AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Nadu Chandu: ಕಾಫಿ ನಾಡು ಚಂದುಗೆ ಅನುಶ್ರೀ ಪ್ರೀತಿಯ ಗಿಫ್ಟ್​; ಶಿವಣ್ಣನ ಎದುರು ಎಮೋಷನಲ್​ ಆದ ರೀಲ್ಸ್​ ಹೀರೋ

Coffee Nadu Chandu Video: ‘ಡಿಕೆಡಿ’ ವೇದಿಕೆಗೆ ಬಂದ ಕಾಫಿ ನಾಡು ಚಂದುಗೆ ಎಲ್ಲರೂ ಪ್ರೀತಿಯ ಸ್ವಾಗತ ಕೋರಿದ್ದಾರೆ. ಅವರ ಜೊತೆ ನಿರೂಪಕಿ ಅನುಶ್ರೀ ತುಂಬ ಆತ್ಮೀಯವಾಗಿ ನಡೆದುಕೊಂಡಿದ್ದಾರೆ.

Coffee Nadu Chandu: ಕಾಫಿ ನಾಡು ಚಂದುಗೆ ಅನುಶ್ರೀ ಪ್ರೀತಿಯ ಗಿಫ್ಟ್​; ಶಿವಣ್ಣನ ಎದುರು ಎಮೋಷನಲ್​ ಆದ ರೀಲ್ಸ್​ ಹೀರೋ
ಕಾಫಿ ನಾಡು ಚಂದು, ನಿರೂಪಕಿ ಅನುಶ್ರೀ
TV9 Web
| Edited By: |

Updated on:Aug 28, 2022 | 4:01 PM

Share

ತಮ್ಮದೇ ಶೈಲಿಯಲ್ಲಿ ರೀಲ್ಸ್​ ಮಾಡಿ ಫೇಮಸ್​ ಆದ ಕಾಫಿ ನಾಡು ಚಂದು (Coffee Nadu Chandu) ಈಗ ನಿರೂಪಕಿ ಅನುಶ್ರೀ ಅವರನ್ನು ಭೇಟಿ ಮಾಡಿದ್ದಾರೆ. ಜೀ ಕನ್ನಡದ ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಕಾರ್ಯಕ್ರಮಕ್ಕೆ ಚಂದು ಅತಿಥಿಯಾಗಿ ಬಂದಿದ್ದಾರೆ. ಈ ವೇಳೆ ಅವರನ್ನು ನಟ ಶಿವರಾಜ್​ಕುಮಾರ್​ (Shivarajkumar) ಭೇಟಿ ಮಾಡಿದ್ದಾರೆ. ಈ ಭೇಟಿಯಲ್ಲಿ ಚಂದುಗೆ ಅನುಶ್ರೀ (Anchor Anushree) ಕಡೆಯಿಂದ ವಿಶೇಷ ಗಿಫ್ಟ್​ ಸಿಕ್ಕಿದೆ. ನಿರೂಪಕಿಯಿಂದ ವಾಚ್​ ಪಡೆದಿರುವ ಚಂದು ಫುಲ್​ ಖುಷಿ ಆಗಿದ್ದಾರೆ. ಆ ವಿಡಿಯೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಚಂದುಗೆ ಎಲ್ಲ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ವೇದಿಕೆಯಲ್ಲಿ ಏನು ನಡೆಯಿತು ಎಂಬುದರ ಝಲಕ್​ ತೋರಿಸುವ ಪ್ರೋವೋವನ್ನು ಕೂಡ ಕಾಫಿ ನಾಡು ಚಂದು ಶೇರ್​ ಮಾಡಿಕೊಂಡಿದ್ದಾರೆ.

ಜೀ ಕನ್ನಡಕ್ಕೆ ಬಂದ ಕಾಫಿ ನಾಡು ಚಂದುಗೆ ಎಲ್ಲರೂ ಪ್ರೀತಿಯ ಸ್ವಾಗತ ಕೋರಿದ್ದಾರೆ. ಅವರ ಜೊತೆ ನಿರೂಪಕಿ ಅನುಶ್ರೀ ತುಂಬ ಆತ್ಮೀಯವಾಗಿ ನಡೆದುಕೊಂಡಿದ್ದಾರೆ. ಚಂದುಗೆ ಗಿಫ್ಟ್​ ನೀಡುವಾಗ, ‘ಚೆನ್ನಾಗಿ ಹಾಡಿ. ಇನ್ನೂ ನಾಲ್ಕೈದು ಜನರಿಗೆ ನೀವು ಸಹಾಯ ಮಾಡಬೇಕು’ ಎಂದು ಅನುಶ್ರೀ ಕಿವಿಮಾತು ಹೇಳಿದ್ದಾರೆ. ಇನ್ನು, ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ವೇದಿಕೆಯಲ್ಲಿ ಚಂದು ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಇದನ್ನೂ ಓದಿ
Image
Coffee Nadu Chandu: ಈಡೇರಿತು ಕಾಫಿ ನಾಡು ಚಂದು ಆಸೆ; ಶಿವಣ್ಣನ ಭೇಟಿ ಮಾಡಿದ ವೈರಲ್​ ಸ್ಟಾರ್​ಗೆ ಅನುಶ್ರೀ ಸಾಥ್​
Image
‘ಕಾಫಿ ನಾಡು ಚಂದು ಬಿಗ್ ಬಾಸ್‌ಗೆ ಹೋಗಬೇಕು’ ಅಭಿಯಾನ ಶುರು; ಸ್ವತಃ ಬೆಂಬಲ ನೀಡಿದ ವೈರಲ್ ಸಿಂಗರ್!
Image
Coffee Nadu Chandu: ‘ಅನುಶ್ರೀ ಅಕ್ಕ.. ಅನುಶ್ರೀ ಅಕ್ಕ’ ಅಂತ ವಿಶೇಷ ಬೇಡಿಕೆ ಇಟ್ಟ ಕಾಫಿ ನಾಡು ಚಂದು; ಇದನ್ನು ಶಿವಣ್ಣ ಈಡೇರಿಸ್ತಾರಾ?
Image
Coffee Nadu Chandu: ‘ಕಾಫಿ ನಾಡು ಚಂದು ಬಿಗ್​ ಬಾಸ್​ಗೆ ಬರಲಿ’: ಪರಮೇಶ್ವರ್​ ಗುಂಡ್ಕಲ್​ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್​

‘ನಮ್ಮ ಡಿಕೆಡಿ ವೇದಿಕೆಗೆ ಕಾಫಿ ನಾಡು ಚಂದು ಯಾಕೆ ಬಂದಿದ್ದಾರೆ ಎಂಬುದು ಇಡೀ ಕರ್ನಾಟಕಕ್ಕೆ ಹೊತ್ತು. ಆ ರೀತಿಯಲ್ಲಿ ಅವರು ರಿಕ್ವೆಸ್ಟ್​ ಮಾಡಿದ್ದರು’ ಎಂದು ಅನುಶ್ರೀ ಹೇಳಿದ್ದಾರೆ. ಶಿವರಾಜ್​ಕುಮಾರ್ ಅವರನ್ನು ಭೇಟಿ ಆಗಬೇಕು ಎಂಬುದು ಚಂದು ಅವರ ಬಹುದಿನಗಳ ಕನಸಾಗಿತ್ತು. ಅದು ಈ ಶೋ ಮೂಲಕ ಈಡೇರಿದೆ. ಭಾನುವಾರ (ಆಗಸ್ಟ್​ 28) ಸಂಜೆ 7 ಗಂಟೆಗೆ ಈ ಶೋ ಪ್ರಸಾರ ಆಗಲಿದೆ.

ನೆಚ್ಚಿನ ಹೀರೋ ಶಿವಣ್ಣನನ್ನು​ ಭೇಟಿ ಮಾಡಬೇಕು ಎಂದು ಚಂದು ಅವರು ಎಲ್ಲಿಲ್ಲದ ಸರ್ಕಸ್​ ಮಾಡಿದ್ದರು. ಅನೇಕ ಮಕ್ಕಳಿಂದ ಆ ಬಗ್ಗೆ ಸಾಂಗ್​ ಮಾಡಿಸಿ ಪೋಸ್ಟ್​ ಮಾಡಿದ್ದರು. ಒಂದು ರೀಲ್ಸ್​ ಮೂಲಕ ನಿರೂಪಕಿ ಅನುಶ್ರೀ ಬಳಿಯೂ ರಿಕ್ವೆಸ್ಟ್​ ಮಾಡಿಕೊಂಡಿದ್ದರು. ಕಡೆಗೂ ಅವರ ಆಸೆ ಈಡೇರಿದೆ. ಶಿವಣ್ಣನ ಆಶೀರ್ವಾದ ಪಡೆದ ಚಂದುಗೆ ಸಖತ್​ ಖುಷಿ ಆಗಿದೆ. ಈ ವೇಳೆ ಅವರು ಎಮೋಷನಲ್​ ಆಗಿದ್ದಾರೆ. ‘ಇಂಥ ಅಭಿಯಾನಿಯನ್ನು ಪಡೆಯೋಕೆ ಬಹಳ ಪುಣ್ಯ ಮಾಡಿರಬೇಕು’ ಎಂದು ‘ಹ್ಯಾಟ್ರಿಕ್​ ಹೀರೋ’ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:01 pm, Sun, 28 August 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?