AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​

ಕನ್ನಡ ಬಿಗ್​ ಬಾಸ್​ ಸೀಸನ್​ 6ರ ಸ್ಪರ್ಧಿಗಳ ಪಟ್ಟಿಯಲ್ಲಿ ಚಂದನ್​ ಶೆಟ್ಟಿ-ನಿವೇದಿತಾ ಗೌಡ ಹೆಸರು ಕೂಡ ಇತ್ತು. ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಒಬ್ಬರಿಗೊಬ್ಬರು ಪರಿಚಯಗೊಂಡರು.

ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​
ಪತ್ನಿ ನಿವೇದಿತಾ ಗೌಡ ಮಿಮಿಕ್ರಿ ಮಾಡಿದ ಚಂದನ್​ ಶೆಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​
TV9 Web
| Edited By: |

Updated on: Aug 12, 2021 | 9:00 PM

Share

ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಇಬ್ಬರೂ ಬಿಗ್​ ಬಾಸ್ ಮನೆಯಲ್ಲಿ ಒಬ್ಬರನ್ನೊಬ್ಬರು ಭೇಟಿ ಆದರು. ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿತ್ತು. ನಂತರ ಇದು ಪ್ರೀತಿಗೆ ತಿರುಗಿ, ಮದುವೆ ಆದರು. ಈಗ ಈ ಜೋಡಿ ಕಲರ್ಸ್​ ಕನ್ನಡ ವಾಹಿನಿಯ ‘ರಾಜಾ-ರಾಣಿ’ ಶೋಗೆ ಬಂದಿದೆ. ಈ ವೇಳೆ ಚಂದನ್​ ಶೆಟ್ಟಿ ಅವರು ನಿವೇದಿತಾ ಹೇಗೆ ಮಾತನಾಡುತ್ತಾರೆ ಎಂಬುದನ್ನು ಅನುಕರಿಸಿ ತೋರಿಸಿದ್ದಾರೆ.

ಕನ್ನಡ ಬಿಗ್​ ಬಾಸ್​ ಸೀಸನ್​ 6ರ ಸ್ಪರ್ಧಿಗಳ ಪಟ್ಟಿಯಲ್ಲಿ ಚಂದನ್​ ಶೆಟ್ಟಿ-ನಿವೇದಿತಾ ಗೌಡ ಹೆಸರು ಕೂಡ ಇತ್ತು. ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಒಬ್ಬರಿಗೊಬ್ಬರು ಪರಿಚಯಗೊಂಡರು. ನಿವೇದಿತಾ ಅವರ ಧ್ವನಿ ಹಾಗೂ ಅವರ ನಡವಳಿಕೆ ಇನ್ನೂ ಚಿಕ್ಕ ಮಕ್ಕಳಂತೇ ಇದೆ. ಇದನ್ನು ಚಂದನ್​ ಅವರೇ ಅನೇಕ ಬಾರಿ ಒಪ್ಪಿಕೊಂಡಿದ್ದಾರೆ. ಈಗ ರಾಜಾ-ರಾಣಿ ವೇದಿಕೆ ಮೇಲೆ ಚಂದನ್​ ನಿವೇದಿತಾ ಅವರನ್ನು ಅನುಕರಣೆ ಮಾಡಿದ್ದಾರೆ.

‘ಹೆಂಡತಿಯಂದಿರು ರಾತ್ರಿ ಮಲಗಿ ಬೆಳಗ್ಗೆ ಎದ್ದಾಗ ಗಂಡಂದಿರಂತಾಗಿ ಬಿಟ್ಟಿದ್ದರೆ ಹೇಗಿರುತ್ತದೆ’ ಎನ್ನುವ ಕಾನ್ಸೆಪ್ಟ್​ ನೀಡಲಾಯಿತು. ಆಗ ಚಂದನ್​ ಶೆಟ್ಟಿ ಅವರು ನಿವೇದಿತಾ ರೀತಿಯಲ್ಲಿ ವರ್ತಿಸಿದರೆ, ನಿವೇದಿತಾ ಅವರು ಚಂದನ್​ ರೀತಿಯಲ್ಲಿ ವರ್ತಿಸಿದ್ದರು. ಚಂದನ್​ ಆಡುತ್ತಿದ್ದ ಮಾತು, ಅವರ ಹಾವ-ಭಾವ ಎಲ್ಲವೂ ನಿವೇದಿತಾ ರೀತಿಯಲ್ಲೇ ಇತ್ತು.

ಕಲರ್ಸ್​ ಕನ್ನಡ ವಾಹಿನಿ, ಈ ಬಗ್ಗೆ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ವಿಡಿಯೋ ನೋಡಿದ ಅನೇಕರು ಸಾಕಷ್ಟು ನಕ್ಕಿದ್ದಾರೆ. ಕಾಮೆಂಟ್​ ಬಾಕ್ಸ್​ನಲ್ಲಿ ನಗುವ ಎಮೋಜಿಯನ್ನು ಪೋಸ್ಟ್​ ಮಾಡಿದ್ದಾರೆ. ರಾಜಾ ರಾಣಿ ಶೋ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗುತ್ತದೆ. ಸ್ಟಾರ್​ ಜೋಡಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.

ಇದನ್ನೂ ಓದಿ: ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು

ಅರವಿಂದ್​​-ದಿವ್ಯಾ ಉರುಡುಗ ಮದುವೆ ಆಗ್ತಾರಾ? ಚಂದನ್​-ನಿವೇದಿತಾ ಥರ ಇನ್ನೊಂದು ಜೋಡಿ!

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!