AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್

ಧಾರಾವಾಹಿ ಶೂಟಿಂಗ್ ವೇಳೆ ಚಂದನ್​ ಅವರು ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು. ಬಳಿಕ ಚಂದನ್​ ಕ್ಷಮೆ ಕೇಳಿದರು.

‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್
ಚಂದನ್ ಕುಮಾರ್
TV9 Web
| Edited By: |

Updated on: Aug 01, 2022 | 3:17 PM

Share

ಕನ್ನಡದ ಹೀರೋ ಚಂದನ್ ಕುಮಾರ್ (ಚಂದನ್ ಕುಮಾರ್) ಸುದ್ದಿಯಲ್ಲಿದ್ದಾರೆ. ತೆಲುಗಿನ ‘ಶ್ರೀಮತಿ ಶ್ರೀನಿವಾಸ್​’ ಧಾರಾವಾಹಿ ಶೂಟಿಂಗ್ ವೇಳೆ ಅವರು ಕಿರಿಕ್ ಮಾಡಿಕೊಂಡಿದ್ದಾರೆ. ಇದರಿಂದ ಅವರ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಚಂದನ್​ ಕುಮಾರ್ ಅವರಿಂದ ಸ್ಪಷ್ಟನೆ ನೀಡುವ ಕೆಲಸ ಆಗಿತ್ತು. ‘ಅಮ್ಮನಿಗೆ ಅನಾರೋಗ್ಯ ಉಂಟಾಗಿದೆ. ಆ ಚಿಂತೆಯಲ್ಲಿ ಈ ರೀತಿ ಆಯಿತು’ ಎಂದು ಹೇಳಿದ್ದರು. ಇದಕ್ಕೆ ಪೂರಕವಾಗಿ ಈಗ ಅವರು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಧಾರಾವಾಹಿ ಶೂಟಿಂಗ್ ವೇಳೆ ಚಂದನ್​ ಅವರು ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು. ಬಳಿಕ ಚಂದನ್​ ಕ್ಷಮೆ ಕೇಳಿದರು. ಆದಾಗ್ಯೂ ಪರಿಸ್ಥಿತಿ ಬಿಗಡಾಯಿಸಿತ್ತು. ಆಗ ಕೈಕೈ ಮಿಲಾಯಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಚಂದನ್ ಕಡೆಯಿಂದ ಸ್ಪಷ್ಟನೆ ದೊರಕಿತ್ತು.

ಇದನ್ನೂ ಓದಿ
Image
Chandan Kumar: ನಟ ಚಂದನ್​ ಕುಮಾರ್​ ಮೇಲೆ ಹಲ್ಲೆ: ವೈರಲ್​ ವಿಡಿಯೋದಲ್ಲಿದೆ ಕಪಾಳಮೋಕ್ಷದ ದೃಶ್ಯ
Image
Chandan Kumar: ಕನ್ನಡದ ನಟ ಚಂದನ್​ ಕುಮಾರ್​ಗೆ ತೆಲುಗು ಧಾರಾವಾಹಿ ಶೂಟಿಂಗ್​ ಸೆಟ್​ನಲ್ಲಿ ಹಲ್ಲೆ; ವಿಡಿಯೋ ವೈರಲ್​
Image
ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್
Image
ಮಾಸ್ಕ್​ ಧರಿಸಿ ಹಸೆಮಣೆ ಏರಿದ ಚಂದನ್​ ಕುಮಾರ್​-ಕವಿತಾ ಗೌಡ; ಲಾಕ್​ಡೌನ್​ ಮಧ್ಯೆಯೇ ಸಿಂಪಲ್​ ವಿವಾಹ

‘ಅಮ್ಮನಿಗೆ ಅನಾರೋಗ್ಯ ಕಾಡಿದೆ. ನಾನು ಆ ಟೆನ್ಷನ್​​ನಲ್ಲಿ ಇದ್ದೆ. ಆಸ್ಪತ್ರೆಯಿಂದ ನೇರವಾಗಿ ಶೂಟಿಂಗ್​ಗೆ ತೆರಳಿದ್ದೆ. ಆಗ ಕ್ಯಾಮೆರಾ ಸಹಾಯಕ ನನಗೆ ಸ್ವಲ್ಪ ಕಿರಿಕಿರಿ ಮಾಡಿದರು. ಹೀಗಾಗಿ ಆ ಘಟನೆ ನಡೆಯಿತು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ.

‘ಬೇಗ ಗುಣಮುಖರಾಗಿ ಅಮ್ಮಾ. ನಿಮ್ಮನ್ನು ನೋಡಿಕೊಳ್ಳಲು ನಾನು ಅಲ್ಲಿರಬೇಕಿತ್ತು. ನಾನು ನಿಮ್ಮನ್ನು ನೋಡಲು ಬರುತ್ತಿದ್ದೇನೆ. ಲವ್​​ ಯೂ ಸೋ ಮಚ್​’ ಎಂದು ಚಂದನ್ ಕುಮಾರ್ ಬರೆದುಕೊಂಡಿದ್ದಾರೆ. ಇದಕ್ಕೆ ಚಂದನ್ ಫ್ಯಾನ್ಸ್ ಬೆಂಬಲ ಸೂಚಿಸಿದ್ದಾರೆ. ‘ನಿಮ್ಮ ತಾಯಿ ಬೇಗ ಗುಣಮುಖರಾಗುತ್ತಾರೆ. ಆ ಧಾರಾವಾಹಿಯಿಂದ ಬೇಗ ಹೊರಬನ್ನಿ’ ಎಂದು ಫ್ಯಾನ್ಸ್ ಕೋರಿದ್ದಾರೆ.

ಇದನ್ನೂ ಓದಿ: Chandan Kumar: ನಟ ಚಂದನ್​ ಕುಮಾರ್​ ಮೇಲೆ ಹಲ್ಲೆ: ವೈರಲ್​ ವಿಡಿಯೋದಲ್ಲಿದೆ ಕಪಾಳಮೋಕ್ಷದ ದೃಶ್ಯ

ಚಂದನ್ ಕುಮಾರ್ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಚಂದನ್ ಕನ್ನಡದ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ಹೆಸರು ಮಾಡಿದ್ದಾರೆ. ಕವಿತಾ ಗೌಡ ಅವರನ್ನು ಪ್ರೀತಿಸಿ ಮುದುವೆ ಆದರು. ಈ ಮೊದಲು ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಹೆಸರಿನ ತೆಲುಗು ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದರು. ಮದುವೆ ಸಂದರ್ಭದಲ್ಲಿ ಈ ಧಾರಾವಾಹಿಯಿಂದ ಅವರು ಹೊರ ಬಂದಿದ್ದರು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್