AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಯಾರೆಕ್ಟರ್ ಹಾಳಾಗುತ್ತೆ ಅಂತ ಹೆದರಿಸಿದ್ರು’; ಎಚ್ಚರಿಕೆ ಬಗ್ಗೆ ಸುದೀಪ್ ಎದುರು ಹೇಳಿಕೊಂಡ ರೂಪೇಶ್ ಶೆಟ್ಟಿ

Bigg Boss Kannada Finale: ರೂಪೇಶ್ ಶೆಟ್ಟಿಗೆ ಬಿಗ್ ಬಾಸ್​​ಗೆ ಬರುತ್ತೇನೆ ಎಂದಾಗ ಒಂದಷ್ಟು ಮಂದಿ ಒಳ್ಳೆಯ ಮಾತನ್ನು ಹೇಳಿದರೆ, ಇನ್ನೂ ಕೆಲವರು ನೆಗೆಟಿವ್ ಮಾತನ್ನು ಹೇಳಿದ್ದರು.

‘ಕ್ಯಾರೆಕ್ಟರ್ ಹಾಳಾಗುತ್ತೆ ಅಂತ ಹೆದರಿಸಿದ್ರು’; ಎಚ್ಚರಿಕೆ ಬಗ್ಗೆ ಸುದೀಪ್ ಎದುರು ಹೇಳಿಕೊಂಡ ರೂಪೇಶ್ ಶೆಟ್ಟಿ
ರೂಪೇಶ್-ಸುದೀಪ್
TV9 Web
| Edited By: |

Updated on:Dec 30, 2022 | 8:39 PM

Share

‘ಬಿಗ್ ಬಾಸ್​ ಕನ್ನಡ ಸೀಸನ್ 9’ (BBK 9) ಫಿನಾಲೆ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಈ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅವರ ಲುಕ್ ನೋಡಿ ಎಲ್ಲರೂ ಫಿದಾ ಆಗಿದ್ದಾರೆ. ಫಿನಾಲೆಯಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಆಗುತ್ತಿದೆ. ಆ ಪೈಕಿ ರೂಪೇಶ್ ಶೆಟ್ಟಿ ಒಂದು ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ಅವರ ಉತ್ತರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ರೂಪೇಶ್ ಶೆಟ್ಟಿ (Roopesh Shetty) ಅವರು ಒಟಿಟಿಯಿಂದ ಟಿವಿ ಸೀಸನ್​ಗೆ ಬಂದವರು. 140ಕ್ಕೂ ಹೆಚ್ಚು ದಿನ ಅವರು ದೊಡ್ಮನೆಯಲ್ಲಿ ಕಳೆದಿದ್ದಾರೆ.

ಬಿಗ್ ಬಾಸ್ ಅವಕಾಶ ಎಲ್ಲರಿಗೂ ಸಿಗೋದಿಲ್ಲ. ಕೆಲವರು ಈ ಅವಕಾಶ ಸಿಕ್ಕರೂ ಅದನ್ನು ಒಪ್ಪಿಕೊಳ್ಳುವುದಿಲ್ಲ. ಇನ್ನು, ಈ ಅವಕಾಶದ ನಂತರ ಹಲವರು ಬಣ್ಣದ ಬದುಕಲ್ಲಿ ಸಾಕಷ್ಟು ಮೇಲಕ್ಕೆ ಏರಿದ್ದಾರೆ. ಈ ನಿರೀಕ್ಷೆಯಲ್ಲೇ ಅನೇಕರು ಬಿಗ್ ಬಾಸ್​​ಗೆ ಬರುತ್ತಾರೆ. ರೂಪೇಶ್ ಶೆಟ್ಟಿಗೆ ಬಿಗ್ ಬಾಸ್​​ಗೆ ಬರುತ್ತೇನೆ ಎಂದಾಗ ಒಂದಷ್ಟು ಮಂದಿ ಒಳ್ಳೆಯ ಮಾತನ್ನು ಹೇಳಿದರೆ, ಇನ್ನೂ ಕೆಲವರು ನೆಗೆಟಿವ್ ಮಾತನ್ನು ಹೇಳಿದ್ದರು.

‘ಬಿಗ್ ಬಾಸ್​​ನಿಂದ ಕಾಲ್ ಬಂದಾಗ ಏನ್ ಮಾಡ್ತಾ ಇದ್ರಿ’ ಎಂದು ರೂಪೇಶ್ ಶೆಟ್ಟಿಗೆ ಸುದೀಪ್ ಪ್ರಶ್ನೆ ಮಾಡಿದರು. ‘ಕರೆ ಬಂದಾಗ ನಾನು ಮಂಗಳೂರಿನಲ್ಲಿದ್ದೆ. ನನ್ನ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದೆ. ಮೊದಲು ಇದು ಪ್ರ್ಯಾಂಕ್ ಅಂದ್ಕೊಂಡಿದ್ದೆ. ನಂತರ ಖಚಿತಪಡಿಸಿಕೊಂಡೆ. ಕೆಲವರಲ್ಲಿ ಈ ಬಗ್ಗೆ ಅಭಿಪ್ರಾಯ ಕೇಳಿದೆ. ನನಗಿಂತ ಅವರು ಖುಷಿಪಟ್ಟರು. ಪರಮೇಶ್ವರ್​ ಗುಂಡ್ಕಲ್​ ಜತೆ ಮೀಟಿಂಗ್ ಇತ್ತು. ನೀವು ಸೆಲೆಕ್ಟೆಡ್ ಅಂತ ಅಂದ್ರು’ ಎಂದಿದ್ದಾರೆ ರೂಪೇಶ್.

ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಯಲ್ಲಿ ಯಾವ ಸ್ಪರ್ಧಿ ಹೆಚ್ಚು ಸ್ಟ್ರಾಂಗ್​​? ಯಾರಿಗಿದೆ ಕಪ್ ಗೆಲ್ಲುವ ಚಾನ್ಸ್​?

ಕೆಲವರು ಈ ಶೋ ಬಗ್ಗೆ ನೆಗೆಟಿವ್ ಪ್ರತಿಕ್ರಿಯೆ ನೀಡಿದ್ದರಂತೆ. ‘ಕೆಲವರು ಪಾಸಿಟಿವ್ ಆಗಿ ಮಾತನಾಡಿದರು. ಇನ್ನೂ ಕೆಲವರು ಭಯಬೀಳಿಸಿದರು. ಆ ಶೋಗೆ ಹೋದ್ರೆ ಕ್ಯಾರೆಕ್ಟರ್ ಹಾಳಾಗತ್ತೆ ಅಂತ ಹೆದರಿಸಿದ್ರು. ನಾನು ಇಲ್ಲಿಗೆ ಬರದೆ ಇದ್ರೆ ಅದ್ಭುತ ಲೈಫ್ ಮಿಸ್ ಮಾಡಿಕೊಳ್ಳುತ್ತಿದ್ದೆ. ಸಂಬಂಧಗಳು ಅಂದ್ರೇನು ಅಂತ ಅರ್ಥ ಮಾಡಿಸ್ತು ಈ ಶೋ. ನಿಮ್ಮ ಬಾಯಿಂದ ನನ್ನ ಹೆಸರು ಕರೆಸಿಕೊಂಡೆ. ಇನ್ನೇನು ಬೇಕು’ ಎಂದು ಸಂತಸಪಟ್ಟರು ರೂಪೇಶ್ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:37 pm, Fri, 30 December 22

Follow Us
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ