AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿ ಕನಸು ಈಡೇರಿಸಲು ಮಹತ್ವದ ನಿರ್ಧಾರ ತೆಗೆದುಕೊಂಡ ಕಿರುತೆರೆ ನಟಿ ಚಂದನಾ

ಚಂದನಾ ಅವರು ಬಿಗ್​ ಬಾಸ್​ಗೆ ಎಂಟ್ರಿ ಪಡೆದ ನಂತರ ಜನರಿಗೆ ಸಾಕಷ್ಟು ಪರಿಚಯವಾದರು. ಹೀಗಾಗಿ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಇನ್​​ಸ್ಟಾಗ್ರಾಮ್​ನಲ್ಲಿ ಅವರಿಗೆ ಲಕ್ಷಾಂತರ ಹಿಂಬಾಲಕರಿದ್ದಾರೆ.

ತಂದೆ-ತಾಯಿ ಕನಸು ಈಡೇರಿಸಲು ಮಹತ್ವದ ನಿರ್ಧಾರ ತೆಗೆದುಕೊಂಡ ಕಿರುತೆರೆ ನಟಿ ಚಂದನಾ
ಚಂದನಾ ಅನಂತಕೃಷ್ಣ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 23, 2021 | 7:19 PM

Share

‘ಕನ್ನಡ ಬಿಗ್​ ಬಾಸ್ ಸೀಸನ್ 7’ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು ನಟಿ ಚಂದನಾ ಅನಂತಕೃಷ್ಣ. ಆ ನಂತರ ಅವರು ಕಲರ್ಸ್​ ಕನ್ನಡದ ಕಾರ್ಯಕ್ರಮವೊಂದಕ್ಕೆ ಆ್ಯಂಕರಿಂಗ್​ ಕೂಡ ಮಾಡಿದ್ದರು. ಸದ್ಯ, ಅವರು ‘ಹೂ ಮಳೆ’ ಧಾರಾವಾಹಿಯಲ್ಲಿ ಲಹರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಜನಮೆಚ್ಚುಗೆ ಪಡೆದುಕೊಂಡಿದೆ. ಈಗ ಚಂದನಾ ತಂದೆ-ತಾಯಿ ಆಸೆ ಈಡೇರಿಸಲು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಚಂದನಾ ಅವರು ಬಿಗ್​ ಬಾಸ್​ಗೆ ಎಂಟ್ರಿ ಪಡೆದ ನಂತರ ಜನರಿಗೆ ಸಾಕಷ್ಟು ಪರಿಚಯವಾದರು. ಹೀಗಾಗಿ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಇನ್​​ಸ್ಟಾಗ್ರಾಮ್​ನಲ್ಲಿ ಅವರಿಗೆ ಲಕ್ಷಾಂತರ ಹಿಂಬಾಲಕರಿದ್ದಾರೆ. ಅವರು ಭರತನಾಟ್ಯ ಕೂಡ ಕಲಿತಿದ್ದಾರೆ. ಈಗ ಅದರಲ್ಲೇ ಮುಂದುವರಿಯಲು ಅವರು ನಿರ್ಧರಿಸಿದ್ದಾರೆ. ಇದು ಅವರ ಜೀವನದ ಮಹತ್ವದ ಹೆಜ್ಜೆ ಆಗಿರಲಿದೆ. ಈ ಬಗ್ಗೆ ಚಂದನಾ ಇನ್​​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಭರತನಾಟ್ಯ ಪ್ರ್ಯಾಕ್ಟೀಸ್​ ಮಾಡಿದ ನಂತರದ ಫೋಟೋವನ್ನು ಚಂದನಾ ಹಂಚಿಕೊಂಡಿದ್ದಾರೆ. ‘ಇಂದು ಜೀವನದ ಹೊಸದೊಂದು ಹೆಜ್ಜೆ ಬಗ್ಗೆ ನಿಮ್ಮೊಂದಿಗೆ ಹಂಚಿಕೊಳ್ಳುವ ಆಸೆ. ಭರತನಾಟ್ಯದಲ್ಲಿ ಮುಂದುವರೆಯಬೇಕು ಎಂಬುದು ಅಪ್ಪ-ಅಮ್ಮನ ಕನಸು. ನನ್ನ ಕನಸು ಕೂಡ. ಅದರಂತೆಯೇ ಇವತ್ತು ಎಂಪಿಎ ( Masters in Performing Arts) ಮೊದಲನೇ ಪ್ರ್ಯಾಕ್ಟಿಕಲ್​ ಕ್ಲಾಸ್​ನಲ್ಲಿ ಭಾಗವಹಿಸಿದ ಖುಷಿ ನನ್ನದು. ಎಂದಿನಂತೆಯೇ, ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ಹೂ ಮಳೆ’ ಧಾರಾವಾಹಿಯಲ್ಲಿ ಲಹರಿ ಪಾತ್ರದಲ್ಲಿ ಚಂದನಾ ಕಾಣಿಸಿಕೊಂಡಿದ್ದಾರೆ. ಯದುವೀರ್​​ನನ್ನು ಲಹರಿ ಮದುವೆ ಆಗಿದ್ದಾಳೆ. ಈಗ ಚಂದನಾಗೆ ಮಗು ಕೂಡ ಆಗಿದೆ. ಇತ್ತೀಚೆಗೆ ಕಲರ್ಸ್​ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋ ಹಂಚಿಕೊಂಡಿತ್ತು. ಧಾರಾವಾಹಿ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಬಿಗ್​ ಬಾಸ್​ ಪ್ರಸಾರವಾಗುತ್ತಿದ್ದ ಸಂದರ್ಭದಿಂದ ಈ ಧಾರಾವಾಹಿ ಸಂಜೆ 5:30ಕ್ಕೆ ಪ್ರಸಾರವಾಗೋಕೆ ಪ್ರಾರಂಭವಾಯಿತು. ಇದರಿಂದ ಧಾರಾವಾಹಿಗೆ ವೀಕ್ಷಕರ ಸಂಖ್ಯೆ ಕಡಿಮೆ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಜನ ಮೆಚ್ಚಿಕೊಂಡ ‘ಕನ್ನಡತಿ’ ಜೋಡಿಗೆ ಸಿಕ್ತು ಅವಾರ್ಡ್​; ಸಂಭ್ರಮಿಸಿದ ಕಿರಣ್​ ರಾಜ್​, ರಂಜನಿ ರಾಘವನ್​

Paul Walker: ‘ಫಾಸ್ಟ್​ ಆ್ಯಂಡ್​ ಫ್ಯೂರಿಯಸ್’​ ಖ್ಯಾತಿಯ ಪೌಲ್​ ವಾಕರ್​ ಮಗಳ ಮದುವೆ; ಸಮುದ್ರ ತಟದಲ್ಲಿ ನಡೆಯಿತು ವಿವಾಹ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ