AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್

ಧಾರಾವಾಹಿ ಶೂಟಿಂಗ್ ವೇಳೆ ಚಂದನ್​ ಅವರು ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು. ಬಳಿಕ ಚಂದನ್​ ಕ್ಷಮೆ ಕೇಳಿದರು.

‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್
ಚಂದನ್ ಕುಮಾರ್
TV9 Web
| Edited By: |

Updated on: Aug 01, 2022 | 3:17 PM

Share

ಕನ್ನಡದ ಹೀರೋ ಚಂದನ್ ಕುಮಾರ್ (ಚಂದನ್ ಕುಮಾರ್) ಸುದ್ದಿಯಲ್ಲಿದ್ದಾರೆ. ತೆಲುಗಿನ ‘ಶ್ರೀಮತಿ ಶ್ರೀನಿವಾಸ್​’ ಧಾರಾವಾಹಿ ಶೂಟಿಂಗ್ ವೇಳೆ ಅವರು ಕಿರಿಕ್ ಮಾಡಿಕೊಂಡಿದ್ದಾರೆ. ಇದರಿಂದ ಅವರ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಚಂದನ್​ ಕುಮಾರ್ ಅವರಿಂದ ಸ್ಪಷ್ಟನೆ ನೀಡುವ ಕೆಲಸ ಆಗಿತ್ತು. ‘ಅಮ್ಮನಿಗೆ ಅನಾರೋಗ್ಯ ಉಂಟಾಗಿದೆ. ಆ ಚಿಂತೆಯಲ್ಲಿ ಈ ರೀತಿ ಆಯಿತು’ ಎಂದು ಹೇಳಿದ್ದರು. ಇದಕ್ಕೆ ಪೂರಕವಾಗಿ ಈಗ ಅವರು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಧಾರಾವಾಹಿ ಶೂಟಿಂಗ್ ವೇಳೆ ಚಂದನ್​ ಅವರು ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು. ಬಳಿಕ ಚಂದನ್​ ಕ್ಷಮೆ ಕೇಳಿದರು. ಆದಾಗ್ಯೂ ಪರಿಸ್ಥಿತಿ ಬಿಗಡಾಯಿಸಿತ್ತು. ಆಗ ಕೈಕೈ ಮಿಲಾಯಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಚಂದನ್ ಕಡೆಯಿಂದ ಸ್ಪಷ್ಟನೆ ದೊರಕಿತ್ತು.

ಇದನ್ನೂ ಓದಿ
Image
Chandan Kumar: ನಟ ಚಂದನ್​ ಕುಮಾರ್​ ಮೇಲೆ ಹಲ್ಲೆ: ವೈರಲ್​ ವಿಡಿಯೋದಲ್ಲಿದೆ ಕಪಾಳಮೋಕ್ಷದ ದೃಶ್ಯ
Image
Chandan Kumar: ಕನ್ನಡದ ನಟ ಚಂದನ್​ ಕುಮಾರ್​ಗೆ ತೆಲುಗು ಧಾರಾವಾಹಿ ಶೂಟಿಂಗ್​ ಸೆಟ್​ನಲ್ಲಿ ಹಲ್ಲೆ; ವಿಡಿಯೋ ವೈರಲ್​
Image
ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್
Image
ಮಾಸ್ಕ್​ ಧರಿಸಿ ಹಸೆಮಣೆ ಏರಿದ ಚಂದನ್​ ಕುಮಾರ್​-ಕವಿತಾ ಗೌಡ; ಲಾಕ್​ಡೌನ್​ ಮಧ್ಯೆಯೇ ಸಿಂಪಲ್​ ವಿವಾಹ

‘ಅಮ್ಮನಿಗೆ ಅನಾರೋಗ್ಯ ಕಾಡಿದೆ. ನಾನು ಆ ಟೆನ್ಷನ್​​ನಲ್ಲಿ ಇದ್ದೆ. ಆಸ್ಪತ್ರೆಯಿಂದ ನೇರವಾಗಿ ಶೂಟಿಂಗ್​ಗೆ ತೆರಳಿದ್ದೆ. ಆಗ ಕ್ಯಾಮೆರಾ ಸಹಾಯಕ ನನಗೆ ಸ್ವಲ್ಪ ಕಿರಿಕಿರಿ ಮಾಡಿದರು. ಹೀಗಾಗಿ ಆ ಘಟನೆ ನಡೆಯಿತು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ.

‘ಬೇಗ ಗುಣಮುಖರಾಗಿ ಅಮ್ಮಾ. ನಿಮ್ಮನ್ನು ನೋಡಿಕೊಳ್ಳಲು ನಾನು ಅಲ್ಲಿರಬೇಕಿತ್ತು. ನಾನು ನಿಮ್ಮನ್ನು ನೋಡಲು ಬರುತ್ತಿದ್ದೇನೆ. ಲವ್​​ ಯೂ ಸೋ ಮಚ್​’ ಎಂದು ಚಂದನ್ ಕುಮಾರ್ ಬರೆದುಕೊಂಡಿದ್ದಾರೆ. ಇದಕ್ಕೆ ಚಂದನ್ ಫ್ಯಾನ್ಸ್ ಬೆಂಬಲ ಸೂಚಿಸಿದ್ದಾರೆ. ‘ನಿಮ್ಮ ತಾಯಿ ಬೇಗ ಗುಣಮುಖರಾಗುತ್ತಾರೆ. ಆ ಧಾರಾವಾಹಿಯಿಂದ ಬೇಗ ಹೊರಬನ್ನಿ’ ಎಂದು ಫ್ಯಾನ್ಸ್ ಕೋರಿದ್ದಾರೆ.

ಇದನ್ನೂ ಓದಿ: Chandan Kumar: ನಟ ಚಂದನ್​ ಕುಮಾರ್​ ಮೇಲೆ ಹಲ್ಲೆ: ವೈರಲ್​ ವಿಡಿಯೋದಲ್ಲಿದೆ ಕಪಾಳಮೋಕ್ಷದ ದೃಶ್ಯ

ಚಂದನ್ ಕುಮಾರ್ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಚಂದನ್ ಕನ್ನಡದ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ಹೆಸರು ಮಾಡಿದ್ದಾರೆ. ಕವಿತಾ ಗೌಡ ಅವರನ್ನು ಪ್ರೀತಿಸಿ ಮುದುವೆ ಆದರು. ಈ ಮೊದಲು ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಹೆಸರಿನ ತೆಲುಗು ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದರು. ಮದುವೆ ಸಂದರ್ಭದಲ್ಲಿ ಈ ಧಾರಾವಾಹಿಯಿಂದ ಅವರು ಹೊರ ಬಂದಿದ್ದರು.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು