AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ‘ಸರಿಗಮಪ’ ವೇದಿಕೆ ಮೇಲೆ ಚಿಕ್ಕಮಗಳೂರಿನ ಶಿವಾನಿ ಮ್ಯಾಜಿಕ್; ವಾಯ್ಸ್ ಕೇಳಿ ಜಡ್ಜ್​​ಗಳೇ ಫಿದಾ

‘ಸರಿಗಮಪ’ ಲಿಟ್ಲ್ ಚಾಂಪ್ ಸೀಸನ್ 19ರಲ್ಲಿ ರನ್ನರ್​ ಅಪ್ ಆದ ಶಿವಾನಿ ಅವರು ಈಗ ಜೀ ತಮಿಳಿನ ಸರಿಗಮಪ ಸೀಸನ್ 5ರಲ್ಲಿ ಅವಕಾಶ ಪಡೆದಿದ್ದಾರೆ. ತಮಿಳು ಹಾಡೊಂದನ್ನು ಸುಮಧುರವಾಗಿ ಹಾಡಿದ ಅವರ ಪ್ರದರ್ಶನ ಜಡ್ಜ್​ಗಳನ್ನು ಮೆಚ್ಚಿಸಿದೆ. ಶಿವಾನಿ ಅವರ ಯಶಸ್ಸು ಕನ್ನಡಿಗರಿಗೆ ಹೆಮ್ಮೆಯ ವಿಷಯ.

ತಮಿಳು ‘ಸರಿಗಮಪ’ ವೇದಿಕೆ ಮೇಲೆ ಚಿಕ್ಕಮಗಳೂರಿನ ಶಿವಾನಿ ಮ್ಯಾಜಿಕ್; ವಾಯ್ಸ್ ಕೇಳಿ ಜಡ್ಜ್​​ಗಳೇ ಫಿದಾ
ಶಿವಾನಿ
ರಾಜೇಶ್ ದುಗ್ಗುಮನೆ
|

Updated on: May 26, 2025 | 1:04 PM

Share

ಜೀ ಕನ್ನಡದಲ್ಲಿ ಪ್ರಸಾರ ಕಂಡ ‘ಸರಿಗಮಪ ಲಿಟ್ಲ್ ಚಾಂಪ್ ಸೀಸನ್ 19’ರಲ್ಲಿ ಪ್ರಗತಿ ಬಡಿಗೇರ್ ಅವರು ಗೆಲುವು ಕಂಡರೆ ಚಿಕ್ಕಮಗಳೂರಿನ ಶಿವಾನಿ (Shivani) ಅವರು ಮೊದಲ ರನ್ನರ್ ಅಪ್ ಆದರು. ಈ ಮೂಲಕ ಅವರು ಕನ್ನಡಿಗರಿಂದ ಮೆಚ್ಚುಗೆ ಪಡೆದರು. ಈಗ ಅವರಿಗೆ ಜೀ ತಮಿಳಿನಲ್ಲಿ ಪ್ರಸಾರ ಕಾಣಲಿರುವ ‘ಸರಿಗಮಪ ಸೀಸನ್ 5’ರಲ್ಲಿ ಅವಕಾಶ ದೊರೆತಿದೆ. ಇದು ಅವರಿಗೆ ಹಾಗೂ ಅವರ ಕುಟುಂಬದ ಖುಷಿ ಹೆಚ್ಚಿಸಿದೆ. ಅವರ ಧ್ವನಿ ಕೇಳಿ ಜಡ್ಜ್​ಗಳೇ ಫಿದಾ ಆಗಿದ್ದಾರೆ.

ಬಿಗ್ ಬಾಸ್ ರಿಯಾಲಿಟಿ ಶೋಗಳಲ್ಲಿ ಆಯಾ ಭಾಷೆಯಲ್ಲಿ ಜನಪ್ರಿಯತೆ ಪಡೆದ ಕಲಾವಿದರನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಏಕೆಂದರೆ ಅಲ್ಲಿ ಭಾಷೆ ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ಆದರೆ, ಹಾಡಿನ ರಿಯಾಲಿಟಿ ಶೋಗಳಿಗೆ ಈ ರೀತಿಯ ಯಾವುದೇ ಚೌಕಟ್ಟು ಇರೋದಿಲ್ಲ. ಈ ಕಾರಣದಿಂದಲೇ ಅನೇಕರು ಬೇರೆ ಬೇರೆ ಭಾಷೆಯ ಸಿಂಗಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಈಗ ಶಿವಾನಿ ಕೂಡ ತಮಿಳಿನ ರಿಯಾಲಿಟಿ ಶೋಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ
Image
‘ಸರಿಗಮಪ’ ಫಿನಾಲೆಯಲ್ಲಿ ಇಲ್ಲ ಲಹರಿ ಮಹೇಶ್; ಅಭಿಮಾನಿಗಳ ಆಕ್ರೋಶ
Image
‘ಸೀತಾ ರಾಮ’ ಧಾರಾವಾಹಿಗೆ ವಿದಾಯದ ಸಂಚಿಕೆ; ಸೀತಾಗೆ ಗನ್​ ಹಿಡಿದ ಭಾರ್ಗವಿ
Image
‘ಕುಬೇರ’ ಟೀಸರ್: ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ; ಗ್ಲಾಮರ್ ಮಾಯ
Image
‘ಸರಿಗಮಪ’ ಫೈನಲಿಸ್ಟ್ ಇವರೇ ನೋಡಿ; ಫಿನಾಲೆ ಮತ್ತಷ್ಟು ಕಠಿಣ

ಜೀ ತೆಲುಗಿನಲ್ಲಿ ಪ್ರಸಾರ ಕಾಣಲಿರುವ ‘ಸರಿಗಮಪ ಸೀಸನ್ 5’ರ ಆಡಿಷನ್​ನಲ್ಲಿ ಶಿವಾನಿ ಭಾಗಿಯಾಗಿದ್ದರು. ವೇದಿಕೆ ಮೇಲೆ ಅವರು ತಮ್ಮ ಹಾಡಿನ ಸಾಮರ್ಥ್ಯ ತೋರಿಸಿದ್ದಾರೆ. 2011ರಲ್ಲಿ ರಿಲೀಸ್ ಆದ ತಮಿಳಿನ ‘ವಾಗೈ ಸೂಡ ವಾ’ ಚಿತ್ರದ ‘ಪೋರಾನೆ ಪೋರಾನೆ..’ ಹಾಡನ್ನು ಸುಮಧುರವಾಗಿ ಹಾಡಿದ್ದಾರೆ ಶಿವಾನಿ. ತಮಿಳಿನ ಹಾಡನ್ನು ಕಲಿತು ಇಷ್ಟು ಅದ್ಭುತವಾಗಿ ಹಾಡಿದ್ದಕ್ಕೆ ಎಲ್ಲರೂ ಫಿದಾ ಆಗಿದ್ದಾರೆ.

ಇದನ್ನೂ ಓದಿ: ‘ಸರಿಗಮಪ’ ಫಿನಾಲೆಯಲ್ಲಿ ಲಹರಿ ಮಹೇಶ್​ಗೆ ಇಲ್ಲ ಸ್ಥಾನ; ಅಭಿಮಾನಿಗಳ ಆಕ್ರೋಶ

ಶಿವಾನಿ ಹಾಡನ್ನು ಕೇಳಿ ವೇದಿಕೆ ಮೇಲಿದ್ದ ಜಡ್ಜ್​ಗಳು ಹಾಗೂ ಜ್ಯೂರಿಗಳು ಫಿದಾ ಆಗಿದ್ದಾರೆ. ಎಲ್ಲರೂ ಅವರನ್ನು ಸ್ಪರ್ಧಿಯಾಗಿ ಆಯ್ಕೆ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ವೇದಿಕೆ ಮೇಲೆ ಗಾಯಕ ವಿಜಯ್ ಪ್ರಕಾಶ್ ಕೂಡ ಇದ್ದರು ಅನ್ನೋದು ವಿಶೇಷ.  ಶಿವಾನಿ ಅವರು ಸೀಸನ್ 19ರಲ್ಲಿ ಇರುವಾಗ ವಿಜಯ್ ಪ್ರಕಾಶ್ ಕೂಡ ಜಡ್ಜ್​ ಸ್ಥಾನದಲ್ಲಿ ಇದ್ದರು. ಈಗ ಅವರು ಮತ್ತೊಮ್ಮೆ ವಿಜಯ್ ಪ್ರಕಾಶ್ ಅಡಿಯಲ್ಲಿ ಹಾಡಲು ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು