AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಯಾರೆಕ್ಟರ್ ಹಾಳಾಗುತ್ತೆ ಅಂತ ಹೆದರಿಸಿದ್ರು’; ಎಚ್ಚರಿಕೆ ಬಗ್ಗೆ ಸುದೀಪ್ ಎದುರು ಹೇಳಿಕೊಂಡ ರೂಪೇಶ್ ಶೆಟ್ಟಿ

Bigg Boss Kannada Finale: ರೂಪೇಶ್ ಶೆಟ್ಟಿಗೆ ಬಿಗ್ ಬಾಸ್​​ಗೆ ಬರುತ್ತೇನೆ ಎಂದಾಗ ಒಂದಷ್ಟು ಮಂದಿ ಒಳ್ಳೆಯ ಮಾತನ್ನು ಹೇಳಿದರೆ, ಇನ್ನೂ ಕೆಲವರು ನೆಗೆಟಿವ್ ಮಾತನ್ನು ಹೇಳಿದ್ದರು.

‘ಕ್ಯಾರೆಕ್ಟರ್ ಹಾಳಾಗುತ್ತೆ ಅಂತ ಹೆದರಿಸಿದ್ರು’; ಎಚ್ಚರಿಕೆ ಬಗ್ಗೆ ಸುದೀಪ್ ಎದುರು ಹೇಳಿಕೊಂಡ ರೂಪೇಶ್ ಶೆಟ್ಟಿ
ರೂಪೇಶ್-ಸುದೀಪ್
TV9 Web
| Edited By: |

Updated on:Dec 30, 2022 | 8:39 PM

Share

‘ಬಿಗ್ ಬಾಸ್​ ಕನ್ನಡ ಸೀಸನ್ 9’ (BBK 9) ಫಿನಾಲೆ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಈ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅವರ ಲುಕ್ ನೋಡಿ ಎಲ್ಲರೂ ಫಿದಾ ಆಗಿದ್ದಾರೆ. ಫಿನಾಲೆಯಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಆಗುತ್ತಿದೆ. ಆ ಪೈಕಿ ರೂಪೇಶ್ ಶೆಟ್ಟಿ ಒಂದು ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ಅವರ ಉತ್ತರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ರೂಪೇಶ್ ಶೆಟ್ಟಿ (Roopesh Shetty) ಅವರು ಒಟಿಟಿಯಿಂದ ಟಿವಿ ಸೀಸನ್​ಗೆ ಬಂದವರು. 140ಕ್ಕೂ ಹೆಚ್ಚು ದಿನ ಅವರು ದೊಡ್ಮನೆಯಲ್ಲಿ ಕಳೆದಿದ್ದಾರೆ.

ಬಿಗ್ ಬಾಸ್ ಅವಕಾಶ ಎಲ್ಲರಿಗೂ ಸಿಗೋದಿಲ್ಲ. ಕೆಲವರು ಈ ಅವಕಾಶ ಸಿಕ್ಕರೂ ಅದನ್ನು ಒಪ್ಪಿಕೊಳ್ಳುವುದಿಲ್ಲ. ಇನ್ನು, ಈ ಅವಕಾಶದ ನಂತರ ಹಲವರು ಬಣ್ಣದ ಬದುಕಲ್ಲಿ ಸಾಕಷ್ಟು ಮೇಲಕ್ಕೆ ಏರಿದ್ದಾರೆ. ಈ ನಿರೀಕ್ಷೆಯಲ್ಲೇ ಅನೇಕರು ಬಿಗ್ ಬಾಸ್​​ಗೆ ಬರುತ್ತಾರೆ. ರೂಪೇಶ್ ಶೆಟ್ಟಿಗೆ ಬಿಗ್ ಬಾಸ್​​ಗೆ ಬರುತ್ತೇನೆ ಎಂದಾಗ ಒಂದಷ್ಟು ಮಂದಿ ಒಳ್ಳೆಯ ಮಾತನ್ನು ಹೇಳಿದರೆ, ಇನ್ನೂ ಕೆಲವರು ನೆಗೆಟಿವ್ ಮಾತನ್ನು ಹೇಳಿದ್ದರು.

‘ಬಿಗ್ ಬಾಸ್​​ನಿಂದ ಕಾಲ್ ಬಂದಾಗ ಏನ್ ಮಾಡ್ತಾ ಇದ್ರಿ’ ಎಂದು ರೂಪೇಶ್ ಶೆಟ್ಟಿಗೆ ಸುದೀಪ್ ಪ್ರಶ್ನೆ ಮಾಡಿದರು. ‘ಕರೆ ಬಂದಾಗ ನಾನು ಮಂಗಳೂರಿನಲ್ಲಿದ್ದೆ. ನನ್ನ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದೆ. ಮೊದಲು ಇದು ಪ್ರ್ಯಾಂಕ್ ಅಂದ್ಕೊಂಡಿದ್ದೆ. ನಂತರ ಖಚಿತಪಡಿಸಿಕೊಂಡೆ. ಕೆಲವರಲ್ಲಿ ಈ ಬಗ್ಗೆ ಅಭಿಪ್ರಾಯ ಕೇಳಿದೆ. ನನಗಿಂತ ಅವರು ಖುಷಿಪಟ್ಟರು. ಪರಮೇಶ್ವರ್​ ಗುಂಡ್ಕಲ್​ ಜತೆ ಮೀಟಿಂಗ್ ಇತ್ತು. ನೀವು ಸೆಲೆಕ್ಟೆಡ್ ಅಂತ ಅಂದ್ರು’ ಎಂದಿದ್ದಾರೆ ರೂಪೇಶ್.

ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಯಲ್ಲಿ ಯಾವ ಸ್ಪರ್ಧಿ ಹೆಚ್ಚು ಸ್ಟ್ರಾಂಗ್​​? ಯಾರಿಗಿದೆ ಕಪ್ ಗೆಲ್ಲುವ ಚಾನ್ಸ್​?

ಕೆಲವರು ಈ ಶೋ ಬಗ್ಗೆ ನೆಗೆಟಿವ್ ಪ್ರತಿಕ್ರಿಯೆ ನೀಡಿದ್ದರಂತೆ. ‘ಕೆಲವರು ಪಾಸಿಟಿವ್ ಆಗಿ ಮಾತನಾಡಿದರು. ಇನ್ನೂ ಕೆಲವರು ಭಯಬೀಳಿಸಿದರು. ಆ ಶೋಗೆ ಹೋದ್ರೆ ಕ್ಯಾರೆಕ್ಟರ್ ಹಾಳಾಗತ್ತೆ ಅಂತ ಹೆದರಿಸಿದ್ರು. ನಾನು ಇಲ್ಲಿಗೆ ಬರದೆ ಇದ್ರೆ ಅದ್ಭುತ ಲೈಫ್ ಮಿಸ್ ಮಾಡಿಕೊಳ್ಳುತ್ತಿದ್ದೆ. ಸಂಬಂಧಗಳು ಅಂದ್ರೇನು ಅಂತ ಅರ್ಥ ಮಾಡಿಸ್ತು ಈ ಶೋ. ನಿಮ್ಮ ಬಾಯಿಂದ ನನ್ನ ಹೆಸರು ಕರೆಸಿಕೊಂಡೆ. ಇನ್ನೇನು ಬೇಕು’ ಎಂದು ಸಂತಸಪಟ್ಟರು ರೂಪೇಶ್ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:37 pm, Fri, 30 December 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!