AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Nadu Chandu: ಈಡೇರಿತು ಕಾಫಿ ನಾಡು ಚಂದು ಆಸೆ; ಶಿವಣ್ಣನ ಭೇಟಿ ಮಾಡಿದ ವೈರಲ್​ ಸ್ಟಾರ್​ಗೆ ಅನುಶ್ರೀ ಸಾಥ್​

Coffee Nadu Chandu | Dance Karnataka Dance: ಆಗಸ್ಟ್​ 18ರಂದು ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಶೂಟಿಂಗ್​ ಆಗಿದೆ. ಈ ವೇದಿಕೆಯಲ್ಲಿ ಶಿವರಾಜ್​ಕುಮಾರ್​ ಮುಂದೆ ಹಾಡು ಹೇಳಲು ಕಾಫಿ ನಾಡು ಚಂದುಗೆ ಅವಕಾಶ ಸಿಕ್ಕಿದೆ.

Coffee Nadu Chandu: ಈಡೇರಿತು ಕಾಫಿ ನಾಡು ಚಂದು ಆಸೆ; ಶಿವಣ್ಣನ ಭೇಟಿ ಮಾಡಿದ ವೈರಲ್​ ಸ್ಟಾರ್​ಗೆ ಅನುಶ್ರೀ ಸಾಥ್​
ಕಾಫಿ ನಾಡು ಚಂದು, ಅನುಶ್ರೀ
TV9 Web
| Edited By: |

Updated on: Aug 19, 2022 | 11:28 AM

Share

ರೀಲ್ಸ್​ ದುನಿಯಾದಲ್ಲಿ ಕಾಫಿ ನಾಡು ಚಂದು (Coffee Nadu Chandu) ಹೆಸರು ಕೇಳದವರೇ ಇಲ್ಲ ಎನ್ನಬಹುದು. ಎಲ್ಲೆಲ್ಲೂ ಚಂದು ವಿಡಿಯೋಗಳು ರಾರಾಜಿಸುತ್ತಿವೆ. ವೃತ್ತಿಯಲ್ಲಿ ಆಟೋ ಡ್ರೈವರ್​ ಆಗಿರುವ ಅವರು ತಮ್ಮದೇ ಶೈಲಿಯಲ್ಲಿ ಬರ್ತ್​ಡೇ ವಿಶ್​ ಮಾಡುವ ಮೂಲಕ ಫೇಮಸ್​ ಆಗಿದ್ದಾರೆ. ‘ನಾನು ಪುನೀತಣ್ಣ, ಶಿವಣ್ಣ ಅಭಿಮಾನಿ’ ಎಂದು ಹೇಳಿಕೊಳ್ಳುವ ಅವರಿಗೆ ಲಕ್ಷಾಂತರ ಮಂದಿ ಅಭಿಮಾನಿಗಳು ಇದ್ದಾರೆ ಎಂಬುದು ವಿಶೇಷ. ಒಮ್ಮೆಯಾದರೂ ಶಿವರಾಜ್​ಕುಮಾರ್ (Shivarajkumar)​ ಅವರನ್ನು ಭೇಟಿ ಆಗಬೇಕು ಎಂಬುದು ಚಂದು ಮನದ ಆಸೆ ಆಗಿತ್ತು. ಅದನ್ನು ‘ಜೀ ಕನ್ನಡ’ ವಾಹಿನಿ ಈಡೇರಿಸಿದೆ. ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ (Dance Karnataka Dance) ಶೋಗೆ ಚಂದು ಅವರನ್ನು ಕರೆಸಲಾಗಿದೆ. ಈ ವೇಳೆ ಶಿವಣ್ಣನ ಎದುರು ಅವರು ತಮ್ಮದೇ ಶೈಲಿಯಲ್ಲಿ ಹಾಡು ಹೇಳಿ ರಂಜಿಸಿದ್ದಾರೆ. ಈ ಎಪಿಸೋಡ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಕೆಲವೇ ದಿನಗಳ ಹಿಂದೆ ನಿರೂಪಕಿ ಅನುಶ್ರೀ ಅವರಿಗೆ ಚಂದು ಒಂದು ಬೇಡಿಕೆ ಇಟ್ಟಿದ್ದರು. ‘ಜೀ ಕನ್ನಡದಲ್ಲಿ ಆ್ಯಂಕರಿಂಗ್​ ಮಾಡುವ ಅನುಶ್ರೀ ಅಕ್ಕ.. ನನಗೆ ಶಿವಣ್ಣ ಭೇಟಿ ಮಾಡಿಸಿ ಅನುಶ್ರೀ ಅಕ್ಕ.. ಓಹೋ ಅನುಶ್ರೀ ಅಕ್ಕ.. ಆಹಾ ಅನುಶ್ರೀ ಅಕ್ಕ.. ನಾನು ಶಿವಣ್ಣ ಅವರನ್ನು ನೋಡಲೇ ಬೇಕು ಅಕ್ಕ..’ ಎಂದು ಚಂದು ರೀಲ್ಸ್​ ಮಾಡಿದ್ದರು. ಈಗ ಅಂತೂ ಅವರ ಆಸೆ ಈಡೇರಿದೆ.

ಆಗಸ್ಟ್​ 18ರಂದು ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಶೂಟಿಂಗ್​ ಆಗಿದೆ. ಈ ವೇದಿಕೆಯಲ್ಲಿ ಶಿವರಾಜ್​ಕುಮಾರ್​ ಮುಂದೆ ಹಾಡು ಹೇಳಲು ಚಂದುಗೆ ಅವಕಾಶ ಸಿಕ್ಕಿದೆ. ಎಲ್ಲರನ್ನೂ ಅವರು ಭರ್ಜರಿಯಾಗಿ ಮನರಂಜಿಸಿದ್ದಾರೆ. ಚಂದು ಹೇಳಿದ ಹಾಡು ಕೇಳಿ ಶಿವಣ್ಣ ಕೂಡ ಚಪ್ಪಾಳೆ ತಟ್ಟಿದ್ದಾರೆ. ಶೂಟಿಂಗ್​ ವೇಳೆ ಮೊಬೈಲ್​ನಲ್ಲಿ ಸೆರೆಯಾದ ಈ ವೀಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಲೀಕ್​ ಆಗಿದೆ.

ಇನ್ನು, ಅನುಶ್ರೀ ಅವರ ಜೊತೆ ಚಂದು ಹೊಸದಾಗಿ ರೀಲ್ಸ್​ ಮಾಡಿದ್ದಾರೆ. ಅದು ಕೆಲವೇ ಗಂಟೆಗಳಲ್ಲಿ ಐದೂವರೆ ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಲಕ್ಷಾಂತರ ಜನರು ಲೈಕ್​ ಮಾಡಿದ್ದು, ಸಾವಿರಾರು ಕಮೆಂಟ್​ಗಳು ಬಂದಿವೆ. ಅನುಶ್ರೀ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಈ ರೀಲ್ಸ್​ ಶೇರ್​ ಮಾಡಿಕೊಂಡಿದ್ದಾರೆ. ಈ ಹಿಂದೆ ಅವರು ಚಂದು ರೀತಿಯಲ್ಲಿ ರೀಲ್ಸ್​ ಮಾಡಿದ್ದರು. ಒಟ್ಟಿನಲ್ಲಿ ಚಂದುಗೆ ಇದ್ದ ಜನಪ್ರಿಯತೆ ಈಗ ಇನ್ನಷ್ಟು ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?