AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ಜೊತೆ ಕ್ಲೋಸ್ ಆದ ಧರ್ಮ; ದುಷ್ಮನ್ ಆಗಿ ಬದಲಾದ ಅನುಷಾ ರೈ

ಈ ವಾರ ಎಲ್ಲರೂ ಬಿಗ್ ಬಾಸ್ ಮನೆಯಲ್ಲಿ ಜೋಡಿಯಾಗಿ ಆಟ ಆಡಬೇಕಾಗಿದೆ. ನೇರ ನಾಮಿನೇಷನ್​ ಮಾಡುವಾಗ ಎಲ್ಲರೂ ಗೋಲ್ಡ್ ಸುರೇಶ್ ಮತ್ತು ಅನುಷಾ ರೈ ಜೋಡಿಯನ್ನು ಟಾರ್ಗೆಟ್ ಮಾಡಿದ್ದಾರೆ. ಧರ್ಮ ಮತ್ತು ಐಶ್ವರ್ಯಾ ಸಿಂಧೋಗಿ ಕೂಡ ಅನುಷಾ-ಸುರೇಶ್ ಕಡೆಗೆ ಕೈ ತೋರಿಸಿದ್ದಾರೆ. ಇದರಿಂದ ಅನುಷಾ ರೈ ಕೆಂಡಾಮಂಡಲ ಆಗಿದ್ದಾರೆ.

ಐಶ್ವರ್ಯಾ ಜೊತೆ ಕ್ಲೋಸ್ ಆದ ಧರ್ಮ; ದುಷ್ಮನ್ ಆಗಿ ಬದಲಾದ ಅನುಷಾ ರೈ
ಧರ್ಮ ಕೀರ್ತಿರಾಜ್, ಐಶ್ವರ್ಯಾ, ಅನುಷಾ ರೈ
ಮದನ್​ ಕುಮಾರ್​
|

Updated on: Nov 12, 2024 | 10:27 PM

Share

ಬಿಗ್ ಬಾಸ್ ಮನೆಗೆ ಬರುವುದಕ್ಕೂ ಮುನ್ನವೇ ಅನುಷಾ ರೈ ಮತ್ತು ಧರ್ಮ ಕೀರ್ತಿರಾಜ್ ಅವರ ನಡುವೆ ಪರಿಚಯ ಇತ್ತು. ದೊಡ್ಮನೆಗೆ ಕಾಲಿಟ್ಟ ಬಳಿಕ ಅವರಿಬ್ಬರ ನಡುವಿನ ಆಪ್ತತೆ ಹೆಚ್ಚಾಗಿತ್ತು. ಆದರೆ ಈ ವಾರ ಬಿಗ್ ಬಾಸ್ ಆಟದಲ್ಲಿ ವರಸೆ ಬದಲಾಗಿದೆ. ಹಿಂದಿನ ದಿನದವರೆಗೂ ಪರಸ್ಪರ ಚೆನ್ನಾಗಿದ್ದ ಧರ್ಮ ಕೀರ್ತಿರಾಜ್ ಮತ್ತು ಅನುಷಾ ರೈ ಅವರು 43ನೇ ದಿನ ದುಷ್ಮನ್​ಗಳ ರೀತಿ ವರ್ತಿಸಿದ್ದಾರೆ. ಅದಕ್ಕೆಲ್ಲ ಕಾರಣ ಆಗಿದ್ದು ನೇರ ನಾಮಿನೇಷನ್​ ಪ್ರಕ್ರಿಯೆ. ಈ ವಾರ ಜೋಡಿ ಟಾಸ್ಕ್ ಆದ್ದರಿಂದ ಒಂದು ಜೋಡಿಯನ್ನು ನೇರವಾಗಿ ನಾಮಿನೇಟ್ ಮಾಡಬೇಕು. ಅದಕ್ಕಾಗಿ ಬಹುತೇಕರು ಅನುಷಾ ರೈ ಹಾಗೂ ಗೋಲ್ಡ್ ಸುರೇಶ್​ ಅವರನ್ನು ಟಾರ್ಗೆಟ್ ಮಾಡಿದ್ದಾರೆ.

ಜೋಡಿ ಟಾಸ್ಕ್​ನಲ್ಲಿ ಐಶ್ವರ್ಯಾ ಸಿಂಧೋಗಿ ಮತ್ತು ಧರ್ಮ ಕೀರ್ತಿರಾಜ್ ಅವರು ಒಂದಾಗಿದ್ದಾರೆ. ಈ ಮೊದಲು ಕೂಡ ಅನುಷಾ ರೈ, ಧರ್ಮ ಕೀರ್ತಿರಾಜ್ ಹಾಗೂ ಐಶ್ವರ್ಯಾ ನಡುವೆ ತ್ರಿಕೋನ ಲವ್ ಸ್ಟೋರಿ ಇದೆ ಎಂದು ಹೇಳಲಾಗಿತ್ತು. ಐಶ್ವರ್ಯಾ ಜೊತೆ ಧರ್ಮ ಇದ್ದಾಗ ಅನುಷಾಗೆ ಕಸಿವಿಸಿ ಆಗುತ್ತಿತ್ತು. ಈಗ ಆ ಕಸಿವಿಸಿ ಇನ್ನಷ್ಟು ಹೆಚ್ಚಾದಂತಿದೆ. ಯಾಕೆಂದರೆ, ಧರ್ಮ ಕೀರ್ತಿರಾಜ್​ ಮತ್ತು ಐಶ್ವರ್ಯಾ ಅವರು ಜೋಡಿಯಾಗಿ ಆಟ ಆಡುತ್ತಿದ್ದಾರೆ.

ಬಹುತೇಕ ಎಲ್ಲರೂ ಅನುಷಾ ರೈ ಮತ್ತು ಗೋಲ್ಡ್ ಸುರೇಶ್ ಅವರನ್ನು ನಾಮಿನೇಟ್ ಮಾಡಿದ್ದರಿಂದ ಧರ್ಮ ಕೀರ್ತಿರಾಜ್ ಅವರಿಗೂ ಬೇರೆ ಆಯ್ಕೆ ಇರಲಿಲ್ಲ. ಅವರು ಕೂಡ ಇದೇ ಜೋಡಿಯನ್ನು ನೇರವಾಗಿ ನಾಮಿನೇಟ್ ಮಾಡಿದರು. ಅದರಿಂದಾಗಿ ಅನುಷಾ ರೈ ಅವರಿಗೆ ತುಂಬ ನೋವಾಯಿತು. ನಾಮಿನೇಷನ್​ ಪ್ರಕ್ರಿಯೆಯಲ್ಲಿ ಧರ್ಮ ಹಾಗೂ ಅನುಷಾ ಅವರು ಜೋರಾಗಿ ಜಗಳ ಮಾಡಿಕೊಂಡರು.

ಇದನ್ನೂ ಓದಿ: ಅನುಷಾ-ಧರ್ಮ ಸಂಬಂಧಕ್ಕೆ ಹುಳಿ ಹಿಂಡಿದ ಬಿಗ್ ಬಾಸ್ ಟಾಸ್ಕ್

ಜಗಳ ನಡೆದ ಬಳಿಕ ಅನುಷಾ ರೈ ಅವರು ಸಿಕ್ಕಾಪಟ್ಟೆ ಕೋಪ ಮಾಡಿಕೊಂಡರು. ಅವರನ್ನು ಸಮಧಾನ ಮಾಡಲು ಧರ್ಮ ಪ್ರಯತ್ನಿಸಿದರು. ತಮ್ಮ ಮಾತಿನಲ್ಲಿ ಯಾವುದೇ ಬೇರೆ ಉದ್ದೇಶ ಇರಲಿಲ್ಲ ಎಂದು ಧರ್ಮ ಅವರು ಮನವರಿಕೆ ಮಾಡಲು ಪ್ರಯತ್ನಿಸಿದರೂ ಕೂಡ ಅನುಷಾ ಒಪ್ಪಿಕೊಳ್ಳಲಿಲ್ಲ. ಧರ್ಮ ಜೊತೆ ಮಾತನಾಡಲು ಕೂಡ ಅನುಷಾ ಮನಸ್ಸು ಮಾಡಲಿಲ್ಲ. ಇದರಿಂದಾಗಿ ಇಬ್ಬರ ನಡುವೆ ದುಷ್ಮನಿ ಬೆಳೆದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ