AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ಜೊತೆ ಕ್ಲೋಸ್ ಆದ ಧರ್ಮ; ದುಷ್ಮನ್ ಆಗಿ ಬದಲಾದ ಅನುಷಾ ರೈ

ಈ ವಾರ ಎಲ್ಲರೂ ಬಿಗ್ ಬಾಸ್ ಮನೆಯಲ್ಲಿ ಜೋಡಿಯಾಗಿ ಆಟ ಆಡಬೇಕಾಗಿದೆ. ನೇರ ನಾಮಿನೇಷನ್​ ಮಾಡುವಾಗ ಎಲ್ಲರೂ ಗೋಲ್ಡ್ ಸುರೇಶ್ ಮತ್ತು ಅನುಷಾ ರೈ ಜೋಡಿಯನ್ನು ಟಾರ್ಗೆಟ್ ಮಾಡಿದ್ದಾರೆ. ಧರ್ಮ ಮತ್ತು ಐಶ್ವರ್ಯಾ ಸಿಂಧೋಗಿ ಕೂಡ ಅನುಷಾ-ಸುರೇಶ್ ಕಡೆಗೆ ಕೈ ತೋರಿಸಿದ್ದಾರೆ. ಇದರಿಂದ ಅನುಷಾ ರೈ ಕೆಂಡಾಮಂಡಲ ಆಗಿದ್ದಾರೆ.

ಐಶ್ವರ್ಯಾ ಜೊತೆ ಕ್ಲೋಸ್ ಆದ ಧರ್ಮ; ದುಷ್ಮನ್ ಆಗಿ ಬದಲಾದ ಅನುಷಾ ರೈ
ಧರ್ಮ ಕೀರ್ತಿರಾಜ್, ಐಶ್ವರ್ಯಾ, ಅನುಷಾ ರೈ
Follow us
ಮದನ್​ ಕುಮಾರ್​
|

Updated on: Nov 12, 2024 | 10:27 PM

ಬಿಗ್ ಬಾಸ್ ಮನೆಗೆ ಬರುವುದಕ್ಕೂ ಮುನ್ನವೇ ಅನುಷಾ ರೈ ಮತ್ತು ಧರ್ಮ ಕೀರ್ತಿರಾಜ್ ಅವರ ನಡುವೆ ಪರಿಚಯ ಇತ್ತು. ದೊಡ್ಮನೆಗೆ ಕಾಲಿಟ್ಟ ಬಳಿಕ ಅವರಿಬ್ಬರ ನಡುವಿನ ಆಪ್ತತೆ ಹೆಚ್ಚಾಗಿತ್ತು. ಆದರೆ ಈ ವಾರ ಬಿಗ್ ಬಾಸ್ ಆಟದಲ್ಲಿ ವರಸೆ ಬದಲಾಗಿದೆ. ಹಿಂದಿನ ದಿನದವರೆಗೂ ಪರಸ್ಪರ ಚೆನ್ನಾಗಿದ್ದ ಧರ್ಮ ಕೀರ್ತಿರಾಜ್ ಮತ್ತು ಅನುಷಾ ರೈ ಅವರು 43ನೇ ದಿನ ದುಷ್ಮನ್​ಗಳ ರೀತಿ ವರ್ತಿಸಿದ್ದಾರೆ. ಅದಕ್ಕೆಲ್ಲ ಕಾರಣ ಆಗಿದ್ದು ನೇರ ನಾಮಿನೇಷನ್​ ಪ್ರಕ್ರಿಯೆ. ಈ ವಾರ ಜೋಡಿ ಟಾಸ್ಕ್ ಆದ್ದರಿಂದ ಒಂದು ಜೋಡಿಯನ್ನು ನೇರವಾಗಿ ನಾಮಿನೇಟ್ ಮಾಡಬೇಕು. ಅದಕ್ಕಾಗಿ ಬಹುತೇಕರು ಅನುಷಾ ರೈ ಹಾಗೂ ಗೋಲ್ಡ್ ಸುರೇಶ್​ ಅವರನ್ನು ಟಾರ್ಗೆಟ್ ಮಾಡಿದ್ದಾರೆ.

ಜೋಡಿ ಟಾಸ್ಕ್​ನಲ್ಲಿ ಐಶ್ವರ್ಯಾ ಸಿಂಧೋಗಿ ಮತ್ತು ಧರ್ಮ ಕೀರ್ತಿರಾಜ್ ಅವರು ಒಂದಾಗಿದ್ದಾರೆ. ಈ ಮೊದಲು ಕೂಡ ಅನುಷಾ ರೈ, ಧರ್ಮ ಕೀರ್ತಿರಾಜ್ ಹಾಗೂ ಐಶ್ವರ್ಯಾ ನಡುವೆ ತ್ರಿಕೋನ ಲವ್ ಸ್ಟೋರಿ ಇದೆ ಎಂದು ಹೇಳಲಾಗಿತ್ತು. ಐಶ್ವರ್ಯಾ ಜೊತೆ ಧರ್ಮ ಇದ್ದಾಗ ಅನುಷಾಗೆ ಕಸಿವಿಸಿ ಆಗುತ್ತಿತ್ತು. ಈಗ ಆ ಕಸಿವಿಸಿ ಇನ್ನಷ್ಟು ಹೆಚ್ಚಾದಂತಿದೆ. ಯಾಕೆಂದರೆ, ಧರ್ಮ ಕೀರ್ತಿರಾಜ್​ ಮತ್ತು ಐಶ್ವರ್ಯಾ ಅವರು ಜೋಡಿಯಾಗಿ ಆಟ ಆಡುತ್ತಿದ್ದಾರೆ.

ಬಹುತೇಕ ಎಲ್ಲರೂ ಅನುಷಾ ರೈ ಮತ್ತು ಗೋಲ್ಡ್ ಸುರೇಶ್ ಅವರನ್ನು ನಾಮಿನೇಟ್ ಮಾಡಿದ್ದರಿಂದ ಧರ್ಮ ಕೀರ್ತಿರಾಜ್ ಅವರಿಗೂ ಬೇರೆ ಆಯ್ಕೆ ಇರಲಿಲ್ಲ. ಅವರು ಕೂಡ ಇದೇ ಜೋಡಿಯನ್ನು ನೇರವಾಗಿ ನಾಮಿನೇಟ್ ಮಾಡಿದರು. ಅದರಿಂದಾಗಿ ಅನುಷಾ ರೈ ಅವರಿಗೆ ತುಂಬ ನೋವಾಯಿತು. ನಾಮಿನೇಷನ್​ ಪ್ರಕ್ರಿಯೆಯಲ್ಲಿ ಧರ್ಮ ಹಾಗೂ ಅನುಷಾ ಅವರು ಜೋರಾಗಿ ಜಗಳ ಮಾಡಿಕೊಂಡರು.

ಇದನ್ನೂ ಓದಿ: ಅನುಷಾ-ಧರ್ಮ ಸಂಬಂಧಕ್ಕೆ ಹುಳಿ ಹಿಂಡಿದ ಬಿಗ್ ಬಾಸ್ ಟಾಸ್ಕ್

ಜಗಳ ನಡೆದ ಬಳಿಕ ಅನುಷಾ ರೈ ಅವರು ಸಿಕ್ಕಾಪಟ್ಟೆ ಕೋಪ ಮಾಡಿಕೊಂಡರು. ಅವರನ್ನು ಸಮಧಾನ ಮಾಡಲು ಧರ್ಮ ಪ್ರಯತ್ನಿಸಿದರು. ತಮ್ಮ ಮಾತಿನಲ್ಲಿ ಯಾವುದೇ ಬೇರೆ ಉದ್ದೇಶ ಇರಲಿಲ್ಲ ಎಂದು ಧರ್ಮ ಅವರು ಮನವರಿಕೆ ಮಾಡಲು ಪ್ರಯತ್ನಿಸಿದರೂ ಕೂಡ ಅನುಷಾ ಒಪ್ಪಿಕೊಳ್ಳಲಿಲ್ಲ. ಧರ್ಮ ಜೊತೆ ಮಾತನಾಡಲು ಕೂಡ ಅನುಷಾ ಮನಸ್ಸು ಮಾಡಲಿಲ್ಲ. ಇದರಿಂದಾಗಿ ಇಬ್ಬರ ನಡುವೆ ದುಷ್ಮನಿ ಬೆಳೆದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ