AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಪ್ರಭ ಕಾಮಿಡಿ ಕಿಕ್: ನಕ್ಕು ನಕ್ಕು ಸುಸ್ತಾದ ಬಿಗ್ ಬಾಸ್ ಮನೆ ಮಂದಿ

ಡಬಲ್ ಮೀನಿಂಗ್ ಕಾಮಿಡಿ ಮಾಡುತ್ತಾರೆ ಎಂಬ ಆರೋಪದಿಂದ ಚಂದ್ರಪ್ರಭ ಹೊರಬಂದಿದ್ದಾರೆ. ಬೇರೆ ಬೇರೆ ರೀತಿಯಲ್ಲಿ ಎಲ್ಲರನ್ನೂ ನಗಿಸುವ ಮೂಲಕ ಅವರು ಬಿಗ್ ಬಾಸ್ ಮನೆಯಲ್ಲಿ ಮಿಂಚುತ್ತಿದ್ದಾರೆ. ಡಾಗ್ ಸತೀಶ್ ಮತ್ತು ಚಂದ್ರಪ್ರಭ ಅವರು ದೊಡ್ಮನೆಯಲ್ಲಿ ಜಂಟಿಯಾಗಿ ಆಟ ಆಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಚಂದ್ರಪ್ರಭ ಕಾಮಿಡಿ ಕಿಕ್: ನಕ್ಕು ನಕ್ಕು ಸುಸ್ತಾದ ಬಿಗ್ ಬಾಸ್ ಮನೆ ಮಂದಿ
Chandraprabha
ಮದನ್​ ಕುಮಾರ್​
|

Updated on: Oct 01, 2025 | 10:19 PM

Share

ಕಾಮಿಡಿ ಶೋಗಳ ಮೂಲಕ ಜನರಿಗೆ ಪರಿಚಯವಾಗಿದ್ದ ಚಂದ್ರಪ್ರಭ (Chandraprabha) ಅವರು ಈಗ ಬಿಗ್ ಬಾಸ್ ಸ್ಪರ್ಧಿ ಆಗಿದ್ದಾರೆ. ಬೇರೆ ಕಾರ್ಯಕ್ರಮಗಳಲ್ಲಿ ಅವರು ಡಬಲ್ ಮೀನಿಂಗ್ ಕಾಮಿಡಿ ಮಾಡುತ್ತಾರೆ ಎಂಬ ಆರೋಪ ಇತ್ತು. ಆದರೆ ರಿಯಲ್ ಲೈಫ್​​ನಲ್ಲಿ ಚಂದ್ರಪ್ರಭ ವ್ಯಕ್ತಿತ್ವ ಬೇರೆಯೇ ಇದೆ. ಅದು ಬಿಗ್ ಬಾಸ್ ಶೋನಲ್ಲಿ ಅನಾವರಣ ಆಗುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಸಂಚಿಕೆಗಳಲ್ಲಿ ಚಂದ್ರಪ್ರಭ ಕಾಮಿಡಿಗೆ ವೀಕ್ಷಕರು ಮನಸೋಲುತ್ತಿದ್ದಾರೆ. ಅಲ್ಲದೇ, ದೊಡ್ಮನೆ ಒಳಗೆ ಇರುವ ಸದಸ್ಯರು ಕೂಡ ಬಿದ್ದು ಬಿದ್ದು ನಗುತ್ತಿದ್ದಾರೆ.

ಪ್ರತಿ ಬಾರಿಯೂ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಒಂದು ಕಾನ್ಸೆಪ್ಟ್ ಇರುತ್ತದೆ. ಈ ಬಾರಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಜಂಟಿಗಳು ಮತ್ತು ಒಂಟಿಗಳು ಎಂಬ ಕಾನ್ಸೆಪ್ಟ್ ಪರಿಚಯಿಸಲಾಗಿದೆ. 6 ಜನರು ಒಂಟಿಗಳಾಗಿ ಎಂಟ್ರಿ ನೀಡಿ ಹೆಚ್ಚು ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ. ಇನ್ನುಳಿದವರು ಜಂಟಿಗಳಾಗಿ ಟಾಸ್ಕ್ ನಿಭಾಯಿಸುತ್ತಿದ್ದಾರೆ. ಚಂದ್ರಪ್ರಭ ಕೂಡ ಜಂಟಿ ಆಗಿದ್ದಾರೆ. ಅವರಿಗೆ ಡಾಗ್ ಸತೀಶ್ ಜೋಡಿ ಆಗಿದ್ದಾರೆ.

ಡಾಗ್ ಸತೀಶ್ ಮತ್ತು ಚಂದ್ರಪ್ರಭ ಅವರ ಕಾಂಬಿನೇಷನ್ ಎಲ್ಲರಿಗೂ ಇಷ್ಟ ಆಗುತ್ತಿದೆ. ಡಾಗ್ ಸತೀಶ್ ಅವರು ನೂರಾರು ಕೋಟಿ ರೂಪಾಯಿ ಒಡೆಯ. ಅವರ ಲೈಫ್ ಸ್ಟೈಲ್ ತುಂಬ ಐಷಾರಾಮಿ ಆಗಿದೆ. ಅದನ್ನು ನೋಡಿ ಚಂದ್ರಪ್ರಭ ಅವರಿಗೆ ಅಚ್ಚರಿ ಆಗುತ್ತಿದೆ. ಡಾಗ್ ಸತೀಶ್ ಅವರನ್ನು ಹತ್ತಿರದಿಂದ ನೋಡಿದ ಚಂದ್ರಪ್ರಭ ಅವರು ಹರಿಕಥೆ ರೂಪದಲ್ಲಿ ಅದನ್ನು ಮನೆಮಂದಿಗೆ ವಿವರಿಸಿದ್ದಾರೆ. ಈ ವೇಳೆ ಎಲ್ಲರೂ ನಕ್ಕು ಎಂಜಾಯ್ ಮಾಡಿದ್ದಾರೆ.

ಈ ರೀತಿ ಮನರಂಜನೆ ನೀಡುವುದನ್ನು ಮುಂದುವರಿಸಿದರೆ ಚಂದ್ರಪ್ರಭ ಅವರಿಗೆ ಪ್ರೇಕ್ಷಕರಿಂದ ಹೆಚ್ಚು ಓಟ್ ಸಿಗಲಿದೆ. ಅಲ್ಲದೇ ಮನೆಯೊಳಗಿನ ಸದಸ್ಯರ ಸ್ನೇಹ ಕೂಡ ಬೆಳೆಸಬಹುದು. ಎಲ್ಲರ ಜೊತೆಗೂ ಅವರು ಬೆರೆಯುತ್ತಾರೆ ಎಂಬುದು ಖಚಿತ ಆಗುತ್ತದೆ. ಇದರಿಂದ ಚಂದ್ರಪ್ರಭ ಅವರ ಬಿಗ್ ಬಾಸ್ ಜರ್ನಿ ಚೆನ್ನಾಗಿ ಮುಂದುವರಿಯಲು ಸಹಕಾರಿ ಆಗುತ್ತದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಡಾಗ್ ಸತೀಶ್ ಜೀವನ ನೀವಂದುಕೊಂಡಂತೆ ಇಲ್ಲ; ಎಲ್ಲವನ್ನೂ ವಿವರಿಸಿದ ಚಂದ್ರಪ್ರಭ

ಬಿಗ್ ಬಾಸ್ ಮನೆಯಲ್ಲಿ ಇರುವ ಇನ್ನೋರ್ವ ಕಾಮಿಡಿ ಕಲಾವಿದ ಗಿಲ್ಲಿ ನಟ. ಅವರು ಕೂಡ ಈ ಮೊದಲು ಹಲವು ಕಾರ್ಯಕ್ರಮಗಳಲ್ಲಿ ಪ್ರಾಪರ್ಟಿ ಕಾಮಿಡಿ ಮಾಡಿ ಗಮನ ಸೆಳೆದಿದ್ದರು. ಆದರೆ ಬಿಗ್ ಬಾಸ್ ಮನೆಯೊಳಗೆ ಅವರ ಕಾಮಿಡಿ ಅಷ್ಟೇನೂ ವರ್ಕೌಟ್ ಆಗುತ್ತಿಲ್ಲ. ಬದಲಿಗೆ ಇನ್ನುಳಿದ ಸ್ಪರ್ಧಿಗಳಿಗೆ ಕಿರಿಕಿರಿ ಉಂಟುಮಾಡುತ್ತಿದೆ. ಗಿಲ್ಲಿ ನಟ ವರಸೆ ಬದಲಾಯಿಸಿಕೊಳ್ಳಬೇಕಾದ ಅಗತ್ಯ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ