Coffee Nadu Chandu: ಕಾಫಿ ನಾಡು ಚಂದುಗೆ ಅನುಶ್ರೀ ಪ್ರೀತಿಯ ಗಿಫ್ಟ್​; ಶಿವಣ್ಣನ ಎದುರು ಎಮೋಷನಲ್​ ಆದ ರೀಲ್ಸ್​ ಹೀರೋ

Coffee Nadu Chandu Video: ‘ಡಿಕೆಡಿ’ ವೇದಿಕೆಗೆ ಬಂದ ಕಾಫಿ ನಾಡು ಚಂದುಗೆ ಎಲ್ಲರೂ ಪ್ರೀತಿಯ ಸ್ವಾಗತ ಕೋರಿದ್ದಾರೆ. ಅವರ ಜೊತೆ ನಿರೂಪಕಿ ಅನುಶ್ರೀ ತುಂಬ ಆತ್ಮೀಯವಾಗಿ ನಡೆದುಕೊಂಡಿದ್ದಾರೆ.

Coffee Nadu Chandu: ಕಾಫಿ ನಾಡು ಚಂದುಗೆ ಅನುಶ್ರೀ ಪ್ರೀತಿಯ ಗಿಫ್ಟ್​; ಶಿವಣ್ಣನ ಎದುರು ಎಮೋಷನಲ್​ ಆದ ರೀಲ್ಸ್​ ಹೀರೋ
ಕಾಫಿ ನಾಡು ಚಂದು, ನಿರೂಪಕಿ ಅನುಶ್ರೀ
Follow us
| Updated By: ಮದನ್​ ಕುಮಾರ್​

Updated on:Aug 28, 2022 | 4:01 PM

ತಮ್ಮದೇ ಶೈಲಿಯಲ್ಲಿ ರೀಲ್ಸ್​ ಮಾಡಿ ಫೇಮಸ್​ ಆದ ಕಾಫಿ ನಾಡು ಚಂದು (Coffee Nadu Chandu) ಈಗ ನಿರೂಪಕಿ ಅನುಶ್ರೀ ಅವರನ್ನು ಭೇಟಿ ಮಾಡಿದ್ದಾರೆ. ಜೀ ಕನ್ನಡದ ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಕಾರ್ಯಕ್ರಮಕ್ಕೆ ಚಂದು ಅತಿಥಿಯಾಗಿ ಬಂದಿದ್ದಾರೆ. ಈ ವೇಳೆ ಅವರನ್ನು ನಟ ಶಿವರಾಜ್​ಕುಮಾರ್​ (Shivarajkumar) ಭೇಟಿ ಮಾಡಿದ್ದಾರೆ. ಈ ಭೇಟಿಯಲ್ಲಿ ಚಂದುಗೆ ಅನುಶ್ರೀ (Anchor Anushree) ಕಡೆಯಿಂದ ವಿಶೇಷ ಗಿಫ್ಟ್​ ಸಿಕ್ಕಿದೆ. ನಿರೂಪಕಿಯಿಂದ ವಾಚ್​ ಪಡೆದಿರುವ ಚಂದು ಫುಲ್​ ಖುಷಿ ಆಗಿದ್ದಾರೆ. ಆ ವಿಡಿಯೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಚಂದುಗೆ ಎಲ್ಲ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ವೇದಿಕೆಯಲ್ಲಿ ಏನು ನಡೆಯಿತು ಎಂಬುದರ ಝಲಕ್​ ತೋರಿಸುವ ಪ್ರೋವೋವನ್ನು ಕೂಡ ಕಾಫಿ ನಾಡು ಚಂದು ಶೇರ್​ ಮಾಡಿಕೊಂಡಿದ್ದಾರೆ.

ಜೀ ಕನ್ನಡಕ್ಕೆ ಬಂದ ಕಾಫಿ ನಾಡು ಚಂದುಗೆ ಎಲ್ಲರೂ ಪ್ರೀತಿಯ ಸ್ವಾಗತ ಕೋರಿದ್ದಾರೆ. ಅವರ ಜೊತೆ ನಿರೂಪಕಿ ಅನುಶ್ರೀ ತುಂಬ ಆತ್ಮೀಯವಾಗಿ ನಡೆದುಕೊಂಡಿದ್ದಾರೆ. ಚಂದುಗೆ ಗಿಫ್ಟ್​ ನೀಡುವಾಗ, ‘ಚೆನ್ನಾಗಿ ಹಾಡಿ. ಇನ್ನೂ ನಾಲ್ಕೈದು ಜನರಿಗೆ ನೀವು ಸಹಾಯ ಮಾಡಬೇಕು’ ಎಂದು ಅನುಶ್ರೀ ಕಿವಿಮಾತು ಹೇಳಿದ್ದಾರೆ. ಇನ್ನು, ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ವೇದಿಕೆಯಲ್ಲಿ ಚಂದು ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಇದನ್ನೂ ಓದಿ
Image
Coffee Nadu Chandu: ಈಡೇರಿತು ಕಾಫಿ ನಾಡು ಚಂದು ಆಸೆ; ಶಿವಣ್ಣನ ಭೇಟಿ ಮಾಡಿದ ವೈರಲ್​ ಸ್ಟಾರ್​ಗೆ ಅನುಶ್ರೀ ಸಾಥ್​
Image
‘ಕಾಫಿ ನಾಡು ಚಂದು ಬಿಗ್ ಬಾಸ್‌ಗೆ ಹೋಗಬೇಕು’ ಅಭಿಯಾನ ಶುರು; ಸ್ವತಃ ಬೆಂಬಲ ನೀಡಿದ ವೈರಲ್ ಸಿಂಗರ್!
Image
Coffee Nadu Chandu: ‘ಅನುಶ್ರೀ ಅಕ್ಕ.. ಅನುಶ್ರೀ ಅಕ್ಕ’ ಅಂತ ವಿಶೇಷ ಬೇಡಿಕೆ ಇಟ್ಟ ಕಾಫಿ ನಾಡು ಚಂದು; ಇದನ್ನು ಶಿವಣ್ಣ ಈಡೇರಿಸ್ತಾರಾ?
Image
Coffee Nadu Chandu: ‘ಕಾಫಿ ನಾಡು ಚಂದು ಬಿಗ್​ ಬಾಸ್​ಗೆ ಬರಲಿ’: ಪರಮೇಶ್ವರ್​ ಗುಂಡ್ಕಲ್​ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್​

‘ನಮ್ಮ ಡಿಕೆಡಿ ವೇದಿಕೆಗೆ ಕಾಫಿ ನಾಡು ಚಂದು ಯಾಕೆ ಬಂದಿದ್ದಾರೆ ಎಂಬುದು ಇಡೀ ಕರ್ನಾಟಕಕ್ಕೆ ಹೊತ್ತು. ಆ ರೀತಿಯಲ್ಲಿ ಅವರು ರಿಕ್ವೆಸ್ಟ್​ ಮಾಡಿದ್ದರು’ ಎಂದು ಅನುಶ್ರೀ ಹೇಳಿದ್ದಾರೆ. ಶಿವರಾಜ್​ಕುಮಾರ್ ಅವರನ್ನು ಭೇಟಿ ಆಗಬೇಕು ಎಂಬುದು ಚಂದು ಅವರ ಬಹುದಿನಗಳ ಕನಸಾಗಿತ್ತು. ಅದು ಈ ಶೋ ಮೂಲಕ ಈಡೇರಿದೆ. ಭಾನುವಾರ (ಆಗಸ್ಟ್​ 28) ಸಂಜೆ 7 ಗಂಟೆಗೆ ಈ ಶೋ ಪ್ರಸಾರ ಆಗಲಿದೆ.

ನೆಚ್ಚಿನ ಹೀರೋ ಶಿವಣ್ಣನನ್ನು​ ಭೇಟಿ ಮಾಡಬೇಕು ಎಂದು ಚಂದು ಅವರು ಎಲ್ಲಿಲ್ಲದ ಸರ್ಕಸ್​ ಮಾಡಿದ್ದರು. ಅನೇಕ ಮಕ್ಕಳಿಂದ ಆ ಬಗ್ಗೆ ಸಾಂಗ್​ ಮಾಡಿಸಿ ಪೋಸ್ಟ್​ ಮಾಡಿದ್ದರು. ಒಂದು ರೀಲ್ಸ್​ ಮೂಲಕ ನಿರೂಪಕಿ ಅನುಶ್ರೀ ಬಳಿಯೂ ರಿಕ್ವೆಸ್ಟ್​ ಮಾಡಿಕೊಂಡಿದ್ದರು. ಕಡೆಗೂ ಅವರ ಆಸೆ ಈಡೇರಿದೆ. ಶಿವಣ್ಣನ ಆಶೀರ್ವಾದ ಪಡೆದ ಚಂದುಗೆ ಸಖತ್​ ಖುಷಿ ಆಗಿದೆ. ಈ ವೇಳೆ ಅವರು ಎಮೋಷನಲ್​ ಆಗಿದ್ದಾರೆ. ‘ಇಂಥ ಅಭಿಯಾನಿಯನ್ನು ಪಡೆಯೋಕೆ ಬಹಳ ಪುಣ್ಯ ಮಾಡಿರಬೇಕು’ ಎಂದು ‘ಹ್ಯಾಟ್ರಿಕ್​ ಹೀರೋ’ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:01 pm, Sun, 28 August 22

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​