Coffee Nadu Chandu: ಈಡೇರಿತು ಕಾಫಿ ನಾಡು ಚಂದು ಆಸೆ; ಶಿವಣ್ಣನ ಭೇಟಿ ಮಾಡಿದ ವೈರಲ್​ ಸ್ಟಾರ್​ಗೆ ಅನುಶ್ರೀ ಸಾಥ್​

Coffee Nadu Chandu | Dance Karnataka Dance: ಆಗಸ್ಟ್​ 18ರಂದು ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಶೂಟಿಂಗ್​ ಆಗಿದೆ. ಈ ವೇದಿಕೆಯಲ್ಲಿ ಶಿವರಾಜ್​ಕುಮಾರ್​ ಮುಂದೆ ಹಾಡು ಹೇಳಲು ಕಾಫಿ ನಾಡು ಚಂದುಗೆ ಅವಕಾಶ ಸಿಕ್ಕಿದೆ.

Coffee Nadu Chandu: ಈಡೇರಿತು ಕಾಫಿ ನಾಡು ಚಂದು ಆಸೆ; ಶಿವಣ್ಣನ ಭೇಟಿ ಮಾಡಿದ ವೈರಲ್​ ಸ್ಟಾರ್​ಗೆ ಅನುಶ್ರೀ ಸಾಥ್​
ಕಾಫಿ ನಾಡು ಚಂದು, ಅನುಶ್ರೀ
Follow us
| Updated By: ಮದನ್​ ಕುಮಾರ್​

Updated on: Aug 19, 2022 | 11:28 AM

ರೀಲ್ಸ್​ ದುನಿಯಾದಲ್ಲಿ ಕಾಫಿ ನಾಡು ಚಂದು (Coffee Nadu Chandu) ಹೆಸರು ಕೇಳದವರೇ ಇಲ್ಲ ಎನ್ನಬಹುದು. ಎಲ್ಲೆಲ್ಲೂ ಚಂದು ವಿಡಿಯೋಗಳು ರಾರಾಜಿಸುತ್ತಿವೆ. ವೃತ್ತಿಯಲ್ಲಿ ಆಟೋ ಡ್ರೈವರ್​ ಆಗಿರುವ ಅವರು ತಮ್ಮದೇ ಶೈಲಿಯಲ್ಲಿ ಬರ್ತ್​ಡೇ ವಿಶ್​ ಮಾಡುವ ಮೂಲಕ ಫೇಮಸ್​ ಆಗಿದ್ದಾರೆ. ‘ನಾನು ಪುನೀತಣ್ಣ, ಶಿವಣ್ಣ ಅಭಿಮಾನಿ’ ಎಂದು ಹೇಳಿಕೊಳ್ಳುವ ಅವರಿಗೆ ಲಕ್ಷಾಂತರ ಮಂದಿ ಅಭಿಮಾನಿಗಳು ಇದ್ದಾರೆ ಎಂಬುದು ವಿಶೇಷ. ಒಮ್ಮೆಯಾದರೂ ಶಿವರಾಜ್​ಕುಮಾರ್ (Shivarajkumar)​ ಅವರನ್ನು ಭೇಟಿ ಆಗಬೇಕು ಎಂಬುದು ಚಂದು ಮನದ ಆಸೆ ಆಗಿತ್ತು. ಅದನ್ನು ‘ಜೀ ಕನ್ನಡ’ ವಾಹಿನಿ ಈಡೇರಿಸಿದೆ. ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ (Dance Karnataka Dance) ಶೋಗೆ ಚಂದು ಅವರನ್ನು ಕರೆಸಲಾಗಿದೆ. ಈ ವೇಳೆ ಶಿವಣ್ಣನ ಎದುರು ಅವರು ತಮ್ಮದೇ ಶೈಲಿಯಲ್ಲಿ ಹಾಡು ಹೇಳಿ ರಂಜಿಸಿದ್ದಾರೆ. ಈ ಎಪಿಸೋಡ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಕೆಲವೇ ದಿನಗಳ ಹಿಂದೆ ನಿರೂಪಕಿ ಅನುಶ್ರೀ ಅವರಿಗೆ ಚಂದು ಒಂದು ಬೇಡಿಕೆ ಇಟ್ಟಿದ್ದರು. ‘ಜೀ ಕನ್ನಡದಲ್ಲಿ ಆ್ಯಂಕರಿಂಗ್​ ಮಾಡುವ ಅನುಶ್ರೀ ಅಕ್ಕ.. ನನಗೆ ಶಿವಣ್ಣ ಭೇಟಿ ಮಾಡಿಸಿ ಅನುಶ್ರೀ ಅಕ್ಕ.. ಓಹೋ ಅನುಶ್ರೀ ಅಕ್ಕ.. ಆಹಾ ಅನುಶ್ರೀ ಅಕ್ಕ.. ನಾನು ಶಿವಣ್ಣ ಅವರನ್ನು ನೋಡಲೇ ಬೇಕು ಅಕ್ಕ..’ ಎಂದು ಚಂದು ರೀಲ್ಸ್​ ಮಾಡಿದ್ದರು. ಈಗ ಅಂತೂ ಅವರ ಆಸೆ ಈಡೇರಿದೆ.

ಆಗಸ್ಟ್​ 18ರಂದು ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಶೂಟಿಂಗ್​ ಆಗಿದೆ. ಈ ವೇದಿಕೆಯಲ್ಲಿ ಶಿವರಾಜ್​ಕುಮಾರ್​ ಮುಂದೆ ಹಾಡು ಹೇಳಲು ಚಂದುಗೆ ಅವಕಾಶ ಸಿಕ್ಕಿದೆ. ಎಲ್ಲರನ್ನೂ ಅವರು ಭರ್ಜರಿಯಾಗಿ ಮನರಂಜಿಸಿದ್ದಾರೆ. ಚಂದು ಹೇಳಿದ ಹಾಡು ಕೇಳಿ ಶಿವಣ್ಣ ಕೂಡ ಚಪ್ಪಾಳೆ ತಟ್ಟಿದ್ದಾರೆ. ಶೂಟಿಂಗ್​ ವೇಳೆ ಮೊಬೈಲ್​ನಲ್ಲಿ ಸೆರೆಯಾದ ಈ ವೀಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಲೀಕ್​ ಆಗಿದೆ.

ಇನ್ನು, ಅನುಶ್ರೀ ಅವರ ಜೊತೆ ಚಂದು ಹೊಸದಾಗಿ ರೀಲ್ಸ್​ ಮಾಡಿದ್ದಾರೆ. ಅದು ಕೆಲವೇ ಗಂಟೆಗಳಲ್ಲಿ ಐದೂವರೆ ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಲಕ್ಷಾಂತರ ಜನರು ಲೈಕ್​ ಮಾಡಿದ್ದು, ಸಾವಿರಾರು ಕಮೆಂಟ್​ಗಳು ಬಂದಿವೆ. ಅನುಶ್ರೀ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಈ ರೀಲ್ಸ್​ ಶೇರ್​ ಮಾಡಿಕೊಂಡಿದ್ದಾರೆ. ಈ ಹಿಂದೆ ಅವರು ಚಂದು ರೀತಿಯಲ್ಲಿ ರೀಲ್ಸ್​ ಮಾಡಿದ್ದರು. ಒಟ್ಟಿನಲ್ಲಿ ಚಂದುಗೆ ಇದ್ದ ಜನಪ್ರಿಯತೆ ಈಗ ಇನ್ನಷ್ಟು ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ