ಐಶ್ವರ್ಯಾ ಜೊತೆ ಕ್ಲೋಸ್ ಆದ ಧರ್ಮ; ದುಷ್ಮನ್ ಆಗಿ ಬದಲಾದ ಅನುಷಾ ರೈ

ಈ ವಾರ ಎಲ್ಲರೂ ಬಿಗ್ ಬಾಸ್ ಮನೆಯಲ್ಲಿ ಜೋಡಿಯಾಗಿ ಆಟ ಆಡಬೇಕಾಗಿದೆ. ನೇರ ನಾಮಿನೇಷನ್​ ಮಾಡುವಾಗ ಎಲ್ಲರೂ ಗೋಲ್ಡ್ ಸುರೇಶ್ ಮತ್ತು ಅನುಷಾ ರೈ ಜೋಡಿಯನ್ನು ಟಾರ್ಗೆಟ್ ಮಾಡಿದ್ದಾರೆ. ಧರ್ಮ ಮತ್ತು ಐಶ್ವರ್ಯಾ ಸಿಂಧೋಗಿ ಕೂಡ ಅನುಷಾ-ಸುರೇಶ್ ಕಡೆಗೆ ಕೈ ತೋರಿಸಿದ್ದಾರೆ. ಇದರಿಂದ ಅನುಷಾ ರೈ ಕೆಂಡಾಮಂಡಲ ಆಗಿದ್ದಾರೆ.

ಐಶ್ವರ್ಯಾ ಜೊತೆ ಕ್ಲೋಸ್ ಆದ ಧರ್ಮ; ದುಷ್ಮನ್ ಆಗಿ ಬದಲಾದ ಅನುಷಾ ರೈ
ಧರ್ಮ ಕೀರ್ತಿರಾಜ್, ಐಶ್ವರ್ಯಾ, ಅನುಷಾ ರೈ

Updated on: Nov 12, 2024 | 10:27 PM

ಬಿಗ್ ಬಾಸ್ ಮನೆಗೆ ಬರುವುದಕ್ಕೂ ಮುನ್ನವೇ ಅನುಷಾ ರೈ ಮತ್ತು ಧರ್ಮ ಕೀರ್ತಿರಾಜ್ ಅವರ ನಡುವೆ ಪರಿಚಯ ಇತ್ತು. ದೊಡ್ಮನೆಗೆ ಕಾಲಿಟ್ಟ ಬಳಿಕ ಅವರಿಬ್ಬರ ನಡುವಿನ ಆಪ್ತತೆ ಹೆಚ್ಚಾಗಿತ್ತು. ಆದರೆ ಈ ವಾರ ಬಿಗ್ ಬಾಸ್ ಆಟದಲ್ಲಿ ವರಸೆ ಬದಲಾಗಿದೆ. ಹಿಂದಿನ ದಿನದವರೆಗೂ ಪರಸ್ಪರ ಚೆನ್ನಾಗಿದ್ದ ಧರ್ಮ ಕೀರ್ತಿರಾಜ್ ಮತ್ತು ಅನುಷಾ ರೈ ಅವರು 43ನೇ ದಿನ ದುಷ್ಮನ್​ಗಳ ರೀತಿ ವರ್ತಿಸಿದ್ದಾರೆ. ಅದಕ್ಕೆಲ್ಲ ಕಾರಣ ಆಗಿದ್ದು ನೇರ ನಾಮಿನೇಷನ್​ ಪ್ರಕ್ರಿಯೆ. ಈ ವಾರ ಜೋಡಿ ಟಾಸ್ಕ್ ಆದ್ದರಿಂದ ಒಂದು ಜೋಡಿಯನ್ನು ನೇರವಾಗಿ ನಾಮಿನೇಟ್ ಮಾಡಬೇಕು. ಅದಕ್ಕಾಗಿ ಬಹುತೇಕರು ಅನುಷಾ ರೈ ಹಾಗೂ ಗೋಲ್ಡ್ ಸುರೇಶ್​ ಅವರನ್ನು ಟಾರ್ಗೆಟ್ ಮಾಡಿದ್ದಾರೆ.

ಜೋಡಿ ಟಾಸ್ಕ್​ನಲ್ಲಿ ಐಶ್ವರ್ಯಾ ಸಿಂಧೋಗಿ ಮತ್ತು ಧರ್ಮ ಕೀರ್ತಿರಾಜ್ ಅವರು ಒಂದಾಗಿದ್ದಾರೆ. ಈ ಮೊದಲು ಕೂಡ ಅನುಷಾ ರೈ, ಧರ್ಮ ಕೀರ್ತಿರಾಜ್ ಹಾಗೂ ಐಶ್ವರ್ಯಾ ನಡುವೆ ತ್ರಿಕೋನ ಲವ್ ಸ್ಟೋರಿ ಇದೆ ಎಂದು ಹೇಳಲಾಗಿತ್ತು. ಐಶ್ವರ್ಯಾ ಜೊತೆ ಧರ್ಮ ಇದ್ದಾಗ ಅನುಷಾಗೆ ಕಸಿವಿಸಿ ಆಗುತ್ತಿತ್ತು. ಈಗ ಆ ಕಸಿವಿಸಿ ಇನ್ನಷ್ಟು ಹೆಚ್ಚಾದಂತಿದೆ. ಯಾಕೆಂದರೆ, ಧರ್ಮ ಕೀರ್ತಿರಾಜ್​ ಮತ್ತು ಐಶ್ವರ್ಯಾ ಅವರು ಜೋಡಿಯಾಗಿ ಆಟ ಆಡುತ್ತಿದ್ದಾರೆ.

ಬಹುತೇಕ ಎಲ್ಲರೂ ಅನುಷಾ ರೈ ಮತ್ತು ಗೋಲ್ಡ್ ಸುರೇಶ್ ಅವರನ್ನು ನಾಮಿನೇಟ್ ಮಾಡಿದ್ದರಿಂದ ಧರ್ಮ ಕೀರ್ತಿರಾಜ್ ಅವರಿಗೂ ಬೇರೆ ಆಯ್ಕೆ ಇರಲಿಲ್ಲ. ಅವರು ಕೂಡ ಇದೇ ಜೋಡಿಯನ್ನು ನೇರವಾಗಿ ನಾಮಿನೇಟ್ ಮಾಡಿದರು. ಅದರಿಂದಾಗಿ ಅನುಷಾ ರೈ ಅವರಿಗೆ ತುಂಬ ನೋವಾಯಿತು. ನಾಮಿನೇಷನ್​ ಪ್ರಕ್ರಿಯೆಯಲ್ಲಿ ಧರ್ಮ ಹಾಗೂ ಅನುಷಾ ಅವರು ಜೋರಾಗಿ ಜಗಳ ಮಾಡಿಕೊಂಡರು.

ಇದನ್ನೂ ಓದಿ: ಅನುಷಾ-ಧರ್ಮ ಸಂಬಂಧಕ್ಕೆ ಹುಳಿ ಹಿಂಡಿದ ಬಿಗ್ ಬಾಸ್ ಟಾಸ್ಕ್

ಜಗಳ ನಡೆದ ಬಳಿಕ ಅನುಷಾ ರೈ ಅವರು ಸಿಕ್ಕಾಪಟ್ಟೆ ಕೋಪ ಮಾಡಿಕೊಂಡರು. ಅವರನ್ನು ಸಮಧಾನ ಮಾಡಲು ಧರ್ಮ ಪ್ರಯತ್ನಿಸಿದರು. ತಮ್ಮ ಮಾತಿನಲ್ಲಿ ಯಾವುದೇ ಬೇರೆ ಉದ್ದೇಶ ಇರಲಿಲ್ಲ ಎಂದು ಧರ್ಮ ಅವರು ಮನವರಿಕೆ ಮಾಡಲು ಪ್ರಯತ್ನಿಸಿದರೂ ಕೂಡ ಅನುಷಾ ಒಪ್ಪಿಕೊಳ್ಳಲಿಲ್ಲ. ಧರ್ಮ ಜೊತೆ ಮಾತನಾಡಲು ಕೂಡ ಅನುಷಾ ಮನಸ್ಸು ಮಾಡಲಿಲ್ಲ. ಇದರಿಂದಾಗಿ ಇಬ್ಬರ ನಡುವೆ ದುಷ್ಮನಿ ಬೆಳೆದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us