AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲರ್ಸ್ ಕನ್ನಡದಲ್ಲಿ ‘ಕ್ವಾಟ್ಲೆ ಕಿಚನ್’ ರಿಯಾಲಿಟಿ ಶೋ; ಏನು ಇದರ ವಿಶೇಷ?

‘ಕ್ವಾಟ್ಲೆ ಕಿಚನ್’ ಕಾರ್ಯಕ್ರಮಕ್ಕೆ ನಟಿ ಶ್ರುತಿ ಮತ್ತು ಪ್ರಸಿದ್ಧ ಶೆಫ್ ಕೌಶಿಕ್ ಅವರು ತೀರ್ಪುಗಾರರಾಗಿದ್ದಾರೆ. ಅಡುಗೆ ಮತ್ತು ತಮಾಷೆಯ ಜಗಲ್​ಬಂದಿ ಈ ಶೋನಲ್ಲಿ ಇರಲಿದೆ. ಅನುಪಮಾ ಗೌಡ ಮತ್ತು ಕುರಿ ಪ್ರತಾಪ್‌ ಅವರು ಈ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಕಲರ್ಸ್ ಕನ್ನಡದಲ್ಲಿ ‘ಕ್ವಾಟ್ಲೆ ಕಿಚನ್’ ರಿಯಾಲಿಟಿ ಶೋ; ಏನು ಇದರ ವಿಶೇಷ?
Shruti, Kuri Prathap, Anupama Gowda, Koushik
ಮದನ್​ ಕುಮಾರ್​
|

Updated on: Jun 15, 2025 | 11:04 AM

Share

ಹಲವು ಬಗೆಯ ರಿಯಾಲಿಟಿ ಶೋಗಳ (Reality Show) ಮೂಲಕ ‘ಕಲರ್ಸ್ ಕನ್ನಡ’ ವಾಹಿನಿ ಮನರಂಜನೆ ನೀಡುತ್ತಿದೆ. ಈಗ ಒಂದು ಹೊಸ ರಿಯಾಲಿಟಿ ಶೋ ಪ್ರಸಾರ ಆಗುತ್ತಿದೆ. ‘ಕ್ವಾಟ್ಲೆ ಕಿಚನ್’ (Kwatle Kitchen) ಎಂಬುದು ಈ ರಿಯಾಲಿಟಿ ಶೋ ಹೆಸರು. ಹೆಸರೇ ಸೂಚಿಸುತ್ತಿರುವಂತೆ ಇದು ಪಕ್ಕಾ ಕಾಮಿಡಿ ಕುಕ್ಕಿಂಗ್ ಶೋ. ಜೂನ್‌ 14ರಿಂದ ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9 ಗಂಟೆಗೆ ‘ಕ್ವಾಟ್ಲೆ ಕಿಚನ್’ ಪ್ರಸಾರ ಆಗುತ್ತಿದೆ. ‘ನನ್ನಮ್ಮ ಸೂಪರ್‌ ಸ್ಟಾರ್‌’, ‘ರಾಜ ರಾಣಿ’, ‘ಗಿಚ್ಚಿ ಗಿಲಿಗಿಲಿ’, ‘ಬಿಗ್ ಬಾಸ್’ ಮುಂತಾದ ಟಾಪ್ ರೇಟಿಂಗ್ ಕಾರ್ಯಕ್ರಮಗಳನ್ನು ನೀಡಿರುವ ‘ಕಲರ್ಸ್ ಕನ್ನಡ’ (Colors Kannada) ವಾಹಿನಿಯು ಈಗ ‘ಕ್ವಾಟ್ಲೆ ಕಿಚನ್’ ಮೂಲಕ ಜನರನ್ನು ರಂಜಿಸುತ್ತಿದೆ.

ಕಿರುತೆರೆಯಲ್ಲಿ ಈಗಾಗಲೇ ಅಡುಗೆಗೆ ಸಂಬಂಧಿಸಿದ ಶೋಗಳನ್ನು ಜನರು ನೋಡಿದ್ದಾರೆ. ಆದರೆ ‘ಕ್ವಾಟ್ಲೆ ಕಿಚನ್’ ಸಂಪೂರ್ಣ ಭಿನ್ನವಾಗಿ ಇರಲಿದೆ. ಇದು ನೂರಕ್ಕೆ ನೂರು ಕಾಮಿಡಿ ಕುಕ್ಕಿಂಗ್ ಶೋ ಎಂದು ವಾಹಿನಿ ಹೇಳಿದೆ. ಅಡುಗೆಯ ಜತೆಗೆ ನಗುವಿನ ಔತಣ ಉಣಬಡಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿದ್ದು, ಇದರಲ್ಲಿ ಜೋಡಿಗಳ ಜೊತೆಯಾಟ ಇರುತ್ತದೆ.

ಟ್ವಿಸ್ಟ್ ಏನೆಂದರೆ, ಈ ಜೋಡಿಯಲ್ಲಿ ಒಬ್ಬರಿಗೆ ಅಡುಗೆ ಬರುತ್ತದೆ, ಮತ್ತೊಬ್ಬರಿಗೆ ಪಾಕಶಾಸ್ತ್ರದ ಅಆಇಈ ಸಹ ತಿಳಿದಿರುವುದಿಲ್ಲ! ಐವರು ನಳಪಾಕ ಪ್ರವೀಣರಿಗೆ ಸಹಾಯಕರಾಗಿ ಮತ್ತೈದು ನಗೆಪಾಕ ಪ್ರವೀಣರು ಇರುತ್ತಾರೆ. ಕುಕ್ ಹಾಗೂ ಕ್ವಾಟ್ಲೆಗಳು ಸೇರಿ ಅಡುಗೆ ಮಾಡುವಾಗ ಹುಟ್ಟುವ ತಮಾಷೆಯೇ ಈ ಕಾರ್ಯಕ್ರಮದ ಹೈಲಟ್.

ಇದನ್ನೂ ಓದಿ
Image
50 ಲಕ್ಷದಲ್ಲಿ ಹನುಮಂತಗೆ ಸಿಗೋ ಹಣ ಎಷ್ಟು? ಕಟ್ ಆಗೋ ತೆರಿಗೆ ಎಷ್ಟು?
Image
ಹನುಮಂತ ಬಿಗ್ ಬಾಸ್ ವಿನ್ನರ್; ಜವಾರಿ ಹುಡುಗನಿಗೆ ಒಲಿದ ಕಪ್
Image
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
Image
BBK 11 Elimination: ಹೋಗಿ ಬಾ ಮಗಳೇ; ಐಶ್ವರ್ಯಾಗೆ ಬಿಗ್ ಬಾಸ್ ಭಾವುಕ ಮಾತು

ಬಹಳ ಬೇಗ ಅಡುಗೆ ಮಾಡಿ ಮುಗಿಸಲು ಹೊರಟ ಪಾಕಪ್ರವೀಣರಿಗೆ ಕ್ವಾಟ್ಲೆ ಸಹಾಯಕರು ಅಡ್ಡಗಾಲಾಗಿ ನಿಲ್ಲುತ್ತಾರೆ. ಟಾರ್ಚರ್‌ ಕೊಡಲೆಂದೇ ಬಂದ ಕ್ವಾಟ್ಲೆಗಳು ಸ್ವತಃ ಜೋಕರ್‌ಗಳಾಗುವ ಪ್ರಸಂಗ ಕೂಡ ಇರುತ್ತದೆ. ಇಲ್ಲಿ ಇನ್ನೊಂದು ವಿಶೇಷತೆ ಇದೆ. ಈ ಶೋನಲ್ಲಿ ಕುಕ್‌ಗಳು ಎಲಿಮಿನೇಟ್ ಆಗುತ್ತಾರೆ. ಆದರೆ ಕ್ವಾಟ್ಲೆಗಳು ಎಲಿಮಿನೇಟ್ ಆಗುವುದಿಲ್ಲ.

‘ಕ್ವಾಟ್ಲೆ ಕಿಚನ್’ ಶೋನಲ್ಲಿ ಪ್ರತಿ ವಾರವೂ ಕುಕ್‌ ಮತ್ತು ಕ್ವಾಟ್ಲೆಗಳ ಜೋಡಿ ಬದಲಾಗುತ್ತದೆ. ಒಳ್ಳೆಯ ಸಹಾಯಕ ಬರಲಿ ಎಂದು ಕಾಯುತ್ತಿರುವ ಕುಕ್‌ಗಳಿಗೆ ಬೆಳ್ಳುಳ್ಳಿ ಹಾಗೂ ಈರುಳ್ಳಿಯ ನಡುವೆ ವ್ಯತ್ಯಾಸ ಕೂಡ ಗೊತ್ತಿರದ ಕ್ವಾಟ್ಲೆ ಸಹಾಯಕರು ಸಿಗುತ್ತಾರೆ. ಇದರಿಂದ ಉಂಟಾಗುವ ಕಾಮಿಡಿಯಿಂದ ವೀಕ್ಷಕರಿಗೆ ಸಖತ್ ಮನರಂಜನೆ ಸಿಗುತ್ತದೆ. ನಟಿ ಶ್ರುತಿ ಮತ್ತು ಶೆಫ್ ಕೌಶಿಕ್ ಅವರು ‘ಕ್ವಾಟ್ಲೆ ಕಿಚನ್’ ತೀರ್ಪುಗಾರರಾಗಿರುತ್ತಾರೆ. ಈ ಕಾರ್ಯಕ್ರಮವನ್ನು ಅನುಪಮಾ ಗೌಡ ಹಾಗೂ ಕುರಿ ಪ್ರತಾಪ್‌ ಅವರು ನಡೆಸಿಕೊಡುತ್ತಿದ್ದಾರೆ.

ಇದನ್ನೂ ಓದಿ: ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಎರಡು ಜನಪ್ರಿಯ ಧಾರಾವಾಹಿಗಳು; ಟಾಪ್ 5 ಸೀರಿಯಲ್ ಲಿಸ್ಟ್ ಇಲ್ಲಿದೆ

ಬೆಳ್ಳುಳ್ಳಿ ಕಬಾಬ್ ಚಂದ್ರು, ದಿಲೀಪ್ ಶೆಟ್ಟಿ, ಆರ್.ಕೆ. ಚಂದನ್, ರಾಘವೇಂದ್ರ, ಕೆಂಪಮ್ಮ, ಕಾವ್ಯ ಗೌಡ, ಪ್ರೇರಣ ಕಂಬಮ್, ಶಿಲ್ಪಾ ಕಾಮತ್, ಸೋನಿಯಾ ಪೊನ್ನಮ್ಮ, ಶರ್ಮಿತಾ ಗೌಡ ಅವರು ಈ ಕಾರ್ಯಕ್ರಮದಲ್ಲಿ ಕುಕ್‌ಗಳಾಗಿ ಭಾಗವಸುತ್ತಿದ್ದಾರೆ. ಲ್ಯಾಗ್ ಮಂಜು, ತುಕಾಲಿ ಸಂತೋಷ್, ಧನರಾಜ್ ಆಚಾರ್, ನಿವೇದಿತಾ ಗೌಡ, ಸೂರಜ್, ಪ್ರಶಾಂತ್, ಗಿಲ್ಲಿ ನಟ, ವಾಣಿ ಗೌಡ, ಸೋನಿ ಮುಲೆವ, ದಿಶಾ ಉಮೇಶ್ ಅವರು ಕ್ವಾಟ್ಲೆ ಕೊಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!