AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​

ಕನ್ನಡ ಬಿಗ್​ ಬಾಸ್​ ಸೀಸನ್​ 6ರ ಸ್ಪರ್ಧಿಗಳ ಪಟ್ಟಿಯಲ್ಲಿ ಚಂದನ್​ ಶೆಟ್ಟಿ-ನಿವೇದಿತಾ ಗೌಡ ಹೆಸರು ಕೂಡ ಇತ್ತು. ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಒಬ್ಬರಿಗೊಬ್ಬರು ಪರಿಚಯಗೊಂಡರು.

ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​
ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​
TV9 Web
| Edited By: |

Updated on: Aug 12, 2021 | 9:00 PM

Share

ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಇಬ್ಬರೂ ಬಿಗ್​ ಬಾಸ್ ಮನೆಯಲ್ಲಿ ಒಬ್ಬರನ್ನೊಬ್ಬರು ಭೇಟಿ ಆದರು. ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿತ್ತು. ನಂತರ ಇದು ಪ್ರೀತಿಗೆ ತಿರುಗಿ, ಮದುವೆ ಆದರು. ಈಗ ಈ ಜೋಡಿ ಕಲರ್ಸ್​ ಕನ್ನಡ ವಾಹಿನಿಯ ‘ರಾಜಾ-ರಾಣಿ’ ಶೋಗೆ ಬಂದಿದೆ. ಈ ವೇಳೆ ಚಂದನ್​ ಶೆಟ್ಟಿ ಅವರು ನಿವೇದಿತಾ ಹೇಗೆ ಮಾತನಾಡುತ್ತಾರೆ ಎಂಬುದನ್ನು ಅನುಕರಿಸಿ ತೋರಿಸಿದ್ದಾರೆ.

ಕನ್ನಡ ಬಿಗ್​ ಬಾಸ್​ ಸೀಸನ್​ 6ರ ಸ್ಪರ್ಧಿಗಳ ಪಟ್ಟಿಯಲ್ಲಿ ಚಂದನ್​ ಶೆಟ್ಟಿ-ನಿವೇದಿತಾ ಗೌಡ ಹೆಸರು ಕೂಡ ಇತ್ತು. ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಒಬ್ಬರಿಗೊಬ್ಬರು ಪರಿಚಯಗೊಂಡರು. ನಿವೇದಿತಾ ಅವರ ಧ್ವನಿ ಹಾಗೂ ಅವರ ನಡವಳಿಕೆ ಇನ್ನೂ ಚಿಕ್ಕ ಮಕ್ಕಳಂತೇ ಇದೆ. ಇದನ್ನು ಚಂದನ್​ ಅವರೇ ಅನೇಕ ಬಾರಿ ಒಪ್ಪಿಕೊಂಡಿದ್ದಾರೆ. ಈಗ ರಾಜಾ-ರಾಣಿ ವೇದಿಕೆ ಮೇಲೆ ಚಂದನ್​ ನಿವೇದಿತಾ ಅವರನ್ನು ಅನುಕರಣೆ ಮಾಡಿದ್ದಾರೆ.

‘ಹೆಂಡತಿಯಂದಿರು ರಾತ್ರಿ ಮಲಗಿ ಬೆಳಗ್ಗೆ ಎದ್ದಾಗ ಗಂಡಂದಿರಂತಾಗಿ ಬಿಟ್ಟಿದ್ದರೆ ಹೇಗಿರುತ್ತದೆ’ ಎನ್ನುವ ಕಾನ್ಸೆಪ್ಟ್​ ನೀಡಲಾಯಿತು. ಆಗ ಚಂದನ್​ ಶೆಟ್ಟಿ ಅವರು ನಿವೇದಿತಾ ರೀತಿಯಲ್ಲಿ ವರ್ತಿಸಿದರೆ, ನಿವೇದಿತಾ ಅವರು ಚಂದನ್​ ರೀತಿಯಲ್ಲಿ ವರ್ತಿಸಿದ್ದರು. ಚಂದನ್​ ಆಡುತ್ತಿದ್ದ ಮಾತು, ಅವರ ಹಾವ-ಭಾವ ಎಲ್ಲವೂ ನಿವೇದಿತಾ ರೀತಿಯಲ್ಲೇ ಇತ್ತು.

ಕಲರ್ಸ್​ ಕನ್ನಡ ವಾಹಿನಿ, ಈ ಬಗ್ಗೆ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ವಿಡಿಯೋ ನೋಡಿದ ಅನೇಕರು ಸಾಕಷ್ಟು ನಕ್ಕಿದ್ದಾರೆ. ಕಾಮೆಂಟ್​ ಬಾಕ್ಸ್​ನಲ್ಲಿ ನಗುವ ಎಮೋಜಿಯನ್ನು ಪೋಸ್ಟ್​ ಮಾಡಿದ್ದಾರೆ. ರಾಜಾ ರಾಣಿ ಶೋ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗುತ್ತದೆ. ಸ್ಟಾರ್​ ಜೋಡಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.

ಇದನ್ನೂ ಓದಿ: ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು

ಅರವಿಂದ್​​-ದಿವ್ಯಾ ಉರುಡುಗ ಮದುವೆ ಆಗ್ತಾರಾ? ಚಂದನ್​-ನಿವೇದಿತಾ ಥರ ಇನ್ನೊಂದು ಜೋಡಿ!

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!