AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Nadu Chandu: ಈಡೇರಿತು ಕಾಫಿ ನಾಡು ಚಂದು ಆಸೆ; ಶಿವಣ್ಣನ ಭೇಟಿ ಮಾಡಿದ ವೈರಲ್​ ಸ್ಟಾರ್​ಗೆ ಅನುಶ್ರೀ ಸಾಥ್​

Coffee Nadu Chandu | Dance Karnataka Dance: ಆಗಸ್ಟ್​ 18ರಂದು ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಶೂಟಿಂಗ್​ ಆಗಿದೆ. ಈ ವೇದಿಕೆಯಲ್ಲಿ ಶಿವರಾಜ್​ಕುಮಾರ್​ ಮುಂದೆ ಹಾಡು ಹೇಳಲು ಕಾಫಿ ನಾಡು ಚಂದುಗೆ ಅವಕಾಶ ಸಿಕ್ಕಿದೆ.

Coffee Nadu Chandu: ಈಡೇರಿತು ಕಾಫಿ ನಾಡು ಚಂದು ಆಸೆ; ಶಿವಣ್ಣನ ಭೇಟಿ ಮಾಡಿದ ವೈರಲ್​ ಸ್ಟಾರ್​ಗೆ ಅನುಶ್ರೀ ಸಾಥ್​
ಕಾಫಿ ನಾಡು ಚಂದು, ಅನುಶ್ರೀ
TV9 Web
| Edited By: |

Updated on: Aug 19, 2022 | 11:28 AM

Share

ರೀಲ್ಸ್​ ದುನಿಯಾದಲ್ಲಿ ಕಾಫಿ ನಾಡು ಚಂದು (Coffee Nadu Chandu) ಹೆಸರು ಕೇಳದವರೇ ಇಲ್ಲ ಎನ್ನಬಹುದು. ಎಲ್ಲೆಲ್ಲೂ ಚಂದು ವಿಡಿಯೋಗಳು ರಾರಾಜಿಸುತ್ತಿವೆ. ವೃತ್ತಿಯಲ್ಲಿ ಆಟೋ ಡ್ರೈವರ್​ ಆಗಿರುವ ಅವರು ತಮ್ಮದೇ ಶೈಲಿಯಲ್ಲಿ ಬರ್ತ್​ಡೇ ವಿಶ್​ ಮಾಡುವ ಮೂಲಕ ಫೇಮಸ್​ ಆಗಿದ್ದಾರೆ. ‘ನಾನು ಪುನೀತಣ್ಣ, ಶಿವಣ್ಣ ಅಭಿಮಾನಿ’ ಎಂದು ಹೇಳಿಕೊಳ್ಳುವ ಅವರಿಗೆ ಲಕ್ಷಾಂತರ ಮಂದಿ ಅಭಿಮಾನಿಗಳು ಇದ್ದಾರೆ ಎಂಬುದು ವಿಶೇಷ. ಒಮ್ಮೆಯಾದರೂ ಶಿವರಾಜ್​ಕುಮಾರ್ (Shivarajkumar)​ ಅವರನ್ನು ಭೇಟಿ ಆಗಬೇಕು ಎಂಬುದು ಚಂದು ಮನದ ಆಸೆ ಆಗಿತ್ತು. ಅದನ್ನು ‘ಜೀ ಕನ್ನಡ’ ವಾಹಿನಿ ಈಡೇರಿಸಿದೆ. ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ (Dance Karnataka Dance) ಶೋಗೆ ಚಂದು ಅವರನ್ನು ಕರೆಸಲಾಗಿದೆ. ಈ ವೇಳೆ ಶಿವಣ್ಣನ ಎದುರು ಅವರು ತಮ್ಮದೇ ಶೈಲಿಯಲ್ಲಿ ಹಾಡು ಹೇಳಿ ರಂಜಿಸಿದ್ದಾರೆ. ಈ ಎಪಿಸೋಡ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಕೆಲವೇ ದಿನಗಳ ಹಿಂದೆ ನಿರೂಪಕಿ ಅನುಶ್ರೀ ಅವರಿಗೆ ಚಂದು ಒಂದು ಬೇಡಿಕೆ ಇಟ್ಟಿದ್ದರು. ‘ಜೀ ಕನ್ನಡದಲ್ಲಿ ಆ್ಯಂಕರಿಂಗ್​ ಮಾಡುವ ಅನುಶ್ರೀ ಅಕ್ಕ.. ನನಗೆ ಶಿವಣ್ಣ ಭೇಟಿ ಮಾಡಿಸಿ ಅನುಶ್ರೀ ಅಕ್ಕ.. ಓಹೋ ಅನುಶ್ರೀ ಅಕ್ಕ.. ಆಹಾ ಅನುಶ್ರೀ ಅಕ್ಕ.. ನಾನು ಶಿವಣ್ಣ ಅವರನ್ನು ನೋಡಲೇ ಬೇಕು ಅಕ್ಕ..’ ಎಂದು ಚಂದು ರೀಲ್ಸ್​ ಮಾಡಿದ್ದರು. ಈಗ ಅಂತೂ ಅವರ ಆಸೆ ಈಡೇರಿದೆ.

ಆಗಸ್ಟ್​ 18ರಂದು ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಶೂಟಿಂಗ್​ ಆಗಿದೆ. ಈ ವೇದಿಕೆಯಲ್ಲಿ ಶಿವರಾಜ್​ಕುಮಾರ್​ ಮುಂದೆ ಹಾಡು ಹೇಳಲು ಚಂದುಗೆ ಅವಕಾಶ ಸಿಕ್ಕಿದೆ. ಎಲ್ಲರನ್ನೂ ಅವರು ಭರ್ಜರಿಯಾಗಿ ಮನರಂಜಿಸಿದ್ದಾರೆ. ಚಂದು ಹೇಳಿದ ಹಾಡು ಕೇಳಿ ಶಿವಣ್ಣ ಕೂಡ ಚಪ್ಪಾಳೆ ತಟ್ಟಿದ್ದಾರೆ. ಶೂಟಿಂಗ್​ ವೇಳೆ ಮೊಬೈಲ್​ನಲ್ಲಿ ಸೆರೆಯಾದ ಈ ವೀಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಲೀಕ್​ ಆಗಿದೆ.

ಇನ್ನು, ಅನುಶ್ರೀ ಅವರ ಜೊತೆ ಚಂದು ಹೊಸದಾಗಿ ರೀಲ್ಸ್​ ಮಾಡಿದ್ದಾರೆ. ಅದು ಕೆಲವೇ ಗಂಟೆಗಳಲ್ಲಿ ಐದೂವರೆ ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಲಕ್ಷಾಂತರ ಜನರು ಲೈಕ್​ ಮಾಡಿದ್ದು, ಸಾವಿರಾರು ಕಮೆಂಟ್​ಗಳು ಬಂದಿವೆ. ಅನುಶ್ರೀ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಈ ರೀಲ್ಸ್​ ಶೇರ್​ ಮಾಡಿಕೊಂಡಿದ್ದಾರೆ. ಈ ಹಿಂದೆ ಅವರು ಚಂದು ರೀತಿಯಲ್ಲಿ ರೀಲ್ಸ್​ ಮಾಡಿದ್ದರು. ಒಟ್ಟಿನಲ್ಲಿ ಚಂದುಗೆ ಇದ್ದ ಜನಪ್ರಿಯತೆ ಈಗ ಇನ್ನಷ್ಟು ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್