AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂಪ್ರಮೈಸ್ ಆಗಬೇಕು’; ನಟಿ ಚಂದನಾಗೆ ಹೀಗೆ ನೇರವಾಗಿ ಹೇಳಿದ ನಿರ್ಮಾಪಕ ಯಾರು?

ಚಂದನಾ ಅನಂತಕೃಷ್ಣ ಅವರು ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಕಾಸ್ಟಿಂಗ್ ಕೌಚ್‌ನಂತಹ ಅನುಭವಗಳ ಬಗ್ಗೆ ಮಾತನಾಡಿದ್ದಾರೆ. ಒಂದು ಏಜೆನ್ಸಿ ಅವರಿಗೆ ಕಳುಹಿಸಿದ ಪ್ರಸ್ತಾಪದಲ್ಲಿ ‘3 ತಿಂಗಳು ಶೂಟ್ + ಕಾಂಪ್ರಮೈಸ್’ ಎಂದು ಸ್ಪಷ್ಟವಾಗಿ ಬರೆದಿತ್ತು ಎಂದು ಅವರು ಹೇಳಿದ್ದಾರೆ. ಈ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

‘ಕಾಂಪ್ರಮೈಸ್ ಆಗಬೇಕು’; ನಟಿ ಚಂದನಾಗೆ ಹೀಗೆ ನೇರವಾಗಿ ಹೇಳಿದ ನಿರ್ಮಾಪಕ ಯಾರು?
ಚಂದನಾ
ರಾಜೇಶ್ ದುಗ್ಗುಮನೆ
|

Updated on: May 09, 2025 | 2:58 PM

Share

ನಟಿ ಚಂದನಾ ಅನಂತಕೃಷ್ಣ (Chandana Ananthakrishna) ಅವರು ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿ ಗಮನ ಸೆಳೆದರು. ಅವರು ಉತ್ತಮ ಭರತನಾಟ್ಯ ಡ್ಯಾನ್ಸರ್ ಹಾಗೂ ನಟಿ. ಸದ್ಯ ‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಚಂದನಾ ಅವರು ನಟಿಸುತ್ತಿದ್ದಾರೆ. ಈಗ ಅವರು ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ತಾವು ಎದುರಿಸಿದ ಸಮಸ್ಯೆಗಳ ಬಗ್ಗೆಯೂ ಹೇಳಿಕೊಂಡಿದ್ದಾರೆ. ಅವರಿಗೂ ಕಾಸ್ಟಿಂಗ್ ಕೌಚ್ ರೀತಿಯ ಅನುಭವ ಆಗಿತ್ತು. ಈ ಬಗ್ಗೆ ಚಂದನಾ ನೇರ ಮಾತುಗಳಲ್ಲಿ ವಿವರಣೆ ನೀಡಿದ್ದಾರೆ.

‘ವೈ5 ಟಿವಿ ಕನ್ನಡ’ ಯೂಟ್ಯೂಬ್ ಚಾನೆಲ್​ಗೆ ಚಂದನಾ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರು ತಮ್ಮ ಜೀವನದಲ್ಲಾದ ಕೆಲ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಹಾಗಂತ ಅವರಿಗೆ ಕರೆ ಮಾಡಿದ ಯಾರೊಬ್ಬರೂ ನಿರ್ಮಾಪಕರಾಗಿರಲಿಲ್ಲ. ಆಫರ್ ಕೊಡೋ ಹೆಸರಲ್ಲಿ ಚಾನ್ಸ್ ಪಡೆದುಕೊಳ್ಳಲು ಬಯಸಿದವರಾಗಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ.

ಇದನ್ನೂ ಓದಿ
Image
ಪೊಲೀಸರಿಗೆ ಆವಾಜ್ ಹಾಕಿದ ‘ಜೈಲರ್’ ಖ್ಯಾತಿಯ ವಿನಾಯಕನ್; ಮತ್ತೆ ನಟನ ಕಿರಿಕ್
Image
ಮದುವೆ ವಿಚಾರದಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತಿನಂತೆ ನಡೆದುಕೊಂಡ ಚೈತ್ರಾ
Image
ಚೈತ್ರಾ ಕುಂದಾಪುರ ಮದುವೆ; ವಿಡಿಯೋ ಮೂಲಕ ಹುಡುಗನ ಪರಿಚಯ
Image
‘ನಿನ್ನ ದೇಹ ನೀನೇ ನಿರ್ಧರಿಸು’; ದೀಪಿಕಾಗೆ ನೇರವಾಗಿ ಹೇಳಿದ್ದ ರಣವೀರ್ ಸಿಂಗ್

‘ಒಬ್ಬರು ಕರೆ ಮಾಡಿದ್ದರು. ಮಾಡರ್ನ್​ ಫೋಟೋಶೂಟ್ ಬೇಕು ಎಂದರು. ನಾನು ಅಷ್ಟು ಮಾಡರ್ನ್​ ಫೋಟೋಶೂಟ್ ಮಾಡಿಸಿರಲಿಲ್ಲ. ಇದ್ದಿದ್ದರಲ್ಲೇ ಮಾಡರ್ನ್ ಆಗಿರೋ ಫೋಟೋ ಕಳುಹಿಸಿದೆ. ಆ ಬಳಿಕ ಮೇಕಪ್ ಇಲ್ಲದ ಫೋಟೋ ಕಳುಹಿಸಿ ಎಂದರು. ಅದನ್ನೂ ಕಳುಹಿಸಿದೆ’ ಎಂದು ಮಾತು ಆರಂಭಿಸಿದರು ಚಂದನಾ.

‘ವಿಡಿಯೋ ಕಾಲ್ ಮಾಡಿ ಎಂದು ಕೇಳಿದರು. ನನಗೆ ವಿಚಿತ್ರ ಅನಿಸಿತು. ಯಾರು ವಿಡಿಯೋ ಕಾಲ್ ಅಲಾ ಮಾಡಿ ಅಂತಾರೆ? ಅದಕ್ಕೆ ರಿಪ್ಲೈ ಮಾಡಲಿಲ್ಲ. ಅವರು ಪದೇ ಪದೇ ಕರೆ ಮಾಡುತ್ತಲೇ ಇದ್ದ. ಆಗ ನನ್ನ ಗೆಳೆಯರ ಜೊತೆ ಇದ್ದ. ನನ್ನ ಫ್ರೆಂಡ್ ಒಬ್ಬರು ಮಾತನಾಡಿದರು. ಆ ಬಳಿಕ ಕಾಲ್ ಕಟ್ ಮಾಡಿದೆ. ನಂತರ ಬ್ಲಾಕ್ ಮಾಡಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಎರಡು ಜನಪ್ರಿಯ ಧಾರಾವಾಹಿಗಳು; ಟಾಪ್ 5 ಸೀರಿಯಲ್ ಲಿಸ್ಟ್ ಇಲ್ಲಿದೆ

‘ಒಂದು ಏಜೆನ್ಸಿ ಅವರು ಕರೆ ಮಾಡಿದ್ದರು. ವಯಸ್ಸು, ಸಂಭಾವನೆ ಎಲ್ಲವೂ ಬರೆದುಕೊಂಡಿತ್ತು. 3 ತಿಂಗಳು ಶೂಟ್ ಪ್ಲಸ್ ಕಾಂಪ್ರಮೈಸ್ ಅಂತ ಅಲ್ಲಿಯೇ ಬರೆದುಕೊಂಡಿತ್ತು. ಈ ರೀತಿಯ ಏಜೆನ್ಸಿಗಳು ಇರುತ್ತವೆ. ಏಜೆನ್ಸಿಗಳ ಸತ್ಯಾಸತ್ಯಯತೆ ನೋಡಿಕೊಂಡು ನಾವು ನಿರ್ಧರಿಸಬೇಕು’ ಎಂದಿದ್ದಾರೆ ಚಂದನಾ. ನಟನೆ ಮಾಡಬೇಕು ಎಂಬ ಹುಮ್ಮಸ್ಸಿನಲ್ಲಿ ಇರುವವರಿಗೆ ಈ ರೀತಿಯವರು ಕರೆ ಮಾಡಿದಾಗ ಆ ಬಗ್ಗೆ ಜ್ಞಾನ ಇರೋದಿಲ್ಲ. ಈಗ ಚಂದನಾ ಹೇಳಿದ ಮಾತಿನಿಂದ ಕೆಲವರಲ್ಲಿ ಜಾಗೃತಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ