ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​

ಕನ್ನಡ ಬಿಗ್​ ಬಾಸ್​ ಸೀಸನ್​ 6ರ ಸ್ಪರ್ಧಿಗಳ ಪಟ್ಟಿಯಲ್ಲಿ ಚಂದನ್​ ಶೆಟ್ಟಿ-ನಿವೇದಿತಾ ಗೌಡ ಹೆಸರು ಕೂಡ ಇತ್ತು. ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಒಬ್ಬರಿಗೊಬ್ಬರು ಪರಿಚಯಗೊಂಡರು.

ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​
ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 12, 2021 | 9:00 PM

ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಇಬ್ಬರೂ ಬಿಗ್​ ಬಾಸ್ ಮನೆಯಲ್ಲಿ ಒಬ್ಬರನ್ನೊಬ್ಬರು ಭೇಟಿ ಆದರು. ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿತ್ತು. ನಂತರ ಇದು ಪ್ರೀತಿಗೆ ತಿರುಗಿ, ಮದುವೆ ಆದರು. ಈಗ ಈ ಜೋಡಿ ಕಲರ್ಸ್​ ಕನ್ನಡ ವಾಹಿನಿಯ ‘ರಾಜಾ-ರಾಣಿ’ ಶೋಗೆ ಬಂದಿದೆ. ಈ ವೇಳೆ ಚಂದನ್​ ಶೆಟ್ಟಿ ಅವರು ನಿವೇದಿತಾ ಹೇಗೆ ಮಾತನಾಡುತ್ತಾರೆ ಎಂಬುದನ್ನು ಅನುಕರಿಸಿ ತೋರಿಸಿದ್ದಾರೆ.

ಕನ್ನಡ ಬಿಗ್​ ಬಾಸ್​ ಸೀಸನ್​ 6ರ ಸ್ಪರ್ಧಿಗಳ ಪಟ್ಟಿಯಲ್ಲಿ ಚಂದನ್​ ಶೆಟ್ಟಿ-ನಿವೇದಿತಾ ಗೌಡ ಹೆಸರು ಕೂಡ ಇತ್ತು. ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಒಬ್ಬರಿಗೊಬ್ಬರು ಪರಿಚಯಗೊಂಡರು. ನಿವೇದಿತಾ ಅವರ ಧ್ವನಿ ಹಾಗೂ ಅವರ ನಡವಳಿಕೆ ಇನ್ನೂ ಚಿಕ್ಕ ಮಕ್ಕಳಂತೇ ಇದೆ. ಇದನ್ನು ಚಂದನ್​ ಅವರೇ ಅನೇಕ ಬಾರಿ ಒಪ್ಪಿಕೊಂಡಿದ್ದಾರೆ. ಈಗ ರಾಜಾ-ರಾಣಿ ವೇದಿಕೆ ಮೇಲೆ ಚಂದನ್​ ನಿವೇದಿತಾ ಅವರನ್ನು ಅನುಕರಣೆ ಮಾಡಿದ್ದಾರೆ.

‘ಹೆಂಡತಿಯಂದಿರು ರಾತ್ರಿ ಮಲಗಿ ಬೆಳಗ್ಗೆ ಎದ್ದಾಗ ಗಂಡಂದಿರಂತಾಗಿ ಬಿಟ್ಟಿದ್ದರೆ ಹೇಗಿರುತ್ತದೆ’ ಎನ್ನುವ ಕಾನ್ಸೆಪ್ಟ್​ ನೀಡಲಾಯಿತು. ಆಗ ಚಂದನ್​ ಶೆಟ್ಟಿ ಅವರು ನಿವೇದಿತಾ ರೀತಿಯಲ್ಲಿ ವರ್ತಿಸಿದರೆ, ನಿವೇದಿತಾ ಅವರು ಚಂದನ್​ ರೀತಿಯಲ್ಲಿ ವರ್ತಿಸಿದ್ದರು. ಚಂದನ್​ ಆಡುತ್ತಿದ್ದ ಮಾತು, ಅವರ ಹಾವ-ಭಾವ ಎಲ್ಲವೂ ನಿವೇದಿತಾ ರೀತಿಯಲ್ಲೇ ಇತ್ತು.

ಕಲರ್ಸ್​ ಕನ್ನಡ ವಾಹಿನಿ, ಈ ಬಗ್ಗೆ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ವಿಡಿಯೋ ನೋಡಿದ ಅನೇಕರು ಸಾಕಷ್ಟು ನಕ್ಕಿದ್ದಾರೆ. ಕಾಮೆಂಟ್​ ಬಾಕ್ಸ್​ನಲ್ಲಿ ನಗುವ ಎಮೋಜಿಯನ್ನು ಪೋಸ್ಟ್​ ಮಾಡಿದ್ದಾರೆ. ರಾಜಾ ರಾಣಿ ಶೋ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗುತ್ತದೆ. ಸ್ಟಾರ್​ ಜೋಡಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.

ಇದನ್ನೂ ಓದಿ: ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು

ಅರವಿಂದ್​​-ದಿವ್ಯಾ ಉರುಡುಗ ಮದುವೆ ಆಗ್ತಾರಾ? ಚಂದನ್​-ನಿವೇದಿತಾ ಥರ ಇನ್ನೊಂದು ಜೋಡಿ!

ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು