AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ಒಲವಿನ ನಿಲ್ದಾಣ’; ವಾಸುಕಿ ಹಾಡಿದ ಟೈಟಲ್​ ಗೀತೆಗೆ ವೀಕ್ಷಕರು ಫಿದಾ

‘ಒಲವಿನ ನಿಲ್ದಾಣ’ ಧಾರಾವಾಹಿಯಲ್ಲಿ ಅಕ್ಷಯ್ ನಾಯಕ್​ ಹಾಗೂ ಅಮಿತಾ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಸಿದ್ಧಾಂತ್ ಪಾತ್ರದಲ್ಲಿ ಅಕ್ಷಯ್ ನಾಯಕ್​ ಕಾಣಿಸಿಕೊಂಡರೆ, ಅಮಿತಾ ಅವರು ತಾರಿಣಿ ಪಾತ್ರ ನಿರ್ವಹಿಸುತ್ತಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ಒಲವಿನ ನಿಲ್ದಾಣ’; ವಾಸುಕಿ ಹಾಡಿದ ಟೈಟಲ್​ ಗೀತೆಗೆ ವೀಕ್ಷಕರು ಫಿದಾ
ಒಲವಿನ ನಿಲ್ದಾಣ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 06, 2022 | 4:46 PM

Share

ಸಿನಿಮಾ ರಂಗದಂತೆ ಕಿರುತೆರೆ ಲೋಕದಲ್ಲೂ ದೊಡ್ಡ ಸ್ಪರ್ಧೆ ಇದೆ. ಎಲ್ಲಾ ವಾಹಿನಿಗಳು ಭಿನ್ನ ಕಥಾಹಂದರದ ಧಾರಾವಾಹಿಗಳ ಮೂಲಕ ಪ್ರೇಕ್ಷಕರ ಎದುರು ಬರಲು ಪ್ರಯತ್ನಿಸುತ್ತಿವೆ. ಅದ್ದೂರಿಯಾಗಿ ಧಾರಾವಾಹಿಗಳನ್ನು ನಿರ್ಮಾಣ ಮಾಡಲು ವಾಹಿನಿಯವರು ಆದ್ಯತೆ ನೀಡುತ್ತಾರೆ. ಈಗ ಕಲರ್ಸ್ ಕನ್ನಡ (Colors Kannada) ವಾಹಿನಿಯಲ್ಲಿ ‘ಒಲವಿನ ನಿಲ್ದಾಣ’ (Olavina Nildana Serial) ಹೆಸರಿನ ಧಾರಾವಾಹಿ ಪ್ರಸಾರ ಕಾಣಲು ರೆಡಿ ಆಗಿದೆ. ಈ ಧಾರಾವಾಹಿಯ ಪ್ರೋಮೋಗಳನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ‘ಒಲವಿನ ನಿಲ್ದಾಣ’ ಧಾರಾವಾಹಿಯ ಶೀರ್ಷಿಕೆ ಗೀತೆ ವಾಸುಕಿ ವೈಭವ್ (Vasuki Vaibhav) ಕಂಠದಲ್ಲಿ ಮೂಡಿ ಬಂದಿದ್ದು ಸಾಕಷ್ಟು ಗಮನ ಸೆಳೆಯುತ್ತಿದೆ.

‘ಒಲವಿನ ನಿಲ್ದಾಣ’ ಧಾರಾವಾಹಿಯಲ್ಲಿ ಅಕ್ಷಯ್ ನಾಯಕ್​ ಹಾಗೂ ಅಮಿತಾ ಸದಾಶಿವ್ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಸಿದ್ಧಾಂತ್ ಪಾತ್ರದಲ್ಲಿ ಅಕ್ಷಯ್ ನಾಯಕ್​ ಕಾಣಿಸಿಕೊಂಡರೆ, ಅಮಿತಾ ಅವರು ತಾರಿಣಿ ಪಾತ್ರ ನಿರ್ವಹಿಸುತ್ತಿದ್ದಾರೆ. ಅಮಿತಾ ಅವರು ಈಗಾಗಲೇ ಸಿನಿಮಾಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲೂ ಒಂದು ಧಾರಾವಾಹಿಯಲ್ಲಿ ನಟಿಸಿದ ಅನುಭವ ಅವರಿಗೆ ಇದೆ. ಈಗ ‘ಒಲವಿನ ನಿಲ್ದಾಣ’ ಧಾರಾವಾಹಿ ಮೂಲಕ ಅವರು ಕನ್ನಡ ಕಿರತೆರೆ ಪ್ರೇಕ್ಷಕರಿಗೆ ಪರಿಚಯಗೊಳ್ಳುತ್ತಿದ್ದಾರೆ. ಅಕ್ಷಯ್ ಕೂಡ ಕಿರುತೆರೆಯಲ್ಲಿ ನಟಿಸಿದ ಅನುಭವ ಹೊಂದಿದ್ದಾರೆ.

ಇದನ್ನೂ ಓದಿ
Image
Kiran Raj: ‘ಕನ್ನಡತಿ’ ಸೀರಿಯಲ್ ನಟ​ ಕಿರಣ್​ ರಾಜ್​ ಹುಟ್ಟುಹಬ್ಬಕ್ಕೆ ಹರಿದುಬಂತು ಶುಭಾಶಯಗಳ ಮಹಾಪೂರ
Image
ಪುನೀತ್​ ನಿರ್ಮಾಣದ ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರದಲ್ಲಿ ವಾಸುಕಿ ವೈಭವ್; ಏನಿದು ಗುಡ್​ ನ್ಯೂಸ್​?
Image
ಗುರುಶಿಷ್ಯರಿಗೆ ಕೊನೆಗೂ ಸಿಕ್ಕಳು ನಾಯಕಿ; ಹಳ್ಳಿ ಹುಡುಗಿ ಲುಕ್​ನಲ್ಲಿ ನಿಶ್ವಿಕಾ ನಾಯ್ಡು ಮಿಂಚಿಂಗ್ ​

ಧಾರಾವಾಹಿ ಕಥೆ ಏನು ಎಂಬ ಬಗ್ಗೆ ಅಮಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಇದು ಒಂದು ಪ್ರೇಮಕಥೆ. ಇದು ಈಗಿನ ಜನರೇಷನ್ ಕಥೆ. ಕಥಾ ನಾಯಕಿ ಸದಾ ಕನಸು ಕಾಣುವ ಹುಡುಗಿ. ತನ್ನ ಹುಡುಗನ ಬಗ್ಗೆ ಆಕೆ ಒಂದಷ್ಟು ಕನಸು ಕಂಡಿರುತ್ತಾಳೆ. ಕಥಾ ನಾಯಕ ಸದಾ ಪ್ರಾಕ್ಟಿಕಲ್ ಆಗಿ ನಡೆದುಕೊಳ್ಳುವ ಹುಡುಗ. ಆತ ಕುಟುಂಬ ಜವಾಬ್ದಾರಿ ನಿರ್ವಹಿಸುತ್ತಾ, ದುಡ್ಡು ಮಾಡಬೇಕು ಎಂಬ ಗುರಿ ಹೊಂದಿರುತ್ತಾನೆ. ಬೆಂಗಳೂರಿನಿಂದ ತೀರ್ಥಹಳ್ಳಿ ಹೋಗುವ ಬಸ್​ನಲ್ಲಿ ಇವರ ಇಬ್ಬರ ಮಧ್ಯೆ ಅಚಾನಕ್ಕಾಗಿ ಲವ್ ಆಗುತ್ತದೆ. ನಂತರ ಏನಾಗುತ್ತದೆ ಎಂಬುದು ಧಾರಾವಾಹಿಯ ಕಥೆ’ ಎಂದು ಮಾಹಿತಿ ಹಂಚಿಕೊಳ್ಳುತ್ತಾರೆ ಅಮಿತಾ.

ಶ್ರುತಿ ನಾಯ್ಡು ಪ್ರೊಡಕ್ಷನ್ ಮೂಲಕ ‘ಒಲವಿನ ನಿಲ್ದಾಣ’ ಧಾರಾವಾಹಿ ಮೂಡಿ ಬರುತ್ತಿದ್ದು, ರಮೇಶ್ ಇಂದಿರ ಅವರು ನಿರ್ದೇಶನ ಮಾಡುತ್ತಿದ್ದಾರೆ. ಜುಲೈ 6ರಿಂದ ಈ ಧಾರಾವಾಹಿ ಸಂಜೆ 6 ಗಂಟೆಗೆ ಪ್ರಸಾರ ಕಾಣಲಿದೆ. ಮಂಡ್ಯ ರಮೇಶ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ವಾಸುಕಿ ವೈಭವ್ ಅವರು ಹಾಡಿದ ಟೈಟಲ್ ಹಾಡಿಗೆ ಈಗಾಗಲೇ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಹಾಡನ್ನು ಕೇಳಿ ವೀಕ್ಷಕರು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: Kiran Raj: ‘ಕನ್ನಡತಿ’ ಸೀರಿಯಲ್ ನಟ​ ಕಿರಣ್​ ರಾಜ್​ ಹುಟ್ಟುಹಬ್ಬಕ್ಕೆ ಹರಿದುಬಂತು ಶುಭಾಶಯಗಳ ಮಹಾಪೂರ

Megha Shetty: ಕಲರ್ಸ್​ ಕನ್ನಡದಲ್ಲಿ ಹೊಸ ಪ್ರಯತ್ನಕ್ಕೆ ಮುಂದಾದ ನಟಿ ಮೇಘಾ ಶೆಟ್ಟಿ

Published On - 4:38 pm, Wed, 6 July 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ