AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ ಪೂರ್ತಿ ಪ್ರಸಾರ ಆಗಲಿದೆ ಕಲರ್ಸ್​ನ ನಿಮ್ಮ ಈ ನಾಲ್ಕು ಫೇವರಿಟ್ ಧಾರಾವಾಹಿ

ಕಲರ್ಸ್ ಕನ್ನಡ ವಾಹಿನಿಯು ಭಾಗ್ಯಲಕ್ಷ್ಮೀ, ಮುದ್ದು ಸೊಸೆ, ನಿನಗಾಗಿ ಮತ್ತು ಭಾರ್ಗವಿ LL.B ಧಾರಾವಾಹಿಗಳನ್ನು ಈಗ ವಾರದ ಏಳು ದಿನಗಳೂ ಪ್ರಸಾರ ಮಾಡಲು ನಿರ್ಧರಿಸಿದೆ. ಇದು ಬಾಯ್ಸ್ vs ಗರ್ಲ್ಸ್ ಕಾರ್ಯಕ್ರಮದ ಅಂತ್ಯದ ನಂತರ ತೆಗೆದುಕೊಂಡ ನಿರ್ಧಾರವಾಗಿದೆ. ಈ ಹೊಸ ವೇಳಾಪಟ್ಟಿಯಿಂದ ಧಾರಾವಾಹಿ ಪ್ರೇಮಿಗಳಿಗೆ ಒಳ್ಳೆಯ ಸುದ್ದಿಯಾಗಿದೆ.

ವಾರ ಪೂರ್ತಿ ಪ್ರಸಾರ ಆಗಲಿದೆ ಕಲರ್ಸ್​ನ ನಿಮ್ಮ ಈ ನಾಲ್ಕು ಫೇವರಿಟ್ ಧಾರಾವಾಹಿ
ಕಲರ್ಸ್ ಧಾರಾವಾಹಿ
ರಾಜೇಶ್ ದುಗ್ಗುಮನೆ
|

Updated on: Apr 30, 2025 | 11:54 AM

Share

ಸಾಮಾನ್ಯವಾಗಿ ಧಾರಾವಾಹಿಗಳು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಪ್ರಸಾರ ಕಾಣುತ್ತವೆ. ವೀಕೆಂಡ್​ನಲ್ಲಿ ಧಾರಾವಾಹಿಗಳಿಗೆ ರೆಸ್ಟ್ ನೀಡಿ, ರಿಯಾಲಿಟಿ ಶೋಗಳನ್ನು ಪ್ರಸಾರ ಮಾಡಲಾಗುತ್ತದೆ. ಆದರೆ, ಕಲರ್ಸ್ ಕನ್ನಡ ಈ ವಾರದಿಂದ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಉತ್ತಮ ಟಿಆರ್​ಪಿ (TRP) ಹೊಂದಿರೋ ನಾಲ್ಕು ಧಾರಾವಾಹಿಗಳನ್ನು ವಾರದ ಏಳೂ ದಿನ ಪ್ರಸಾರ ಮಾಡಲು ನಿರ್ಧರಿಸಿದೆ. ಅದಕ್ಕೆ ಕಾರಣ ಕೂಡ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಕಲರ್ಸ್ ಕನ್ನಡದಲ್ಲಿ ಇಷ್ಟು ದಿನ ಎಲ್ಲಾ ಧಾರಾವಾಹಿಗಳು ಸೋಮವಾರದಿಂದ ಶುಕ್ರವಾರದವರೆಗೆ ಪ್ರಸಾರ ಕಾಣುತ್ತಿದ್ದವು. ವೀಕೆಂಡ್​ನಲ್ಲಿ ‘ಬಾಯ್ಸ್ vs ಗರ್ಲ್ಸ್’ ಹಾಗೂ ‘ಮಜಾ ಟಾಕೀಸ್’ ಶೋ ಪ್ರಸಾರ ಕಾಣುತ್ತಿತ್ತು. ಕಳೆದ ವಾರ ‘ಬಾಯ್ಸ್ vs ಗರ್ಲ್ಸ್’ ಶೋ ಪೂರ್ಣಗೊಂಡಿದೆ. ಈ ಶೋ ನಲ್ಲಿ ಬಾಯ್ಸ್ ತಂಡ ಗೆಲುವು ಕಂಡಿದೆ. ಈ ಅವಧಿಯಲ್ಲಿ ಈಗ ಪ್ರಸಾರ ಮಾಡಲು ಬೇರೆ ಯಾವುದೇ ಶೋನ ಪ್ಲ್ಯಾನ್ ನಡೆದಿಲ್ಲ. ಈ ಕಾರಣಕ್ಕೆ ಆ ಅವಧಿಯಲ್ಲಿ ಧಾರಾವಾಹಿಗಳು ಪ್ರಸಾರ ಕಾಣಲಿವೆ.

ಇದನ್ನೂ ಓದಿ
Image
‘ಒಡಹುಟ್ಟಿದವರು’ ಮಾಡಲು ರಾಜ್​ಕುಮಾರ್​ಗೆ ಎರಡು ಷರತ್ತು ಹಾಕಿದ್ದ ಅಂಬರೀಷ್
Image
ತಮನ್ನಾ ಹಾಟ್ ಅವತಾರಕ್ಕೆ ಬದಲಾಯ್ತು ‘ರೇಡ್ 2’ ಸೆನ್ಸಾರ್ ಪ್ರಮಾಣಪತ್ರ?  
Image
ಸಂಧ್ಯಾ ಥಿಯೇಟರ್ ಕಾಲ್ತುಳಿತ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೀತೇಜ್
Image
‘ಬಾಹುಬಲಿ 2’ ಚಿತ್ರಕ್ಕೆ 8 ವರ್ಷ; ರೀ-ರಿಲೀಸ್ ದಿನಾಂಕ ಘೋಷಣೆ

ಇದನ್ನೂ ಓದಿ: ಕಲರ್ಸ್ ಕನ್ನಡ ತೊರೆದ ನಿರಂಜನ್ ದೇಶ್​ಪಾಂಡೆ 

ಹಾಗಾದರೆ ಯಾವುದು ಆ ನಾಲ್ಕು ಧಾರಾವಾಹಿಗಳು? ಅದಕ್ಕೂ ಉತ್ತರ ಇದೆ. ಸಂಜೆ 7 ಗಂಟೆಗೆ ‘ಭಾಗ್ಯಲಕ್ಷ್ಮೀ’ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಶನಿವಾರ ಹಾಗೂ ಭಾನುವಾರವರೂ ಇರಲಿದೆ. ಅದೇ ರೀತಿ ತ್ರಿವಿಕ್ರಂ ನಟನೆಯ ‘ಮುದ್ದು ಸೊಸೆ’, ದಿವ್ಯಾ ಉರುಡುಗ ಮುಖ್ಯ ಭೂಮಿಕೆಯಲ್ಲಿರೋ ‘ನಿನಗಾಗಿ’ (8 ಗಂಟೆ)ಮತ್ತು 8.30ಕ್ಕೆ ಪ್ರಸಾರ ಆಗೋ ‘ಭಾರ್ಗವಿ LL.B’ ಧಾರಾವಾಹಿಗಳು ವಾರದ ಏಳೂ ದಿನ ಪ್ರಸಾರ ಕಾಣಲಿದೆ. 9 ಗಂಟೆಗೆ ವೀಕೆಂಡ್​ನಲ್ಲಿ ಎಂದಿನಂತೆ ‘ಮಜಾ ಟಾಕೀಸ್’ ಪ್ರಸಾರ ಕಾಣಲಿದೆ.

ಬಿಗ್ ಬಾಸ್ ಪೂರ್ಣಗೊಂಡ ಬಳಿಕ ‘ಬಾಯ್ಸ್ vs ಗರ್ಲ್ಸ್’ ಹಾಗೂ ‘ಮಜಾ ಟಾಕೀಸ್’ ಪ್ರಸಾರ ಆರಂಭಿಸಿದವು. ಆದರೆ, ಈಗ ‘ಬಾಯ್ಸ್ vs ಗರ್ಲ್ಸ್’ ಶೋ ಪೂರ್ಣಗೊಂಡಿದೆ. ಈ ಸ್ಥಾನಕ್ಕೆ ಬೇರೆ ಶೋ ಬರೋವರೆಗೆ ಈ ಧಾರಾವಾಹಿಗಳು ಪ್ರಸಾರ ಕಾಣಲಿವೆ ಎನ್ನಲಾಗುತ್ತಿದೆ. ಸದ್ಯ ರಿಯಾಲಿಟಿ ಶೋಗಳನ್ನು ಇಷ್ಟಪಡದೇ ಕೇವಲ ಧಾರಾವಾಹಿಗಳನ್ನು ಮಾತ್ರ ವೀಕ್ಷಿಸೋರಿಗೆ ಇದು ಒಂದೊಳ್ಳೆಯ ಸುದ್ದಿ ಎಂದೇ ಹೇಳಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ