AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Nadu Chandu: ‘ಅನುಶ್ರೀ ಅಕ್ಕ.. ಅನುಶ್ರೀ ಅಕ್ಕ’ ಅಂತ ವಿಶೇಷ ಬೇಡಿಕೆ ಇಟ್ಟ ಕಾಫಿ ನಾಡು ಚಂದು; ಇದನ್ನು ಶಿವಣ್ಣ ಈಡೇರಿಸ್ತಾರಾ?

Coffee Nadu Chandu Viral Video: ಕಾಫಿ ನಾಡು ಚಂದು ಮನವಿ ಮಾಡಿಕೊಂಡಿರುವ ರೀಲ್ಸ್​ ವೈರಲ್​ ಆಗಿದೆ. ಅವರಿಗೆ ಸಹಾಯ ಮಾಡಿ ಎಂದು ಅನೇಕರು ನಿರೂಪಕಿ ಅನುಶ್ರೀಗೆ ಶಿಫಾರಸು ಮಾಡಿದ್ದಾರೆ.

Coffee Nadu Chandu: ‘ಅನುಶ್ರೀ ಅಕ್ಕ.. ಅನುಶ್ರೀ ಅಕ್ಕ’ ಅಂತ ವಿಶೇಷ ಬೇಡಿಕೆ ಇಟ್ಟ ಕಾಫಿ ನಾಡು ಚಂದು; ಇದನ್ನು ಶಿವಣ್ಣ ಈಡೇರಿಸ್ತಾರಾ?
ಕಾಫಿ ನಾಡು ಚಂದು, ಶಿವರಾಜ್​ಕುಮಾರ್​, ನಿರೂಪಕಿ ಅನುಶ್ರೀ
TV9 Web
| Edited By: |

Updated on:Aug 05, 2022 | 8:22 AM

Share

ಸೋಶಿಯಲ್​ ಮೀಡಿಯಾದಲ್ಲಿ ಕಾಫಿ ನಾಡು ಚಂದು (Coffee Nadu Chandu) ಸಿಕ್ಕಾಪಟ್ಟೆ ಫೇಮಸ್​ ಆಗಿದ್ದಾರೆ. ‘ನಾನು ಶಿವಣ್ಣ, ಪುನೀತಣ್ಣ ಅಭಿಮಾನಿ..’ ಎನ್ನುತ್ತಲೇ ಅವರು ಲಕ್ಷಾಂತರ ಜನರಿಗೆ ಇಷ್ಟ ಆಗಿದ್ದಾರೆ. ಅವರು ಹೇಳುವ ಇನ್​ಸ್ಟಂಟ್​ ಹಾಡುಗಳು ಸಖತ್​ ವೈರಲ್​ ಆಗಿವೆ. ಚಂದು ಅವರು ಹುಟ್ಟುಹಬ್ಬದ ಶುಭಾಶಯ ಕೋರುವ ಶೈಲಿ ಭರ್ಜರಿ ಟ್ರೆಂಡ್​​ ಆಗಿದೆ. ಸೆಲೆಬ್ರಿಟಿಗಳ ವಲಯದಲ್ಲೂ ಅವರ ಹೆಸರು ಕೇಳಿಬರುತ್ತಿದೆ. 3 ಲಕ್ಷಕ್ಕೂ ಅಧಿಕ ಜನರು ಚಂದು ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುತ್ತಿದ್ದಾರೆ. ಈಗ ಅವರು ನಿರೂಪಕಿ ಅನುಶ್ರೀ (Anchor Anushree) ಅವರಿಗೆ ಒಂದು ವಿಶೇಷ ಮನವಿ ಸಲ್ಲಿಸಿದ್ದಾರೆ. ಅದು ಕೂಡ ತಮ್ಮದೇ ಶೈಲಿಯಲ್ಲಿ ಅನ್ನೋದು ವಿಶೇಷ. ‘ದಯವಿಟ್ಟು ಶಿವಣ್ಣ ಅವರನ್ನು ಭೇಟಿ ಮಾಡಿಸಿ..’ ಎಂದು ಚಂದು ಮನವಿ ಮಾಡಿಕೊಂಡಿದ್ದಾರೆ. ಶಿವರಾಜ್​ಕುಮಾರ್ (Shivarajkumar)​ ಅವರನ್ನು ಭೇಟಿ ಆಗಬೇಕು ಎಂಬುದು ಅವರ ಬಹುದಿನಗಳ ಕನಸು.

‘ಜೀ ಕನ್ನಡದಲ್ಲಿ ಆ್ಯಂಕರಿಂಗ್​ ಮಾಡುವ ಅನುಶ್ರೀ ಅಕ್ಕ.. ನನಗೆ ಶಿವಣ್ಣ ಭೇಟಿ ಮಾಡಿಸಿ ಅನುಶ್ರೀ ಅಕ್ಕ.. ಓಹೋ ಅನುಶ್ರೀ ಅಕ್ಕ.. ಆಹಾ ಅನುಶ್ರೀ ಅಕ್ಕ.. ನಾನು ಶಿವಣ್ಣ ಅವರನ್ನು ನೋಡಲೇ ಬೇಕು ಅಕ್ಕ..’ ಎಂದು ತಮ್ಮದೇ ಶೈಲಿಯಲ್ಲಿ ಕಾಫಿ ನಾಡು ಚಂದು ಅವರು ಮನವಿ ಮಾಡಿಕೊಂಡಿದ್ದಾರೆ. ಈ ವಿಡಿಯೋ ಮೂರೂವರೆ ಲಕ್ಷಕ್ಕೂ ಅಧಿಕ ವೀವ್ಸ್​ ಪಡೆದುಕೊಂಡಿದೆ. ಸಾವಿರಾರು ಜನರು ಕಮೆಂಟ್​ ಮಾಡಿದ್ದಾರೆ. ಚಂದುಗೆ ಸಹಾಯ ಮಾಡಿ ಎಂದು ಅನೇಕರು ಅನುಶ್ರೀಗೆ ಶಿಫಾರಸು ಮಾಡಿದ್ದಾರೆ.

ಇದನ್ನೂ ಓದಿ
Image
ಕಾಫಿನಾಡು ಚಂದು ತನ್ನದೇ ಶೈಲಿಯಲ್ಲಿ ಸಿದ್ದರಾಯ್ಯನವರಿಗೆ ಹುಟ್ಟುಹಬ್ಬದ ಶುಭಾಷಯ ಹೇಳಿದರು!
Image
‘5 ಸಾವಿರ ಕರೆ ಬರ್ತಿದೆ, ದಿನಕ್ಕೊಂದು ನಂಬರ್ ಬದಲಿಸುತ್ತಿದ್ದೇನೆ’; ಕಾಫಿ ನಾಡು ಚಂದು
Image
ಕಾಫಿ ನಾಡು ಚಂದು ಹೇಳಿದ ಬರ್ತ್​ಡೇ ವಿಶ್​​ಗೆ ಅಮೃತಾ ಅಯ್ಯಂಗಾರ್ ರಿಯಾಕ್ಷನ್ ಹೇಗಿತ್ತು? ಇಲ್ಲಿದೆ ವಿಡಿಯೋ
Image
Coffee Nadu Chandu: ‘ಕಾಫಿ ನಾಡು ಚಂದು ಬಿಗ್​ ಬಾಸ್​ಗೆ ಬರಲಿ’: ಪರಮೇಶ್ವರ್​ ಗುಂಡ್ಕಲ್​ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್​

ಇಷ್ಟೇ ಅಲ್ಲ, ಕೆಲವು ಶಾಲೆಯ ಮಕ್ಕಳ ಜೊತೆಯೂ ಚಂದು ಅವರು ವಿಡಿಯೋ ಮಾಡಿದ್ದಾರೆ. ‘ನಿಮ್ಮನ್ನು ನೋಡಬೇಕು ಶಿವಣ್ಣ. ಯಾವಾಗ ಸಿಕ್ತೀರಾ?’ ಎಂದು ಮಕ್ಕಳ ಜೊತೆ ಹಾಡು ಹೇಳುವ ಮೂಲಕ ಚಂದು ಅವರು ಶಿವರಾಜ್​ಕುಮಾರ್ ಅವರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ದಿನದಿಂದ ದಿನಕ್ಕೆ ಅವರ ಫಾಲೋವರ್ಸ್​ ಸಂಖ್ಯೆ ಹೆಚ್ಚುತ್ತಲೇ ಇದೆ.

ಚಿಕ್ಕಮಗಳೂರು ಮೂಲದ ಚಂದು ಅವರು ವೃತ್ತಿಯಲ್ಲಿ ಆಟೋ ಡ್ರೈವರ್​ ಆಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅನೇಕ ವಿಡಿಯೋಗಳನ್ನು ಹಂಚಿಕೊಂಡು ಅವರು ಫೇಮಸ್​ ಆಗಿದ್ದಾರೆ. ತಮ್ಮದೇ ಆದ ಶೈಲಿಯಲ್ಲಿ ಹಲವರಿಗೆ ಬರ್ತ್​ಡೇ ವಿಶ್​ ಮಾಡುವ ಮೂಲಕ ಅವರು ನೋಡುಗರಲ್ಲಿ ನಗು ಉಕ್ಕಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರ ವಿಡಿಯೋಗಳು ವೈರಲ್​ ಆಗಿವೆ. ಅವರಿಗೆ ಬಿಗ್​ ಬಾಸ್​ ಶೋನಲ್ಲಿ ಅವಕಾಶ ಸಿಗಲಿ ಎಂದು ಕೂಡ ಅನೇಕರು ಆಶಿಸಿದ್ದಾರೆ.

Published On - 8:22 am, Fri, 5 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್