಿತು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ.

‘ಬೇಗ ಗುಣಮುಖರಾಗಿ ಅಮ್ಮಾ. ನಿಮ್ಮನ್ನು ನೋಡಿಕೊಳ್ಳಲು ನಾನು ಅಲ್ಲಿರಬೇಕಿತ್ತು. ನಾನು ನಿಮ್ಮನ್ನು ನೋಡಲು ಬರುತ್ತಿದ್ದೇನೆ. ಲವ್​​ ಯೂ ಸೋ ಮಚ್​’ ಎಂದು ಚಂದನ್ ಕುಮಾರ್ ಬರೆದುಕೊಂಡಿದ್ದಾರೆ. ಇದಕ್ಕೆ ಚಂದನ್ ಫ್ಯಾನ್ಸ್ ಬೆಂಬಲ ಸೂಚಿಸಿದ್ದಾರೆ. ‘ನಿಮ್ಮ ತಾಯಿ ಬೇಗ ಗುಣಮುಖರಾಗುತ್ತಾರೆ. ಆ ಧಾರಾವಾಹಿಯಿಂದ ಬೇಗ ಹೊರಬನ್ನಿ’ ಎಂದು ಫ್ಯಾನ್ಸ್ ಕೋರಿದ್ದಾರೆ.

ಇದನ್ನೂ ಓದಿ: Chandan Kumar: ನಟ ಚಂದನ್​ ಕುಮಾರ್​ ಮೇಲೆ ಹಲ್ಲೆ: ವೈರಲ್​ ವಿಡಿಯೋದಲ್ಲಿದೆ ಕಪಾಳಮೋಕ್ಷದ ದೃಶ್ಯ

ಚಂದನ್ ಕುಮಾರ್ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಚಂದನ್ ಕನ್ನಡದ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ಹೆಸರು ಮಾಡಿದ್ದಾರೆ. ಕವಿತಾ ಗೌಡ ಅವರನ್ನು ಪ್ರೀತಿಸಿ ಮುದುವೆ ಆದರು. ಈ ಮೊದಲು ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಹೆಸರಿನ ತೆಲುಗು ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದರು. ಮದುವೆ ಸಂದರ್ಭದಲ್ಲಿ ಈ ಧಾರಾವಾಹಿಯಿಂದ ಅವರು ಹೊರ ಬಂದಿದ್ದರು.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ