AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 12ರಿಂದ ಹೊಸ ಧಾರಾವಾಹಿ ‘ಸ್ನೇಹದ ಕಡಲಲ್ಲಿ’; ಸ್ಟಾರ್ ಸುವರ್ಣದಲ್ಲಿ ಪ್ರಸಾರ

‘ಸ್ನೇಹದ ಕಡಲಲ್ಲಿ’ ಧಾರಾವಾಹಿಯಲ್ಲಿ ಚಂದು ಗೌಡ ಅವರು ಶಿವರಾಜ್ ಅರಸ್ ಎಂಬ ಪಾತ್ರ ಮಾಡುತ್ತಿದ್ದಾರೆ. ಅವರ ತಂದೆಯ ಪಾತ್ರದಲ್ಲಿ ಜನಪ್ರಿಯ ನಟ ಸುಮನ್ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರೀತಂ ಶೆಟ್ಟಿ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಈ ಸೀರಿಯಲ್ ಮೂಡಿಬರುತ್ತಿದೆ. ಕಾವ್ಯ ಮಹದೇವ್ ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಮೇ 12ರಿಂದ ಹೊಸ ಧಾರಾವಾಹಿ ‘ಸ್ನೇಹದ ಕಡಲಲ್ಲಿ’; ಸ್ಟಾರ್ ಸುವರ್ಣದಲ್ಲಿ ಪ್ರಸಾರ
Snehada Kadalalli Serial Team
ಮದನ್​ ಕುಮಾರ್​
|

Updated on: May 09, 2025 | 9:13 PM

Share

‘ಸ್ಟಾರ್ ಸುವರ್ಣ’ (Star Suvarna) ವಾಹಿನಿ‌ಯಲ್ಲಿ ಇದೇ ಸೋಮವಾರದಿಂದ (ಮೇ 12) ಹೊಸ ಧಾರಾವಾಹಿ ‘ಸ್ನೇಹದ ಕಡಲಲ್ಲಿ’ ಪ್ರಸಾರ ಆಗಲಿದೆ. ಪ್ರತಿದಿನ ರಾತ್ರಿ 8.30ಕ್ಕೆ ಇದು ಬಿತ್ತರ ಆಗಲಿದೆ. ಈ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಈ ಧಾರಾವಾಹಿಗೆ ಪ್ರೀತಂ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಚಂದು ಗೌಡ, ಸುಮನ್ ತಲ್ವಾರ್, ಕಾವ್ಯ ಮಹದೇವ್ ಅವರು ಈ ಸೀರಿಯಲ್​ನಲ್ಲಿ ನಟಿಸುತ್ತಿದ್ದಾರೆ. ಇದು ಸುಮನ್ ಅವರ ಮೊದಲ ಕನ್ನಡದ ಸೀರಿಯಲ್ ಎಂಬುದು ವಿಶೇಷ. ಈ ಎಲ್ಲ ವಿಷಯಗಳ ಬಗ್ಗೆ ‘ಸ್ನೇಹದ ಕಡಲಲ್ಲಿ’ (Snehada Kadalalli) ತಂಡದವರು ಮಾಧ್ಯಮಗಳ ಎದುರು ಮಾಹಿತಿ ಹಂಚಿಕೊಂಡರು.

‘ಅವಕಾಶ ನೀಡಿದ ಸ್ಟಾರ್ ಸುವರ್ಣ ಚಾನೆಲ್​ಗೆ ಧನ್ಯವಾದಗಳು. ಸೀರಿಯಲ್​ಗಳಲ್ಲಿ ಒಂದು ಮದುವೆಯನ್ನು 1 ವಾರ ತೋರಿಸುತ್ತೀರಿ ಎಂಬ ಮಾತು‌ ಕೇಳಿ ಬರುತ್ತದೆ. ಆದರೆ ನಮ್ಮ ಧಾರಾವಾಹಿಯಲ್ಲಿ ಬರೀ 4 ನಿಮಿಷದಲ್ಲಿ ಮದುವೆ ಸನ್ನಿವೇಶ ಮುಕ್ತಾಯ ಆಗುತ್ತೆ. ಸಾಮಾನ್ಯವಾಗಿ ಧಾರಾವಾಹಿಗಳ ಹಿನ್ನೆಲೆ ಸಂಗೀತದಲ್ಲಿ ಸಿನಿಮಾ ಹಾಡುಗಳನ್ನು ಬಳಸಿಕೊಳ್ಳುವುದು ವಾಡಿಕೆ. ಆದರೆ ನಾವು ಹೊಸ ಸಾಂಗ್ ಸಿದ್ಧ ಮಾಡಿದ್ದೇವೆ‌. ಹೀಗೆ ಅನೇಕ ವಿಶೇಷಗಳಿರುವ ಈ ಧಾರಾವಾಹಿ ನಮ್ಮದು’ ಎಂದರು ನಿರ್ದೇಶಕ ಪ್ರೀತಂ ಶೆಟ್ಟಿ.

Snehada Kadalalli Serial Team

Snehada Kadalalli Serial Team

‘ಪಿಂಗಾರ ಪ್ರೊಡಕ್ಷನ್ಸ್’ ಮೂಲಕ ಈ ಧಾರಾವಾಹಿ ನಿರ್ಮಾಣ ಆಗುತ್ತಿದೆ. ನಟ ಸುಮನ್ ಮಾತನಾಡಿ, ‘ನಾನು ಚಿತ್ರರಂಗಕ್ಕೆ ಬಂದು 47 ವರ್ಷ ಕಳೆಯಿತು. ಕನ್ನಡ, ತೆಲುಗು, ತಮಿಳು ಸೇರಿದಂತೆ 11 ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಪ್ರೀತಂ ಶೆಟ್ಟಿ ಅವರ ನಿರ್ದೇಶನದ ಸಿನಿಮಾದಲ್ಲೂ ನಟಿಸಿದ್ದೇನೆ. ‘ಸ್ನೇಹದ ಕಡಲಲ್ಲಿ’ ನನ್ನ ಮೊದಲ ಕನ್ನಡ ಸೀರಿಯಲ್. ಕಥೆ ನನಗೆ ಇಷ್ಟವಾಯಿತು. ಸ್ಟಾರ್ ಸುವರ್ಣ ವಾಹಿನಿ ಆಯ್ಕೆ ಮಾಡುವ ಕಂಟೆಂಟ್ ಚೆನ್ನಾಗಿರುತ್ತೆ. ಆದ್ದರಿಂದ ಅಭಿನಯಿಸಲು ಒಪ್ಪಿಕೊಂಡೆ’ ಎಂದರು.

ಇದನ್ನೂ ಓದಿ
Image
ಸೀರಿಯಲ್ ಟಿಆರ್​ಪಿಯಲ್ಲಿ ಈ ಧಾರಾವಾಹಿಯೇ ನಂಬರ್ 1; ದಾಖಲೆಗಳೆಲ್ಲ ಉಡೀಸ್
Image
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ನಿಲ್ಲಿಸಲು ಬೇಡಿಕೆ ಇಟ್ಟ ವೀಕ್ಷಕರು; ಕಾರಣ?
Image
ಸಿಹಿಯ ಆತ್ಮ ಹಿಡಿದುಕೊಂಡ ಅಘೋರಿ; ಪ್ರಯಾಗ್​ರಾಜ್​​ನಲ್ಲಿ ‘ಸೀತಾ ರಾಮ’ ತಂಡ
Image
ತ್ರಿವಿಕ್ರಂ ಪಾಲಿಗೆ ಒಲಿದ ಅದೃಷ್ಟ; ಹೊಸ ಸೀರಿಯಲ್​ಗೆ ಹೀರೋ ಆದ ನಟ

ಇದನ್ನೂ ಓದಿ: 38 ವರ್ಷ ಕಳೆದರೂ ‘ರಾಮಾಯಣ’ ಧಾರಾವಾಹಿ ದಾಖಲೆ ಯಾರೂ ಮುರಿದಿಲ್ಲ; ಇಲ್ಲಿದೆ ಲೆಕ್ಕ

ಸುದ್ದಿಗೋಷ್ಠಿಯಲ್ಲಿ ನಟ ಚಂದು ಗೌಡ ಮಾತನಾಡಿ, ‘ನಾನು ಕಿರುತೆರೆಗೆ ಬಂದು ಸುಮಾರು 11 ವರ್ಷ ಆಯಿತು. ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದೇನೆ. ನನಗೆ ಸಿನಿಮಾದಲ್ಲಿ ಮತ್ತು ಸೀರಿಯಲ್​ನಲ್ಲಿ ನಟಿಸುವುದು ಎರಡೂ ಒಂದೇ. ‘ಸ್ನೇಹದ ಕಡಲಲ್ಲಿ’ ಧಾರಾವಾಹಿಯ 30 ನಿಮಿಷದ ಸಂಚಿಕೆ ನೋಡಿದರೂ ಒಂದು ಸಿನಿಮಾ ನೋಡಿದ ಅನುಭವ ಪ್ರೇಕ್ಷಕರಿಗೆ ಆಗುತ್ತದೆ’ ಎಂದು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ