AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನುಬಂಧ’ ಅವಾರ್ಡ್ಸ್​ಗೆ ದಿನಗಣನೆ; ಈ ಬಾರಿ ಏನೆಲ್ಲ ವಿಶೇಷತೆ ಇರಲಿದೆ?

ಧಾರಾವಾಹಿಗಳಲ್ಲಿ ನಟಿಸಿದ ಎಲ್ಲರಿಗೂ ಒಂದು ಕುಟುಂಬದ ಭಾವನೆ ಮೂಡಿದೆ. ಈ ಭಾವನೆಯನ್ನು ಮತ್ತಷ್ಟು ಗಟ್ಟಿ ಮಾಡುವ ಉದ್ದೇಶದಿಂದ ಆರಂಭವಾಗಿದ್ದೇ ‘ಅನುಬಂಧ ಅವಾರ್ಡ್ಸ್’ ಕಾರ್ಯಕ್ರಮ. ಇದರ ಆರಂಭಕ್ಕೆ ಈಗ ದಿನಗಣನೆ ಆರಂಭ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಅನುಬಂಧ’ ಅವಾರ್ಡ್ಸ್​ಗೆ ದಿನಗಣನೆ; ಈ ಬಾರಿ ಏನೆಲ್ಲ ವಿಶೇಷತೆ ಇರಲಿದೆ?
ಅನುಬಂಧ
ರಾಜೇಶ್ ದುಗ್ಗುಮನೆ
|

Updated on: Sep 12, 2024 | 10:42 AM

Share

ಕಲರ್ಸ್ ಕನ್ನಡದ ಅವಾರ್ಡ್ ಕಾರ್ಯಕ್ರಮ ‘ಅನುಬಂಧ’ಕ್ಕೆ ದಿನಗಣನೆ ಶುರುವಾಗಿದೆ. ಈ ಕಾರ್ಯಕ್ರಮ ಸೆಪ್ಟೆಂಬರ್ 20, 21 ಹಾಗೂ 22ರಂದು ಕಲರ್ಸ್ ಕನ್ನಡದಲ್ಲಿ ಸಂಜೆ 7 ಗಂಟೆಗೆ ಪ್ರಸಾರ ಕಾಣಲಿದೆ. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಪ್ರೋಮೋಗಳನ್ನು ಹಂಚಿಕೊಳ್ಳುತ್ತಿದೆ. ಅನೇಕ ಗಣ್ಯರು ಈ ಬಾರಿ ಅವಾರ್ಡ್​ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ವಿವಿಧ ಕಲಾವಿದರಿಗೆ ಈ ಪ್ರಶಸ್ತಿ ಸಿಗುತ್ತಿದೆ.

ಸಿನಿಮಾ ಜಗತ್ತು ಸಾಕಷ್ಟು ವಿಸ್ತಾರವಾಗಿದೆ. ಅಲ್ಲಿ ಪ್ರತಿ ವರ್ಷ ಅವಾರ್ಡ್​ಗಳನ್ನು ನೀಡಲಾಗುತ್ತದೆ. ಅದೇ ರೀತಿ ಕಿರುತೆರೆ ಜಗತ್ತು ಕೂಡ ವಿಸ್ತಾರವಾಗಿ ಬೆಳೆದಿದೆ.  ಇಲ್ಲಿಯೂ ಅವಾರ್ಡ್ ಫಂಕ್ಷನ್​ಗಳು ಅದ್ದೂರಿಯಾಗಿ ನಡೆಯುತ್ತವೆ. ‘ಅನುಬಂಧ’ ಅವಾರ್ಡ್ಸ್’ ಕಾರ್ಯಕ್ರಮ ಕಳೆದ 10 ವರ್ಷಗಳಿಂದ ನಡೆಯುತ್ತಾ ಬರುತ್ತಿದೆ. ಇದು 11ನೇ ವರ್ಷದ ಅನುಬಂಧ ಕಾರ್ಯಕ್ರಮ. ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುವ ಧಾರಾವಾಹಿ ಕಲಾವಿದರಿಗೆ ಇದು ಮನೆಯ ಹಬ್ಬದ ರೀತಿಯೇ. ‘ಜನ ಮೆಚ್ಚಿದ ನಟಿ’, ‘ಜನ ಮೆಚ್ಚಿದ ನಟ’ ಸೇರಿ ಅನೇಕ ಅವಾರ್ಡ್​ಗಳನ್ನು ನೀಡಲಾಗುತ್ತದೆ. ಈ ಬಾರಿಯೂ ಅದ್ದೂರಿಯಾಗಿ ‘ಅನುಬಂಧ’ ಅವಾರ್ಡ್ಸ್ ಕಾರ್ಯಕ್ರಮ ನಡೆಯುತ್ತಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಕೂಡ ‘ಅನುಬಂಧ’ ವೇದಿಕೆ ಏರಿದ್ದಾರೆ. ಅವರು ಬರುತ್ತಿದ್ದಂತೆ ಮಕ್ಕಳು ಗುಲಾಬಿ ಹೂ ಹಿಡಿದು ಮುತ್ತಿಕೊಂಡರು. ಅವರೆಲ್ಲರನ್ನೂ ಸಮಾಧಾನಪಡಿಸಿದರು ವೀರೇಂದ್ರ ಹೆಗ್ಗಡೆ. ಆ ಬಳಿಕ ಮಕ್ಕಳ ಪ್ರಶ್ನೆಗೆ ಅವರು ಉತ್ತರ ನೀಡಿದರು. ಕಲರ್ಸ್ ಕನ್ನಡದಲ್ಲಿ ನಟಿಸುತ್ತಿರುವ ತಾರೆಯರು ಸಖತ್ ಗ್ಲಾಮರಸ್ ಆಗಿ ಬಂದು ಕ್ಯಾಮೆರಾ ಎದುರು ಪೋಸ್ ಕೊಟ್ಟಿದ್ದಾರೆ. ಈ ವಿಡಿಯೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇದನ್ನೂ ಓದಿ: ಮತ್ತೆ ಬಂತು ‘ಅನುಬಂಧ ಅವಾರ್ಡ್ಸ್’; 10 ವರ್ಷಗಳ ಸಂಭ್ರಮಕ್ಕೆ ಹೆಚ್ಚಲಿದೆ ಅದ್ದೂರಿತನ

ಸೆಪ್ಟೆಂಬರ್ 20 ಶುಕ್ರವಾರ. ಅನುಬಂಧ ಅವಾರ್ಡ್​ ಹಿನ್ನೆಲೆಯಲ್ಲಿ ಯಾವುದೇ ಧಾರಾವಾಹಿಗಳು ಪ್ರಸಾರ ಕಾಣುವುದಿಲ್ಲ. ಶನಿವಾರ ಹಾಗೂ ಭಾನುವಾರ ಕೂಡ ಮನರಂಜನೆ ಮುಂದುವರಿಯಲಿದೆ. ಕನ್ನಡದ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!