AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಯಾರೆಕ್ಟರ್ ಹಾಳಾಗುತ್ತೆ ಅಂತ ಹೆದರಿಸಿದ್ರು’; ಎಚ್ಚರಿಕೆ ಬಗ್ಗೆ ಸುದೀಪ್ ಎದುರು ಹೇಳಿಕೊಂಡ ರೂಪೇಶ್ ಶೆಟ್ಟಿ

Bigg Boss Kannada Finale: ರೂಪೇಶ್ ಶೆಟ್ಟಿಗೆ ಬಿಗ್ ಬಾಸ್​​ಗೆ ಬರುತ್ತೇನೆ ಎಂದಾಗ ಒಂದಷ್ಟು ಮಂದಿ ಒಳ್ಳೆಯ ಮಾತನ್ನು ಹೇಳಿದರೆ, ಇನ್ನೂ ಕೆಲವರು ನೆಗೆಟಿವ್ ಮಾತನ್ನು ಹೇಳಿದ್ದರು.

‘ಕ್ಯಾರೆಕ್ಟರ್ ಹಾಳಾಗುತ್ತೆ ಅಂತ ಹೆದರಿಸಿದ್ರು’; ಎಚ್ಚರಿಕೆ ಬಗ್ಗೆ ಸುದೀಪ್ ಎದುರು ಹೇಳಿಕೊಂಡ ರೂಪೇಶ್ ಶೆಟ್ಟಿ
ರೂಪೇಶ್-ಸುದೀಪ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 30, 2022 | 8:39 PM

‘ಬಿಗ್ ಬಾಸ್​ ಕನ್ನಡ ಸೀಸನ್ 9’ (BBK 9) ಫಿನಾಲೆ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಈ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅವರ ಲುಕ್ ನೋಡಿ ಎಲ್ಲರೂ ಫಿದಾ ಆಗಿದ್ದಾರೆ. ಫಿನಾಲೆಯಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಆಗುತ್ತಿದೆ. ಆ ಪೈಕಿ ರೂಪೇಶ್ ಶೆಟ್ಟಿ ಒಂದು ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ಅವರ ಉತ್ತರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ರೂಪೇಶ್ ಶೆಟ್ಟಿ (Roopesh Shetty) ಅವರು ಒಟಿಟಿಯಿಂದ ಟಿವಿ ಸೀಸನ್​ಗೆ ಬಂದವರು. 140ಕ್ಕೂ ಹೆಚ್ಚು ದಿನ ಅವರು ದೊಡ್ಮನೆಯಲ್ಲಿ ಕಳೆದಿದ್ದಾರೆ.

ಬಿಗ್ ಬಾಸ್ ಅವಕಾಶ ಎಲ್ಲರಿಗೂ ಸಿಗೋದಿಲ್ಲ. ಕೆಲವರು ಈ ಅವಕಾಶ ಸಿಕ್ಕರೂ ಅದನ್ನು ಒಪ್ಪಿಕೊಳ್ಳುವುದಿಲ್ಲ. ಇನ್ನು, ಈ ಅವಕಾಶದ ನಂತರ ಹಲವರು ಬಣ್ಣದ ಬದುಕಲ್ಲಿ ಸಾಕಷ್ಟು ಮೇಲಕ್ಕೆ ಏರಿದ್ದಾರೆ. ಈ ನಿರೀಕ್ಷೆಯಲ್ಲೇ ಅನೇಕರು ಬಿಗ್ ಬಾಸ್​​ಗೆ ಬರುತ್ತಾರೆ. ರೂಪೇಶ್ ಶೆಟ್ಟಿಗೆ ಬಿಗ್ ಬಾಸ್​​ಗೆ ಬರುತ್ತೇನೆ ಎಂದಾಗ ಒಂದಷ್ಟು ಮಂದಿ ಒಳ್ಳೆಯ ಮಾತನ್ನು ಹೇಳಿದರೆ, ಇನ್ನೂ ಕೆಲವರು ನೆಗೆಟಿವ್ ಮಾತನ್ನು ಹೇಳಿದ್ದರು.

‘ಬಿಗ್ ಬಾಸ್​​ನಿಂದ ಕಾಲ್ ಬಂದಾಗ ಏನ್ ಮಾಡ್ತಾ ಇದ್ರಿ’ ಎಂದು ರೂಪೇಶ್ ಶೆಟ್ಟಿಗೆ ಸುದೀಪ್ ಪ್ರಶ್ನೆ ಮಾಡಿದರು. ‘ಕರೆ ಬಂದಾಗ ನಾನು ಮಂಗಳೂರಿನಲ್ಲಿದ್ದೆ. ನನ್ನ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದೆ. ಮೊದಲು ಇದು ಪ್ರ್ಯಾಂಕ್ ಅಂದ್ಕೊಂಡಿದ್ದೆ. ನಂತರ ಖಚಿತಪಡಿಸಿಕೊಂಡೆ. ಕೆಲವರಲ್ಲಿ ಈ ಬಗ್ಗೆ ಅಭಿಪ್ರಾಯ ಕೇಳಿದೆ. ನನಗಿಂತ ಅವರು ಖುಷಿಪಟ್ಟರು. ಪರಮೇಶ್ವರ್​ ಗುಂಡ್ಕಲ್​ ಜತೆ ಮೀಟಿಂಗ್ ಇತ್ತು. ನೀವು ಸೆಲೆಕ್ಟೆಡ್ ಅಂತ ಅಂದ್ರು’ ಎಂದಿದ್ದಾರೆ ರೂಪೇಶ್.

ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಯಲ್ಲಿ ಯಾವ ಸ್ಪರ್ಧಿ ಹೆಚ್ಚು ಸ್ಟ್ರಾಂಗ್​​? ಯಾರಿಗಿದೆ ಕಪ್ ಗೆಲ್ಲುವ ಚಾನ್ಸ್​?

ಕೆಲವರು ಈ ಶೋ ಬಗ್ಗೆ ನೆಗೆಟಿವ್ ಪ್ರತಿಕ್ರಿಯೆ ನೀಡಿದ್ದರಂತೆ. ‘ಕೆಲವರು ಪಾಸಿಟಿವ್ ಆಗಿ ಮಾತನಾಡಿದರು. ಇನ್ನೂ ಕೆಲವರು ಭಯಬೀಳಿಸಿದರು. ಆ ಶೋಗೆ ಹೋದ್ರೆ ಕ್ಯಾರೆಕ್ಟರ್ ಹಾಳಾಗತ್ತೆ ಅಂತ ಹೆದರಿಸಿದ್ರು. ನಾನು ಇಲ್ಲಿಗೆ ಬರದೆ ಇದ್ರೆ ಅದ್ಭುತ ಲೈಫ್ ಮಿಸ್ ಮಾಡಿಕೊಳ್ಳುತ್ತಿದ್ದೆ. ಸಂಬಂಧಗಳು ಅಂದ್ರೇನು ಅಂತ ಅರ್ಥ ಮಾಡಿಸ್ತು ಈ ಶೋ. ನಿಮ್ಮ ಬಾಯಿಂದ ನನ್ನ ಹೆಸರು ಕರೆಸಿಕೊಂಡೆ. ಇನ್ನೇನು ಬೇಕು’ ಎಂದು ಸಂತಸಪಟ್ಟರು ರೂಪೇಶ್ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:37 pm, Fri, 30 December 22

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ